ಡಿಕೆ ಶಿವಕುಮಾರ್-ಆರ್ ಅಶೋಕ್ 
ರಾಜಕೀಯ

ಟೆಂಪಲ್ ರನ್ ಮಾಡಿದ್ದೆಲ್ಲ ವ್ಯರ್ಥ: ಸಚಿವ ಸಂಪುಟ ಪುನಾರಚನೆಯಾದರೆ ಡಿಕೆಶಿಗೆ ಪಂಗನಾಮ; ಆರ್. ಅಶೋಕ್ ಲೇವಡಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರನ್ನು ಭೇಟಿ ಆಗುತ್ತಿರುವುದೊಂದು ರಾಜಕೀಯ ಆಟ. ಈ ಹಿಂದೆ ಜಿಎಸ್‌ಟಿ ಸಭೆಗೆ ಹೋಗಿರಲಿಲ್ಲ. ಆಗ ಹೋಗದವರು ಈಗ ಯಾಕೆ ಹೋಗುತ್ತಿದ್ದಾರೆ?

ಬೆಂಗಳೂರು: ನವೆಂಬರ್‌ನಲ್ಲಿ ಅಧಿಕಾರ ಹಸ್ತಾಂತರ ಇಲ್ಲವೆಂದಾಗಿದ್ದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗಿ ಕುಳಿತುಕೊಳ್ಳುವ ಪರಿಸ್ಥಿತಿ ಏಕೆ ಬರುತ್ತಿತ್ತು? ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷ್ಣ ಮೃಗಗಳು ಸತ್ತಿವೆ, ಕಬ್ಬು ಬೆಳೆಗಾರರ ಸಮಸ್ಯೆ ಇದೆ. ಇದೆಲ್ಲವನ್ನು ಬಿಟ್ಟು ದಿಲ್ಲಿಯಲ್ಲಿ ಕುಳಿತುಕೊಳ್ಳುವಂಥ ಘನಂದಾರಿ ಕೆಲಸ ಏನಿದೆ? ಸಿಎಂ ಕುರ್ಚಿಗೆ ಮ್ಯೂಸಿಕಲ್ ಚೇರ್ ಆಟ ‌ನಡೆಯುತ್ತಿದೆ. ಹೀಗಾಗಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಎಲ್ಲರೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಹಲವರು ಮಂತ್ರಿಗಳಾಗಲು ಹೊಸ ಬಟ್ಟೆ ಹೊಲಿಸಿಕೊಂಡಿದ್ದಾರೆ, ದೆಹಲಿಯಲ್ಲಿ ಒಬ್ಬರು ಸ್ಥಾನ ಉಳಿಸಿಕೊಳ್ಳಲು ಹೆಣಗುತ್ತಿದ್ದರೆ, ಇನ್ನೊಬ್ಬರು ಸ್ಥಾನ ಪಡೆಯಲು ಹೋಗಿದ್ದಾರೆ. ಇದರಿಂದಾಗಿ ಎರಡೂವರೆ ವರ್ಷದ ಒಪ್ಪಂದ ಆಗಿರುವುದು ಸತ್ಯ ಎಂದು ಅರ್ಥವಾಗುತ್ತದೆ ಎಂದು ಹೇಳಿದರು.

ಒಂದೊಮ್ಮೆ ಸಚಿವ ಸಂಪುಟ ಪುನಾರಚನೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಬೀಳಲಿದೆ. ಅವರು (ಡಿ.ಕೆ.ಶಿವಕುಮಾರ್‌) ಇಷ್ಟು ದಿನ‌ ಟೆಂಪಲ್ ರನ್ ಮಾಡಿದ್ದೆಲ್ಲ ವ್ಯರ್ಥವಾಗುತ್ತದೆ.

ಹಾಸನಾಂಬೆ ಎರಡು ಸಲ ವರ ಕೊಟ್ಟಿದ್ದೂ ಹೋಗುತ್ತದೆ. ಭಂಡಾರ ಬಾಕ್ಸ್ ತೆರೆದುಕೊಂಡು ಕೂರಬೇಕಾಗುತ್ತದೆ. ಸಂಪುಟ ಪುನಾರಚನೆ ಆಗದಿದ್ದರೆ ಮಾತ್ರ ಶಿವಕುಮಾರ್‌ಗೆ ಅವಕಾಶ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರನ್ನು ಭೇಟಿ ಆಗುತ್ತಿರುವುದೊಂದು ರಾಜಕೀಯ ಆಟ. ಈ ಹಿಂದೆ ಜಿಎಸ್‌ಟಿ ಸಭೆಗೆ ಹೋಗಿರಲಿಲ್ಲ. ಆಗ ಹೋಗದವರು ಈಗ ಯಾಕೆ ಹೋಗುತ್ತಿದ್ದಾರೆ? ಅಭಿವೃದ್ಧಿಗಾಗಿ ಮೋದಿಯವರ ಭೇಟಿ ಎನ್ನುವುದೊಂದು ನಾಟಕ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ಉಗ್ರ ಹೇಳಿದ್ದೇನು?

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಈ ವರ್ಷ ಇಲ್ಲಿಯವರೆಗೆ 255 ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದ BSF

SCROLL FOR NEXT