ಬಿ ವೈ ವಿಜಯೇಂದ್ರ  
ರಾಜಕೀಯ

ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲವಾಗುತ್ತದೆ: ಬಿ ವೈ ವಿಜಯೇಂದ್ರ

ರಾಜಕೀಯ ಅಲ್ಲೋಲ ಕಲ್ಲೋಲವಾದಾಗ ಬಿಜೆಪಿ ನಡೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ. ರಾಜಕೀಯ ಅವಕಾಶ ಬಂದರೆ ಆಗ ನೋಡೋಣ ಎಂದಿದ್ದಾರೆ.

ಮೈಸೂರು: ನವೆಂಬರ್​ನಲ್ಲಿ ರಾಜ್ಯ ರಾಜಕೀಯದಲ್ಲಿ ಕ್ರಾಂತಿಯಾಗಲಿದೆ. ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆ ಇದೆ. ಡಿ.ಕೆ.ಶಿವಕುಮಾರ್ ನಡೆ ಸಿದ್ದರಾಮಯ್ಯ ಕಡೆ ಇದೆ. ಆದರೆ ಶಾಸಕರ ನಡೆ ಬೇರೆ ಕಡೆ ಇದೆ ಎಂದರು.

ರಾಜಕೀಯ ಅಲ್ಲೋಲ ಕಲ್ಲೋಲವಾದಾಗ ಬಿಜೆಪಿ ನಡೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ. ರಾಜಕೀಯ ಅವಕಾಶ ಬಂದರೆ ಆಗ ನೋಡೋಣ ಎಂದಿದ್ದಾರೆ.

ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬೇಡಿ ಅದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ. ಅಂದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಪಕ್ಷದ ವರಿಷ್ಠರು ಎಲ್ಲಿಯೂ ಹೇಳಿಲ್ಲ. ಅರ್ಥಾತ್ ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗುವುದಿಲ್ಲ, ಅಲ್ಲೋಲ ಕಲ್ಲೋಲವಾಗುವುದು ಸ್ಪಷ್ಟ ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹದಿಂದ ಬೆಳೆ ಸಂಪೂರ್ಣವಾಗಿ ನಾಶವಾಗಿ ರೈತರು, ಬಡವರಿಗೆ ಸಾಕಷ್ಟು ತೊಂದರೆಯಾಗಿದೆ. ಆದರೆ ರಾಜ್ಯ ಸರ್ಕಾರ ಗಮನಹರಿಸಿಲ್ಲ. ರಾಜ್ಯ ಸರ್ಕಾರ ಹೇಳಿಕೆಗಳಿಗೆ ಸೀಮಿತವಾಗದೆ ಸಂಕಷ್ಟದಲ್ಲಿರುವ ರೈತರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women's World Cup 2025: ಭಾರತ vs ಪಾಕಿಸ್ತಾನ ನಡುವೆ ಹ್ಯಾಂಡ್‌ಶೇಕ್ ಇಲ್ಲ; ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ

Couple Romance: ರೈಲಿನಲ್ಲಿ ಜನರ ಎದುರೆ ಒಬ್ಬರಿಗೊಬ್ಬರು ತಬ್ಬಿಕೊಂಡು ಚುಂಬಿಸಿ ಯುವಜೋಡಿ; ಮುಜುಗರಕ್ಕೀಡಾದ ಪ್ರಯಾಣಿಕರು, Video!

Hassan: ಸರ್ವೇ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ, ರಕ್ಷಣೆಗೆ ಬಂದವರಿಗೂ ಕಚ್ಚಿದ ಶ್ವಾನಗಳು!

ಕಾಲ್ತುಳಿತ ಪ್ರಕರಣ: ವಿಜಯ್ ಪ್ರಚಾರ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲು

ಡೆಲಿವರಿಗೆ ಬಂದು ಎದೆ ಮುಟ್ಟಿದ Blinkit ಏಜೆಂಟ್! ಯುವತಿ ಆರೋಪವೇನು? Video Viral

SCROLL FOR NEXT