ಡಿ.ಕೆ.ಶಿವಕುಮಾರ್ 
ರಾಜಕೀಯ

ಸಿದ್ದರಾಮಯ್ಯ CM ಆಗಿ ಇರಲ್ಲ ಎಂದು ಯಾರೂ ಹೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ವಿಧಾನಪರಿಷತ್ ಸಭಾಧ್ಯಕ್ಷರು ಹಾಗೂ ಉಪ ಸಭಾಧ್ಯಕ್ಷರನ್ನು ಈ ಬಾರಿ ಕಾಂಗ್ರೆಸ್ ಪಕ್ಷದಿಂದಲೇ ಆಯ್ಕೆ ಮಾಡಬೇಕು ಎಂದು ಪಕ್ಷದ ಸದಸ್ಯರುಗಳು ಮನವಿ ಮಾಡಿದ್ದಾರೆ. ಈ ಹಿಂದೆಯೇ ಇದನ್ನು ಮಾಡಬೇಕಿತ್ತು. ಮೇಲ್ಮನೆಯಲ್ಲಿ ವಿಪಕ್ಷಗಳ ಹಾಗೂ ನಮ್ಮ ಸಂಖ್ಯೆ ಸಮನಾಗಿದೆ.

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

ಸದಾಶಿವನಗರದ ನಿವಾಸದ ಬಳಿ ಗುರುವಾರ ರಾತ್ರಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಐದೂ ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಕೇಳಿದಾಗ ಬಹಳ ಸಂತೋಷ, ಅವರಿಗೆ ಮುಖ್ಯಮಂತ್ರಿ ಹುದ್ದೆ ಜವಾಬ್ದಾರಿಯನ್ನು ಪಕ್ಷ ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ" ಎಂದರು.

ವಿಧಾನಪರಿಷತ್ ಸಭಾಧ್ಯಕ್ಷರು ಹಾಗೂ ಉಪ ಸಭಾಧ್ಯಕ್ಷರನ್ನು ಈ ಬಾರಿ ಕಾಂಗ್ರೆಸ್ ಪಕ್ಷದಿಂದಲೇ ಆಯ್ಕೆ ಮಾಡಬೇಕು ಎಂದು ಪಕ್ಷದ ಸದಸ್ಯರುಗಳು ಮನವಿ ಮಾಡಿದ್ದಾರೆ. ಈ ಹಿಂದೆಯೇ ಇದನ್ನು ಮಾಡಬೇಕಿತ್ತು. ಮೇಲ್ಮನೆಯಲ್ಲಿ ವಿಪಕ್ಷಗಳ ಹಾಗೂ ನಮ್ಮ ಸಂಖ್ಯೆ ಸಮನಾಗಿದೆ. ಗಾಯತ್ರಿ ಅವರ ಪ್ರಕರಣವನ್ನು ನ್ಯಾಯಲಯದಲ್ಲಿ ಗೆದ್ದಿದ್ದೇವೆ. ಅಲ್ಲಿಂದ ಆದೇಶ ಪಡೆಯಬೇಕಿದೆ. ಆಗ ನಮ್ಮ ಸದಸ್ಯರ‌ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಸದಸ್ಯರು ತಿಳಿಸಿದ್ದಾರೆ" ಎಂದರು.

ಸಚಿವರು, ಶಾಸಕರು, ಎಂಎಲ್ ಸಿಗಳ ದೆಹಲಿ ಭೇಟಿ ಬಗ್ಗೆ ಗೊತ್ತಿಲ್ಲ. ಯಾರೂ ನನ್ನ ಬಳಿ ಕೇಳಿಯೂ ಇಲ್ಲ. ಈ ವಿಚಾರ ನನಗೆ ಗೊತ್ತೂ ಇಲ್ಲ ಎಂದರು. ಸರ್ಕಾರಕ್ಕೆ ಎರಡುವರೆ ವರ್ಷ ಪೂರೈಸಿದ ದಿನವೇ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, "ನನಗೆ ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ಮನೆಯಿಂದ ಹೊರಗಡೆ ಬಂದಿಲ್ಲ. ಸ್ನಾನವನ್ನೂ ಮಾಡಿಲ್ಲ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಭದ್ರತಾ ಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

SCROLL FOR NEXT