ಆರ್ ಅಶೋಕ್  
ರಾಜಕೀಯ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿ ಅಧಿವೇಶನ ವಿಸ್ತರಿಸುವಂತೆ ಬಿಜೆಪಿ ಆಗ್ರಹ

ನೀರಾವರಿ, ಮೂಲಸೌಕರ್ಯ, ಪ್ರಾದೇಶಿಕ ಹೂಡಿಕೆ ಮತ್ತು ರೈತರ ಸಂಕಷ್ಟಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ವಿವರವಾದ ಚರ್ಚೆ ಮತ್ತು ನೀತಿ ಸ್ಪಷ್ಟತೆಯ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಉತ್ತರ ಕರ್ನಾಟಕದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ದೀರ್ಘಾವಧಿಯ ಅಧಿವೇಶನ ಅತ್ಯಗತ್ಯ ಎಂದಿರುವ ಪ್ರತಿಪಕ್ಷ ಬಿಜೆಪಿ, ಮುಂಬರುವ ಚಳಿಗಾಲದ ಅಧಿವೇಶನವನ್ನು ಕನಿಷ್ಠ 20 ದಿನಗಳವರೆಗೆ ವಿಸ್ತರಿಸಬೇಕು ಎಂದು ಬಿಜೆಪಿ ಶನಿವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು ಮತ್ತು ಕೊಪ್ಪಳದಂತಹ ಜಿಲ್ಲೆಗಳಲ್ಲಿ ನಿರಂತರವಾಗಿ ಅಭಿವೃದ್ಧಿ ಕುಂಟಿತದ ಬಗ್ಗೆ ಚರ್ಚಿಸಲು ಎಂಟು ದಿನಗಳ ಅಧಿವೇಶನ ಸಾಕಾಗುವುದಿಲ್ಲ ಎಂದು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.

ನೀರಾವರಿ, ಮೂಲಸೌಕರ್ಯ, ಪ್ರಾದೇಶಿಕ ಹೂಡಿಕೆ ಮತ್ತು ರೈತರ ಸಂಕಷ್ಟಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ವಿವರವಾದ ಚರ್ಚೆ ಮತ್ತು ನೀತಿ ಸ್ಪಷ್ಟತೆಯ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಸಂಕ್ಷಿಪ್ತ ಅಧಿವೇಶನದಲ್ಲಿ ಚರ್ಚಿಸಲು ಸಾಧ್ಯವಾಗುವುದಿಲ್ಲ ಎಂದು ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಲಾಖಾವಾರು ಚರ್ಚೆ ಮತ್ತು ಬಾಕಿ ಇರುವ ಯೋಜನೆಗಳ ಪರಿಶೀಲನೆಗೆ ಸಾಕಷ್ಟು ಸಮಯ ನಿಗದಿಪಡಿಸುವಂತೆ ಪ್ರತಿಪಕ್ಷ ನಾಯಕ ಸರ್ಕಾರವನ್ನು ಒತ್ತಾಯಿಸಿದರು.

ಬರ ನಿರ್ವಹಣೆ, ಕುಡಿಯುವ ನೀರಿನ ಕೊರತೆ ಮತ್ತು ಈ ಪ್ರದೇಶದಾದ್ಯಂತ ವಿಳಂಬವಾದ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳ ಕುರಿತು ರಚನಾತ್ಮಕ ಚರ್ಚೆ ನಡೆಯಬೇಕು ಎಂದು ಅವರು ಹೇಳಿದರು.

ಚಳಿಗಾಲದ ಅಧಿವೇಶನ ವಿಸ್ತರಿಸಿದರೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ವರ್ಷವಿಡೀ ಬಗೆಹರಿಯದೆ ಉಳಿದಿರುವ ಕ್ಷೇತ್ರ ಮಟ್ಟದ ಸಮಸ್ಯೆಗಳನ್ನು ಎತ್ತಲು ಎಲ್ಲಾ ಪಕ್ಷಗಳ ಶಾಸಕರಿಗೆ ಅವಕಾಶ ಸಿಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel