ಡಿಕೆ ಶಿವಕುಮಾರ್ 
ರಾಜಕೀಯ

ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶದ ಬಗ್ಗೆ ಮಾಧ್ಯಮಗಳ ಮುಂದೆ ಚರ್ಚಿಸಲ್ಲ: ಡಿ.ಕೆ ಶಿವಕುಮಾರ್; Video

ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳ ನಡುವೆ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಡಿಕೆ ಶಿವಕುಮಾರ್ ಅವರಿಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಸಂದೇಶ ಬಂದಿದ್ದು, ಅದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿದ್ದು, 2028ರ ವಿಧಾನಸಭೆ ಮತ್ತು 2029ರ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಪ್ರತಿಪಾದಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳ ನಡುವೆ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಡಿಕೆ ಶಿವಕುಮಾರ್ ಅವರಿಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಸಂದೇಶ ಬಂದಿದ್ದು, ಅದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಪಕ್ಷದಲ್ಲಿ ಯಾವುದೇ ಗೊಂದಲ ಅಥವಾ ಬಣಗಳು ಇಲ್ಲ. ನಾವು ಯಾವುದೇ ಬೇಡಿಕೆ ಇಡಬಾರದು. ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ, ಒಂದೇ ಒಂದು ಗುಂಪು ಇದೆ. ಅದು ಕಾಂಗ್ರೆಸ್. ನಮ್ಮ ಗುಂಪಿನಲ್ಲಿ 140 ಶಾಸಕರು ಇದ್ದಾರೆ." ವಿರೋಧ ಪಕ್ಷ ಬಿಜೆಪಿ ಅನಗತ್ಯ "ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ" ಎಂದು ಆರೋಪಿಸಿದ ಅವರು, ಆಡಳಿತ ಪಕ್ಷ ಅವರಿಗೆ ಇದಕ್ಕೆ ಅವಕಾಶ ನೀಡಬಾರದು ಎಂದರು.

ಬಿಜೆಪಿಯವರು ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ. ನಾವೆಲ್ಲರೂ 140 ಜನ ಒಟ್ಟಿಗೆ ಇದ್ದೇವೆ. ಯಾರೂ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ. ನನಗೆ ಯಾರ ಕೊಡುಗೆಯೂ ಬೇಡ.... ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ" ಎಂದು ಡಿಸಿಎಂ ಹೇಳಿದ್ದಾರೆ.

ರಾಹುಲ್ ಗಾಂಧಿ ತಮಗೆ ವೈಯಕ್ತಿಕ ಸಂದೇಶ ಕಳುಹಿಸಿದ್ದಾರೆ ಎಂಬ ವರದಿಗಳ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, "ರಾಹುಲ್ ಗಾಂಧಿ ನನಗೆ ಹೇಳಿರುವುದು ಮಾಧ್ಯಮಗಳ ಮುಂದೆ ಚರ್ಚಿಸಬೇಕಾದ ವಿಷಯವಲ್ಲ. ಅದರ ಬಗ್ಗೆ ನಾನು ಮಾತನಾಡುವ ಅಗತ್ಯವಿಲ್ಲ." "ನಮ್ಮ ಗುರಿ 2028 ರಲ್ಲಿ ಕರ್ನಾಟಕವನ್ನು ಗೆಲ್ಲುವುದು ಮತ್ತು 2029 ರಲ್ಲಿ ರಾಷ್ಟ್ರಮಟ್ಟದಲ್ಲಿ ಗೆಲ್ಲುವುದು ಹಾಗೂ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು. ಈ ಗುರಿಯತ್ತ ನಾವು ಕೆಲಸ ಮಾಡುತ್ತೇವೆ" ಎಂದರು.

2028 ರಲ್ಲಿ ತಮ್ಮ ನಾಯಕತ್ವದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆಯೇ ಎಂದು ಕೇಳಿದಾಗ, ಶಿವಕುಮಾರ್ ಅವರು, ತಾವು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟಿರುವುದಾಗಿ ಪ್ರತಿಪಾದಿಸಿದರು.

"ನಾನು ಆರು ವರ್ಷಗಳಿಂದ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದೇನೆ. ನಾನು ಪಕ್ಷದ ಪೂಜೆಯಲ್ಲಿ ನಂಬಿಕೆ ಇಟ್ಟಿದ್ದೇನೆ, ವ್ಯಕ್ತಿತ್ವ ಪೂಜೆಯಲ್ಲ" ಎಂದರು.

ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆ ಶಿವಕುಮಾರ್, "ನಾನು ಮಾಧ್ಯಮಗಳಲ್ಲಿ ಏನನ್ನೂ ಮಾತನಾಡಲು ಬಯಸುವುದಿಲ್ಲ. ಪಕ್ಷದ ವಿಷಯಗಳು ಏನೇ ಇರಲಿ, ನಾವು ನಾಲ್ಕು ಗೋಡೆಗಳ ಒಳಗೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ಯಾವುದೇ ರಾಜಕೀಯ ವಿಷಯ ಚರ್ಚಿಸುವುದಿಲ್ಲ" ಎಂದು ಹೇಳಿದರು. ಅಲ್ಲದೆ ಅಗತ್ಯವಿದ್ದರೆ ಹೈಕಮಾಂಡ್ ಭೇಟಿಗೆ ಸಮಯ ಕೇಳುವುದಾಗಿ ಹೇಳಿದ ಉಪಮುಖ್ಯಮಂತ್ರಿ, ಒಂದೆರಡು ದಿನಗಳಲ್ಲಿ ದೆಹಲಿಗೆ ಭೇಟಿ ನೀಡಬಹುದು ಎಂಬ ಸೂಚನೆ ನೀಡಿದರು.

"ಇಂದು ಸಂವಿಧಾನ ದಿನ, ಹೀಗಾಗಿ ದೆಹಲಿಗೆ ಹೋಗಲು ಸಾಧ್ಯವಾಗಲಿಲ್ಲ. ನಾಳೆ ಸಚಿವ ಸಂಪುಟ ಸಭೆ ಇದೆ. ಅದರ ನಂತರ, ಏನಾದರೂ ಕೆಲಸ ಇದ್ದರೆ ಖಂಡಿತವಾಗಿಯೂ ನಾನು ಹೈಕಮಾಂಡ್ ಭೇಟಿಗೆ ಸಮಯ ಕೇಳುತ್ತೇನೆ. ಏಕೆಂದರೆ ನಾನು ನಾಲ್ಕು ಎಂಎಲ್‌ಸಿ ಸ್ಥಾನಗಳನ್ನು ಅಂತಿಮಗೊಳಿಸಬೇಕಿದೆ. ನಾನು ಕೆಪಿಸಿಸಿ ಟ್ರಸ್ಟ್ ಅನ್ನು ಸಹ ಮರುಸಂಘಟಿಸಲು ಬಯಸುತ್ತೇನೆ. ಪಕ್ಷದ ಆಸ್ತಿಗಳ ಬಗ್ಗೆ ಹಿರಿಯ ನಾಯಕರೊಂದಿಗೆ ಚರ್ಚಿಸಲು ಬಯಸುತ್ತೇನೆ" ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಎಂದು ಪರಿಗಣಿಸಲಾದ ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗಿನ ಭೇಟಿಯ ಕುರಿತ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ರಾಜಕೀಯ ಕಾರ್ಯತಂತ್ರ ಮತ್ತು ಪಕ್ಷ ಬಲಪಡಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ, ಪಾಕ್ ಸಹಿ!

ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು! Video

T20 World cup ಟೂರ್ನಿಗೆ ಬಾಂಗ್ಲಾದೇಶ ಬಹಿಷ್ಕಾರ: 2 ಮಿಲಿಯನ್ ದಂಡ; ಈ ತಂಡಕ್ಕೆ ಜಾಕ್‌ಪಾಟ್!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತಕ್ಕೆ ಬಲಿಯಾದ ಮುರಳಿ ಕೃಷ್ಣ!

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯರಿಂದ ಅಭಿನಂದನೆ!

SCROLL FOR NEXT