ಆರ್.ಅಶೋಕ್ 
ರಾಜಕೀಯ

ವೋಟಿಗಾಗಿ ಮತಾಂಧರ ಮೇಲೆ ಮೃದು ಧೋರಣೆ ತೋರುವುದು ದೇಶಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ರಾಜ್ಯ ಸರ್ಕಾರ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿರುವ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವ ವೀಡಿಯೋ ಹೇಗೆ ಸೋರಿಕೆಯಾಯಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದೆಯೇ ವಿನಃ ಅವರಿಗೆ ಫೋನ್ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿಲ್ಲ.

ಬೆಂಗಳೂರು: ವೋಟಿಗಾಗಿ ಮತಾಂಧರರ ಮೇಲೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ತೋರುವುದು ದೇಶಕ್ಕೆ ಒಳ್ಳೆಯದಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿರುವ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವ ವೀಡಿಯೋ ಹೇಗೆ ಸೋರಿಕೆಯಾಯಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದೆಯೇ ವಿನಃ ಅವರಿಗೆ ಫೋನ್ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಈ ಘಟನೆಯ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಭಯೋತ್ಪಾದಕ ಶಂಕಿತ ಯಾರೊಂದಿಗೆ ಮಾತನಾಡುತ್ತಿದ್ದಾನೆ ಎಂಬುದನ್ನು ತನಿಖೆ ಮಾಡುವ ಬದಲು, ವೀಡಿಯೊ ಸೋರಿಕೆ ಮಾಡಿದವರನ್ನು ಪರಿಶೀಲಿಸಲು ಗೃಹ ಸಚಿವ ಪರಮೇಶ್ವರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಕೆಲವು ಮುಸ್ಲಿಂ ಮತಗಳಿಗಾಗಿ, ರಾಜ್ಯ ಸರ್ಕಾರವು ರಾಷ್ಟ್ರದ ಸುರಕ್ಷತೆಯನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸಿದ ಅವರು, ಪ್ರಧಾನಿ ಮೋದಿಯವರು ಸರಣಿ ಸಭೆಗಳನ್ನು ನಡೆಸಿದ್ದಾರೆ. ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಗೃಹ ಸಚಿವರಾಗಿದ್ದಾಗ ದಲಿತರನ್ನು ಸುಟ್ಟು ಹಾಕಲಾಯಿತು. ಅಮಿತ್ ಶಾ ಬಗ್ಗೆ ಮಾತನಾಡುವುದಕ್ಕೂ ಮೊದಲು ಖರ್ಗೆ ತಮ್ಮ ವೈಫಲ್ಯವನ್ನು ನೋಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್