ಗೃಹ ಸಚಿವ ಜಿ ಪರಮೇಶ್ವರ್ 
ರಾಜಕೀಯ

ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಿಸಿದ ಸಚಿವ ಪರಮೇಶ್ವರ್ ಹೇಳಿಕೆ

ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ.

ಬೆಂಗಳೂರು: ಸಂಪುಟ ಪುನಾರಚನಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರ್ಥ. ಸಂಪುಟ ಪುನಾರಚನೆಯಾದರೆ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಮಾರ್ಮಿಕವಾಗಿ ಹೇಳಿದ್ದಾರೆ.

ಸಚಿವ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳ ನಡುವೆ ಗೃಹ ಸಚಿವ ಪರಮೇಶ್ವರ್ ಅವರು ನೀಡಿರುವ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಸಿಎಂ ಬದಲಾವಣೆ ಆಗಲ್ಲ ಎಂದು ಹೇಳಿದರು.

ಸಂಪುಟ ಪುನಾರಚನೆಯಾದರೆ ಒಳ್ಳೆಯದು. ಬಹಳ ದಿನಗಳಿಂದ ಶಾಸಕರ ಬೇಡಿಕೆಯೂ ಇದೆ. ಹಲವರಿಗೆ ಸಚಿವರಾಗಬೇಕು ಎಂಬ ಅಪೇಕ್ಷೆಯಿದೆ. ಸಂಪುಟ ಪುನಾರಚನೆಗೆ ಅವಕಾಶ ನೀಡಿದ್ದಾರೆಂದರೆ ಸಿಎಂ ಬದಲಾವಣೆ ಬಗ್ಗೆ ನೀವೇ ಊಹೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಮುಖ್ಯಮಂತ್ರಿ ದೆಹಲಿಗೆ ಹೋಗುವಾಗ ಭೇಟಿ ಮಾಡಿದ್ದೆ. ಸಂಪುಟ ಪುನಾರಚನೆ ಅಥವಾ ಬೇರಿನ್ಯಾವುದೇ ಆಗಿರಲಿ ಎಲ್ಲವೂ ಮುಖ್ಯಮಂತ್ರಿಗಳು, ಹೈಕಮಾಂಡ್'ಗೆ ಗೊತ್ತಿರುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT