ಡಾ ಪರಮೇಶ್ವರ್ 
ರಾಜಕೀಯ

ಪರಮೇಶ್ವರ್ ಅವರೇ.. ಕಾರಾಗೃಹಗಳು ಕಳ್ಳಬಟ್ಟಿ ಕಾರ್ಖಾನೆಗಳಾಗಿ ಮಾರ್ಪಟ್ಟಿರುವುದು ಗೊತ್ತಿದೆಯೋ? ಎಂದಿನಂತೆ "ಗೊತ್ತಿಲ್ಲ" ಎಂದು ಜಾರಿಕೊಳ್ಳುತ್ತೀರೋ?

ಅಪರಾಧ ಮಾಡುವ ಖೈದಿಗಳಿಗೆ ಭಯ ಹುಟ್ಟಿಸಬೇಕಿದ್ದ ಜೈಲುಗಳು ಕಾಂಗ್ರೆಸ್‌ ಸರ್ಕಾರದಲ್ಲಿ ಐಶಾರಾಮಿ ವಸತಿಗೃಹಗಳಾಗಿ ಬದಲಾಗಿರುವುದು ದುರಂತ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗೊತ್ತಿಲ್ಲ ಗೃಹಸಚಿವ ಪರಮೇಶ್ವರ್ ಅವರಿಗೆ ಈ ವಿಷಯವೇ ಗೊತ್ತಿರುವುದಿಲ್ಲ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮದ್ಯ ತಯಾರಿ ಮಾಡಿದ್ದಾರೆ ಎನ್ನಲಾದ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಪರಪ್ಪನ ಅಗ್ರಹಾರ ರೆಸಾರ್ಟ್ಸ್‌ & ಹೋಮ್‌ ಸ್ಟೇ ಮೂಲಕ ಖೈದಿಗಳಿಗೆ ರಾಜಾತಿಥ್ಯ ನೀಡಿದ್ದ ಕಾಂಗ್ರೆಸ್‌ ಸರ್ಕಾರ ಈಗ ಅಲ್ಲೊಂದು ಡಿಸ್ಟಿಲರೀಸ್‌ ತೆರೆಯುವ ಮೂಲಕ ಮದ್ಯ ತಯಾರಿ ಉದ್ಯಮ ನಡೆಸುತ್ತಿದೆ ಎಂದು ವ್ಯಂಗ್ಯವಾಡಿದೆ.

ಅಪರಾಧ ಮಾಡುವ ಖೈದಿಗಳಿಗೆ ಭಯ ಹುಟ್ಟಿಸಬೇಕಿದ್ದ ಜೈಲುಗಳು ಕಾಂಗ್ರೆಸ್‌ ಸರ್ಕಾರದಲ್ಲಿ ಐಶಾರಾಮಿ ವಸತಿಗೃಹಗಳಾಗಿ ಬದಲಾಗಿರುವುದು ದುರಂತ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗೊತ್ತಿಲ್ಲ ಗೃಹಸಚಿವ ಪರಮೇಶ್ವರ್ ಅವರಿಗೆ ಈ ವಿಷಯವೇ ಗೊತ್ತಿರುವುದಿಲ್ಲ ಎಂದು ಕಿಡಿಕಾರಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪೋಸ್ಟ್ ಮಾಡಿ, ಐಟಿ ಬಿಟಿ ಕಂಪನಿಗಳಿಗೆ ಬೈ ಬೈ. ಕಳ್ಳಬಟ್ಟಿ ಫ್ಯಾಕ್ಟರಿಗಳಿಗೆ ಜೈ ಜೈ ಎಂದು ವ್ಯಂಗ್ಯವಾಡಿದ್ದಾರೆ.

ಒಂದು ಕಡೆ ಕಾಂಗ್ರೆಸ್ ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದರೆ, ಮತ್ತೊಂದು ಕಡೆ ಆಡಳಿತ ನಿಷ್ಕ್ರಿಯತೆಯಿಂದ ಜೈಲುಗಳು ಕಳ್ಳಬಟ್ಟಿ ತಯಾರಿಕಾ ಫ್ಯಾಕ್ಟರಿಗಳಾಗಿ ಮಾರ್ಪಟ್ಟಿವೆ. ಗೃಹ ಸಚಿವ ಪರಮೇಶ್ವರ್ ಅವರೇ, ಕಾರಾಗೃಹಗಳು ಕಳ್ಳಬಟ್ಟಿ ಕಾರ್ಖಾನೆಗಳಾಗಿ ಮಾರ್ಪಟ್ಟಿರುವ ವಿಷಯ ತಮಗೆ ಗೊತ್ತಿದೆಯೋ ಅಥವಾ ಎಂದಿನಂತೆ "ಗೊತ್ತಿಲ್ಲ" ಎಂದು ಜಾರಿಕೊಳ್ಳುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT