ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಕಬ್ಬು ಬೆಳೆಗಾರರ ನಿರ್ಲಕ್ಷಿಸುವುದು ಸರ್ಕಾರದ ರೈತ ವಿರೋಧಿ ಧೋರಣೆ ತೋರಿಸುತ್ತದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ರಾಜ್ಯ ಸರ್ಕಾರ ರೈತರ ಸಂಕಷ್ಟವನ್ನು ಪರಿಹರಿಸುವ ಬದಲು ರಾಜಕೀಯ ಮಾಡುತ್ತಿದೆ. ಇದು ಆಡಳಿತವಲ್ಲ, ಇದು ರೈತರಿಗೆ ಮಾಡಿದ ದ್ರೋಹ.

ಬೆಂಗಳೂರು: ರೈತರ ಪ್ರತಿಭಟನೆಗಳನ್ನು ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ದಿಶಾ ಸಭೆಗಾಗಿ ಮಂಡ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನ್ಯಾಯಯುತ ಬೆಲೆಗಾಗಿ ರೈತರು ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತಿರದ ಪ್ರದೇಶದಲ್ಲಿಯೇ ಇದ್ದರು ರೈತರನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು.

ಇದೇ ವೇಳೆ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಅಧಿಕಾರಾವಧಿಯನ್ನು ಸ್ಮರಿಸಿದ ಅವರು, ಕಬ್ಬು ಮಾರಾಟವಾಗದೆ ಉಳಿದಿದ್ದಾಗ, ನಾನು 25,000 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಅಲ್ಲದೆ, ರೈತರಿಗೆ 250 ಕೋಟಿ ರೂ. ರೈತರಿಗೆ ಸಹಾಯ ಮಾಡಿದ್ದೆ. ವೈಯಕ್ತಿಕವಾಗಿ ಬೆಳೆಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಚರ್ಚಿಸಿದ್ದೆ. ಇಂದು, ಸರ್ಕಾರ ಕೇಂದ್ರ ಸರ್ಕಾರ ಬೆಲೆಗಳನ್ನು ನಿರ್ಧರಿಸಬೇಕು ಎಂದು ಹೇಳುತ್ತಿದೆ. ಆದರೆ ನಾನು ಕ್ರಮ ಕೈಗೊಂಡಾಗ, ಅನುಮತಿಗಾಗಿ ದೆಹಲಿಗೆ ಹೋಗಿರಲಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತರ ಸಂಕಷ್ಟವನ್ನು ಪರಿಹರಿಸುವ ಬದಲು ರಾಜಕೀಯ ಮಾಡುತ್ತಿದೆ. ಇದು ಆಡಳಿತವಲ್ಲ, ಇದು ರೈತರಿಗೆ ಮಾಡಿದ ದ್ರೋಹ. ಸರ್ಕಾರದ ನಿರ್ಧಾರಗಳನ್ನು ಪರಿಶೀಲಿಸಿದ ನಂತರ ನಾವು ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆಂದು ತಿಳಿಸಿದರು.

ಬಳಿಕ ಬಿಡದಿ ಟೌನ್‌ಶಿಪ್ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ ಅವರು, ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುವಲ್ಲಿ ರೈತರೊಂದಿಗೆ ದೃಢವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ರಾಜ್ಯ ಸರ್ಕಾರ ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಲೂಟಿ ಮಾಡಲು ಪ್ರಯತ್ನಿಸುತ್ತಿದೆ. ರೈತರು ಭಯಪಡಬಾರದು, ನಿಮ್ಮ ಒಂದು ಇಂಚು ಭೂಮಿಯನ್ನೂ ಕೂಡ ಸರ್ಕಾರಕ್ಕೆ ನೀಡದಿರಿ. ನಾನು ನಿಮ್ಮೊಂದಿಗಿದ್ದೇನೆ ಎಂದು ಭರವಸೆ ನೀಡಿದರು.

ಕಳೆದ ಎರಡು ತಿಂಗಳಿನಿಂದ ರೈತರು ಈ ಯೋಜನೆಯ ವಿರುದ್ಧ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಅವರ ಮನವಿಗಳನ್ನು ಕೇಳುವ ಬದಲು,ರಿಯಲ್ ಎಸ್ಟೇಟ್ ಸಿಂಡಿಕೇಟ್‌ಗಳನ್ನು ಮೆಚ್ಚಿಸಲು ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಈ ಯೋಜನೆಯನ್ನು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೂಪಿಸಲಾಗಿತ್ತು ಎಂಬ ಹೇಳಿಕೆಯನ್ನು ನಿರಾಕರಿಸಿದ ಕುಮಾರಸ್ವಾಮಿ, ನನ್ನ ಹೆಸರಿನ್ನು ಬಳಸದಿರಿ. ಆಗ ನಾನು ತೆಗೆದುಕೊಂಡ ನಿರ್ಧಾರ ಬೇರೆಯಾಗಿತ್ತು, ಭೂಮಿಯ ಬೆಲೆಗಳು ತುಂಬಾ ಕಡಿಮೆಯಾಗಿದ್ದವು. ಇಂದು, ಬಿಡದಿಯಲ್ಲಿ ಭೂಮಿಯ ಬೆಲೆ ಹೆಚ್ಚಾಗಿದೆ. ಆದರೆ ಸರ್ಕಾರವು 9,000 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುತ್ತಿದೆ. ಈ ಕ್ರಮವನ್ನು ವಿರೋಧಿಸುವ ರೈತರೊಂದಿಗೆ ನಾನು ನಿಲ್ಲುತ್ತೇನೆಂದು ಸ್ಪಷ್ಟಪಡಿಸಿದರು.

ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟೀಕಿಸಿದ ಅವರು, ಶಿವಕುಮಾರ್ ಸ್ವತಃ ಸಚಿವರಾಗಿದ್ದಾಗ ದಂಡ ವಿಧಿಸಿದ್ದನ್ನು ಸ್ಮರಿಸಿದರು.

ನಂತರ ಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿದ ಕುಮಾರಸ್ವಾಮಿ ಅವರು, "ಕನಕಪುರದಲ್ಲಿ ಒಣ ಭೂಮಿ ಲಭ್ಯವಿದ್ದರೆ, ಅಲ್ಲಿನ ಪಟ್ಟಣವನ್ನು ಏಕೆ ಅಭಿವೃದ್ಧಿಪಡಿಸಬಾರದು? ನಿಮ್ಮ ಅಧಿಕಾರಿಗಳೇ ಕನಕಪುರದಲ್ಲಿ ಸಾಕಷ್ಟು ಒಣ ಭೂಮಿ ಇದೆ ಎಂದು ಹೇಳಿದ್ದಾರೆ. ಬಿಡದಿಯಲ್ಲಿ ಫಲವತ್ತಾದ ಕೃಷಿ ಭೂಮಿಯನ್ನೇಕೆ ಬಳಸಬೇಕು? ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರವು ದುರುದ್ದೇಶಪೂರಿತ ಉದ್ದೇಶಗಳನ್ನು ಹೊಂದಿದೆ. ಈ ಯೋಜನೆಯು ಬಿಡದಿಯ ಜನರನ್ನು ಉನ್ನತೀಕರಿಸುವ ಉದ್ದೇಶವನ್ನು ಹೊಂದಿಲ್ಲ; ಇದು ಅಧಿಕಾರದಲ್ಲಿರುವ ಕೆಲವರಿಗೆ ಪ್ರಯೋಜನವನ್ನು ನೀಡುವ ಉದ್ದೇಶವನ್ನು ಹೊಂದಿದೆ. ರೈತರಿಗೆ ಸರಿಯಾಗಿ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೊರೆ ಹೊತ್ತುಕೊಳ್ಳಬೇಡಿ, ನಿಮ್ಮ ಮಗನದ್ದು ತಪ್ಪು ಎಂದರೆ ಭಾರತದಲ್ಲಿ ಯಾರೂ ನಂಬುವುದಿಲ್ಲ'; Air India ಪೈಲಟ್ ತಂದೆಗೆ 'ಸುಪ್ರೀಂ' ಸಾಂತ್ವನ

'ವಂದೇ ಮಾತರಂ' ಭಾರತೀಯರಲ್ಲಿ ಹೊಸ ಚೈತನ್ಯ ತುಂಬುತ್ತದೆ: 150ನೇ ವಾರ್ಷಿಕೋತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ

ಏರದ ದರ, ನಿಲ್ಲದ ಕಬ್ಬು ಸಮರ: ಸಚಿವ ಶಿವಾನಂದ್ ಪಾಟೀಲ್ ಮನವಿಗೂ ಜಗ್ಗದ ರೈತರು, 3,500 ದರ ಘೋಷಿಸದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದು ಪಟ್ಟು

ಬಿಹಾರ ಪ್ರಚಾರದ ಕಣದಲ್ಲಿ ಜಂಗಲ್‌ ರಾಜ್‌, ವಲಸೆಯದ್ದೇ ಚರ್ಚೆ (ನೇರ ನೋಟ)

ಬಿಹಾರದಲ್ಲೂ ಮತಗಳ್ಳತನ: ರಕ್ಷಿಸುವ ಹೊಣೆ ಹೊತ್ತವರಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ; ರಾಹುಲ್ ಗಾಂಧಿ ಆರೋಪ

SCROLL FOR NEXT