ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯ ಭೇಟಿಗೆ ಸಮಯ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರಾಕರಣೆ

ಈಮಧ್ಯೆ, ಸಿದ್ದರಾಮಯ್ಯ ಅವರ ಪಾಳಯದಲ್ಲಿ ಗುರುತಿಸಿಕೊಂಡಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗೆ ಬೆಂಬಲ ಸೂಚಿಸುವ ಶಾಸಕರು ಮತ್ತು ಸಚಿವರಿಗಾಗಿ ದೆಹಲಿಯಲ್ಲಿ ಭೋಜನ ಕೂಟವನ್ನು ಆಯೋಜಿಸಿದ್ದಾರೆ.

ನವೆಂಬರ್ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದು, ಅದಕ್ಕೆ ಮುಂಚಿತವಾಗಿ ಯಾವುದೇ ನಾಯಕರೊಂದಿಗೆ ಸಭೆ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಪಕ್ಷದ ಹೈಕಮಾಂಡ್ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ. ಈ ನಿರ್ದೇಶನವು ಕರ್ನಾಟಕದ ಎಲ್ಲ ನಾಯಕರಿಗೆ ಅನ್ವಯಿಸಲಿದ್ದು, ಸದ್ಯಕ್ಕೆ ದೆಹಲಿಯಲ್ಲಿ ತಮ್ಮ ಭೇಟಿಗೆ ಸಮಯ ಕೇಳದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣಿಸಿದ ವೇಳೆ, ಹಿರಿಯ ನಾಯಕರೊಂದಿಗೆ ಭೇಟಿಗೆ ಸಮಯ ಕೋರಿದ್ದಾರೆ. ಆದಾಗ್ಯೂ, ಹೈಕಮಾಂಡ್ ಮಾತುಕತೆಯ 'ಅಗತ್ಯವಿಲ್ಲ' ಮತ್ತು ಈ ಹಂತದಲ್ಲಿ ಯಾವುದೇ ನಾಯಕರ ಭೇಟಿಗೆ ಅವಕಾಶ ನೀಡಲಾಗುವುದಿಲ್ಲ ಎಂದಿರುವುದಾಗಿ ಮೂಲಗಳು ತಿಳಿಸಿವೆ.

ಕೇಂದ್ರದ ನಾಯಕರು ಭೇಟಿಗೆ ಸಮಯ ನಿರಾಕರಿಸಿದ್ದರೂ, ವಿಜಯನಗರ ಜಿಲ್ಲೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಸರ್ಕಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. 'ಮುಂದಿನ ಎರಡೂವರೆ ವರ್ಷಗಳ ಕಾಲ ನಮ್ಮ ಪಕ್ಷವೂ ಅಧಿಕಾರದಲ್ಲಿ ಉಳಿಯುತ್ತದೆ. ಮುಂದಿನ ಚುನಾವಣೆಯಲ್ಲೂ ನೀವು ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸುತ್ತೀರಿ ಎಂಬ ವಿಶ್ವಾಸ ನನಗಿದೆ. ನೀವು ಬೆಂಬಲ ನೀಡುವುದಿಲ್ಲವೇ?' ಎಂದು ಅವರು ಹೇಳಿದರು.

ಈಮಧ್ಯೆ, ಸಿದ್ದರಾಮಯ್ಯ ಅವರ ಪಾಳಯದಲ್ಲಿ ಗುರುತಿಸಿಕೊಂಡಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗೆ ಬೆಂಬಲ ಸೂಚಿಸುವ ಶಾಸಕರು ಮತ್ತು ಸಚಿವರಿಗಾಗಿ ದೆಹಲಿಯಲ್ಲಿ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಅವರ ಸಹೋದರ ಮತ್ತು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ಅವರ ನಿವಾಸದಲ್ಲಿ ಆಯೋಜಿಸಲಾದ ಈ ಸಭೆಯನ್ನು ಆಂತರಿಕವಾಗಿ ಶಕ್ತಿ ಪ್ರದರ್ಶನವೆಂದು ಪರಿಗಣಿಸಲಾಗುತ್ತಿದೆ.

ಈಮಧ್ಯೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 'ವೋಟ್ ಚೋರಿ' ವಿಷಯದ ಬಗ್ಗೆ ಈಗಾಗಲೇ ದೆಹಲಿಗೆ ತಲುಪಿದ್ದಾರೆ. ಇದು ಏಳು ದಿನಗಳಲ್ಲಿ ರಾಜಧಾನಿಗೆ ಅವರ ಎರಡನೇ ಪ್ರವಾಸವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ 'ರಾಜಾತಿಥ್ಯ': ಇಬ್ಬರು ಅಧಿಕಾರಿಗಳು ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ; ತನಿಖೆಗೆ ಸಮಿತಿ ರಚನೆ; Video

ವೈಟ್-ಕಾಲರ್ ಭಯೋತ್ಪಾದಕ ಪರಿಸರ ಅನಾವರಣ; 350 ಕೆಜಿ ಸ್ಫೋಟಕಗಳ ಪತ್ತೆ ಬೆನ್ನಲ್ಲೆ ವೈದ್ಯರ ಮನೆಯಿಂದ 2,563 ಕೆಜಿ ಸ್ಫೋಟಕಗಳು ವಶಕ್ಕೆ!

ಕಾರಿನಲ್ಲಿ ಎಕೆ-47 ರೈಫಲ್ ಇಟ್ಟುಕೊಂಡಿದ್ದ ಲಖನೌ ವೈದ್ಯೆಯ ಬಂಧನ!

ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 14 ಮೀನುಗಾರರ ಬಂಧನ

Hyderabad: ಬ್ಲೈಂಡ್ ಸ್ಪಾಟ್ ಗೆ ಮತ್ತೊಂದು ಬಲಿ, ತಿರುವಿನಲ್ಲಿ ಬಾಲಕನ ಮೇಲೆ ಹರಿದ ಲಾರಿ!, Video

SCROLL FOR NEXT