ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು: ಸಿದ್ದರಾಮಯ್ಯ

ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದರು.

ಚಿಕ್ಕಬಳ್ಳಾಪುರ: ನಾನು ಹುದ್ದೆಯಲ್ಲಿ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ನಾನು ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧರಿಸುತ್ತದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷಗಳ ಅವಧಿಯ ಅರ್ಧವನ್ನು ತಲುಪಿದ ನಂತರ, 2023ರಲ್ಲಿ ಸರ್ಕಾರ ರಚನೆಯ ವೇಳೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ 'ಅಧಿಕಾರ ಹಂಚಿಕೆ' ಒಪ್ಪಂದದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಊಹಾಪೋಹಗಳ ನಡುವೆ ಆಡಳಿತ ಪಕ್ಷದೊಳಗಿನ ಜಗಳ ತೀವ್ರಗೊಂಡಿದೆ.

'ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಅವರು ನಾನು (ಮುಖ್ಯಮಂತ್ರಿಯಾಗಿ) ಮುಂದುವರಿಯಬೇಕೆಂದು ನಿರ್ಧರಿಸಿದರೆ, ನಾನು ಮುಂದುವರಿಯುತ್ತೇನೆ. ಅಂತಿಮವಾಗಿ, ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ, ಅದನ್ನು ನಾನು ಒಪ್ಪಿಕೊಳ್ಳಬೇಕು. ಶಿವಕುಮಾರ್ ಕೂಡ ಅದನ್ನು ಒಪ್ಪಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ಕೇಳಿದಾಗ, 'ಆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ನಾನು ಹೇಳಿದರೂ, ನೀವು (ವರದಿಗಾರರು) ಮತ್ತೆ ಅದೇ ವಿಷಯವನ್ನು ಏಕೆ ಕೇಳುತ್ತಿದ್ದೀರಿ' ಎಂದು ಹೇಳಿದರು.

ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದ ಸಿಎಂ, 'ಈಗ ನಾವು ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದನ್ನು ಅನುಸರಿಸುತ್ತೇವೆ' ಎಂದು ಹೇಳಿದರು.

ಎರಡೂವರೆ ವರ್ಷಗಳ ಸರ್ಕಾರದ ನಂತರ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತೇ ಎಂದು ಕೇಳಿದಾಗ, 'ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ' ಎಂದು ಮಾತ್ರ ಹೇಳಿದರು.

ಸಿದ್ದರಾಮಯ್ಯ ಶನಿವಾರ ಬೆಂಗಳೂರಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಟ ಧರ್ಮೇಂದ್ರ, ಬಾಲಿವುಡ್ ನ 'ಹೀ-ಮ್ಯಾನ್' ಇನ್ನಿಲ್ಲ

ಆಪ್ತ ಸ್ನೇಹಿತ ಅಂಬರೀಶ್ ಪುಣ್ಯಸ್ಮರಣೆ ದಿನದಂದೇ Bollywood ನಟ ಧರ್ಮೇಂದ್ರ ನಿಧನ: ಸುಮಲತಾ ಸಂತಾಪ!

'ಭಯ್ಯಾ ಅನ್ನಬೇಡಿ, ಆ್ಯಟಿಟ್ಯೂಡ್ ನಿಮ್ಮ ಜೇಬಲ್ಲಿಡಿ': ಪ್ರಯಾಣಿಕರಿಗೆ ಬೆಂಗಳೂರು ಕ್ಯಾಬ್ ಚಾಲಕನ 6 ರೂಲ್ಸ್ ಗಳು, ಪೋಸ್ಟ್ ವೈರಲ್!

ನೂತನ CJI ಸೂರ್ಯಕಾಂತ್ ಗೆ ತಮ್ಮ ಸರ್ಕಾರಿ ಕಾರು ಬಿಟ್ಟುಕೊಟ್ಟ ಮಾಜಿ CJI ಗವಾಯಿ

ಟೆಸ್ಟ್‌ನಲ್ಲಿ ಮತ್ತೆ ಮುಗ್ಗರಿಸಿದ ಭಾರತ: ಯುವ ಬ್ಯಾಟರ್‌ಗಳ ಪೆವಿಲಿಯನ್ ಪರೇಡ್; 201 ರನ್‌ಗೆ ಆಲೌಟ್, ಆಫ್ರಿಕಾಕ್ಕೆ 288 ರನ್ ಮುನ್ನಡೆ!

SCROLL FOR NEXT