ರಾಹುಲ್ ಗಾಂಧಿ-ಸಿದ್ದರಾಮಯ್ಯ 
ರಾಜಕೀಯ

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; 8-12 ಸಚಿವರಿಗೆ ಕೊಕ್? ಆಕಾಂಕ್ಷಿಗಳ ಪಟ್ಟಿ!

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಪಕ್ಷದ ಸೋಲಿನ ಕುರಿತಂತೆ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ.

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಪಕ್ಷದ ಸೋಲಿನ ಕುರಿತಂತೆ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದರು. ಆದರೆ ನವೆಂಬರ್ ಕ್ರಾಂತಿ ನಡೆಯುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಬದಲಿಗೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸೂಚನೆ ನೀಡಿದೆ.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ರಾಜ್ಯದಲ್ಲಿ 8ರಿಂದ 12 ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಯಾರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಬೇಳೂರು ಗೋಪಾಲಕೃಷ್ಣ, ಬಿಕೆ ಹರಿಪ್ರಸಾದ್, ಎನ್ಎ ಹ್ಯಾರಿಸ್, ಸಲೀಂ ಅಹಮದ್, ಆರ್ ವಿ ದೇಶಪಾಂಡೆ, ನಾಗೇಂದ್ರ, ಬಿಕೆ ಸಂಗಮೇಶ್, ನರೇಂದ್ರ ಸ್ವಾಮಿ, ಶರತ್ ಬಚ್ಚೆಗೌಡ, ಎಂ. ಕೃಷ್ಣಪ್ಪ, ಮಾಗಡಿ ಬಾಲಕೃಷ್ಣ, ಲಕ್ಷ್ಮಣ್ ಸವದಿ, ಎಸ್ ಪೊನ್ನಣ್ಣ, ರಿಜ್ವಾನ್ ಅರ್ಷದ್, ಶಿವಲಿಂಗೇಗೌಡ, ರೂಪಕಲಾ ಶಶಿಧರ್, ಮಾಲೂರು ನಂಜೇಗೌಡ ಸೇರಿ ಹಲವು ನಾಯಕರು ಸಚಿವ ಸಂಪುಟದ ಮೇಲೆ ಕಣ್ಣಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಗೆ ಬಿಸಿ ತುಪ್ಪವಾದ ಚಿರಾಗ್ ಪಾಸ್ವಾನ್: ನಿತೀಶ್ ಅವರೇ ನಮ್ಮ ಸಿಎಂ; ನೂತನ ಸರ್ಕಾರ ಸೇರುತ್ತೇವೆ ಎಂದ ಕೇಂದ್ರ ಸಚಿವ! Video

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು! ಡಿ.4ಕ್ಕೆ ಮುಂದಿನ ವಿಚಾರಣೆ

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!

ಬಿಹಾರ ಚುನಾವಣೆ: ಸೋಲಿಗೆ ದುಃಖವಿಲ್ಲ, 'ಸಾರ್ವಜನಿಕ ಜೀವನದಲ್ಲಿ ಏರಿಳಿತ ಅನಿವಾರ್ಯ: RJD ಮೊದಲ ಪ್ರತಿಕ್ರಿಯೆ

SCROLL FOR NEXT