ಗೃಹ ಸಚಿವ ಜಿ ಪರಮೇಶ್ವರ್ 
ರಾಜಕೀಯ

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ

ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ.

ಬೆಂಗಳೂರು: ಸಂಪುಟ ಪುನಾರಚನಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರ್ಥ. ಸಂಪುಟ ಪುನಾರಚನೆಯಾದರೆ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಮಾರ್ಮಿಕವಾಗಿ ಹೇಳಿದ್ದಾರೆ.

ಸಚಿವ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳ ನಡುವೆ ಗೃಹ ಸಚಿವ ಪರಮೇಶ್ವರ್ ಅವರು ನೀಡಿರುವ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ ಎಂದು ಹೇಳಿದರು.

ಸಂಪುಟ ಪುನಾರಚನೆಯಾದರೆ ಒಳ್ಳೆಯದು. ಬಹಳ ದಿನಗಳಿಂದ ಶಾಸಕರ ಬೇಡಿಕೆಯೂ ಇದೆ. ಹಲವರಿಗೆ ಸಚಿವರಾಗಬೇಕು ಎಂಬ ಅಪೇಕ್ಷೆಯಿದೆ. ಸಂಪುಟ ಪುನಾರಚನೆಗೆ ಅವಕಾಶ ನೀಡಿದ್ದಾರೆಂದರೆ ಸಿಎಂ ಬದಲಾವಣೆ ಬಗ್ಗೆ ನೀವೇ ಊಹೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಮುಖ್ಯಮಂತ್ರಿ ದೆಹಲಿಗೆ ಹೋಗುವಾಗ ಭೇಟಿ ಮಾಡಿದ್ದೆ. ಸಂಪುಟ ಪುನಾರಚನೆ ಅಥವಾ ಬೇರಿನ್ಯಾವುದೇ ಆಗಿರಲಿ ಎಲ್ಲವೂ ಮುಖ್ಯಮಂತ್ರಿಗಳು, ಹೈಕಮಾಂಡ್'ಗೆ ಗೊತ್ತಿರುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ