ಎಚ್.ಡಿ ಕುಮಾರಸ್ವಾಮಿ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

ಕುಮಾರಸ್ವಾಮಿ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರೂ ಸಹ ಭಯೋತ್ಪಾದಕರ ಒಂದು ಭಾಗವೇ?: DK ಶಿವಕುಮಾರ್

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು.

ನವದೆಹಲಿ: ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ಗಾರೆ,

ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಮಾತನಾಡಿದ ಅವರು ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ‌ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ" ಎಂದು ಉತ್ತರಿಸಿದರು. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ" ಎಂದರು.

ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!