ಎಸ್ ಆರ್ ವಿಶ್ವನಾಥ್ 
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪರ್ಯಾಯ ಯಾರೂ ಇಲ್ಲ: ವಿಜಯೇಂದ್ರ ಹಾಡಿ ಹೊಗಳಿದ SR ವಿಶ್ವನಾಥ್

ಎರಡೇ ವರ್ಷಕ್ಕೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದರೆ ಅವಕಾಶ ಕಿತ್ತುಕೊಂಡಂತೆ ಆಗಲಿದೆ. ಇದರ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಬೇಕು.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಮುಂದುವರಿಯುವ ಬಗ್ಗೆ ನಾವು ಹೇಳುವುದಕ್ಕೆ ಸಾಧ್ಯವಿಲ್ಲ. ಆದರೆ, ವಿಜಯೇಂದ್ರಗೆ ಪರ್ಯಾಯವಾಗಿ ರಾಜ್ಯಾಧ್ಯಕ್ಷರಾಗುತ್ತಾರೆ ಎನ್ನುವವರು ಪಕ್ಷದಲ್ಲಿ ಇಲ್ಲ ಎಂದು ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡೇ ವರ್ಷಕ್ಕೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದರೆ ಅವಕಾಶ ಕಿತ್ತುಕೊಂಡಂತೆ ಆಗಲಿದೆ. ಇದರ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಬೇಕು.

ಅವರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಪಕ್ಷದ ಕೆಲಸ ಮಾಡುತ್ತೇವೆ. ವಿಜಯೇಂದ್ರಗೆ ಇನ್ನೂ ಒಂದು ವರ್ಷ ಅವಕಾಶ ಕೊಟ್ಟರೆ ಪೂರ್ಣ ಅವಕಾಶ ಕೊಟ್ಟಂತಾಗಲಿದೆ. ಯಾರಿಗೇ ಆಗಲಿ ಪೂರ್ಣ ಅವಕಾಶ ಕೊಟ್ಟು ನೋಡಬೇಕು ಎಂದು ಅಭಿಪ್ರಾಯಪಟ್ಟರು.

ವಿಜಯೇಂದ್ರ ಮುಂದೆ ಇನ್ನೂ ದೊಡ್ಡ ಸವಾಲುಗಳಿವೆ, ಹಲವು ಚುನಾವಣೆಗಳು ಎದುರಾಗಲಿವೆ. ಅವರು 2 ವರ್ಷ ಪೂರೈಸಿದ್ದು ಗೊತ್ತೇ ಆಗಲಿಲ್ಲ. ಅವರಿನ್ನೂ ಕ್ರಿಯಾಶೀಲರಾಗಬೇಕು. ಎಲ್ಲರನ್ನೂ ಜತೆಗೆ ಕರೆದುಕೊಂಡು ಹೋಗಬೇಕು. ವಿಜಯೇಂದ್ರ ಏಕಾಂಗಿಯಾಗಿ ಪಕ್ಷ ಸಂಘಟನೆ ಮಾಡುವುದು ಕಷ್ಟ. ಜಿಲ್ಲೆಗಳಲ್ಲಿ ಪರಿಪೂರ್ಣ ಜವಾಬ್ದಾರಿ ಸಿಗಬೇಕು. ಆಗ ಅವರ ಬಲ ಹೆಚ್ಚಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iris Dena ನಾವಿಕರ ಹತ್ಯೆ: ಡೆಡ್ಲಿ ಪ್ರತೀಕಾರಕ್ಕಾಗಿ ಕಾಯುತ್ತಿದ್ದೇವೆ, ಯಾವಾಗ, ಏನು ಎಂಬ ಗುಟ್ಟು ಬಿಟ್ಟುಕೊಡದ ಇರಾನ್!

'The Kerala Story 2': ಮುಸ್ಲಿಂರ ಬಹಿಷ್ಕಾರಕ್ಕೆ ಹಿಂದೂಗಳ ಪ್ರತಿಜ್ಞೆ! ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್ ಕಿಡಿ

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

ಜಾರ್ಖಂಡ್‌: ಬುಡಕಟ್ಟು ದಂಪತಿ, 12 ವರ್ಷದ ಮಗನ ಬರ್ಬರ ಹತ್ಯೆ; ಮಾಟ ಮಂತ್ರಕ್ಕೆ ಬಲಿ ಶಂಕೆ

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

SCROLL FOR NEXT