ಬಿಜೆಪಿ-ಸಿದ್ದರಾಮಯ್ಯ-ಜೆಡಿಎಸ್ 
ರಾಜಕೀಯ

ಜಾತಿ ಗಣತಿ ಕುರಿತು ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ, ಜೆಡಿಎಸ್

ಸಮೀಕ್ಷೆಯ ಭಾಗವಾಗಿ ಶನಿವಾರ ಗಣತಿದಾರರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಎರಡೂ ಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.

ಬೆಂಗಳೂರು: 'ಜಾತಿ ಗಣತಿ' ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾನುವಾರ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದ್ದು, ಗಣತಿಯನ್ನು ನಡೆಸುವ ವಿಧಾನ ಮತ್ತು ಪ್ರಶ್ನೆಗಳನ್ನು ಕೇಳುವ ವಿಧಾನಕ್ಕೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ.

ಸಮೀಕ್ಷೆಯ ಭಾಗವಾಗಿ ಶನಿವಾರ ಗಣತಿದಾರರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಎರಡೂ ಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.

'ನಿನ್ನೆ ಡಿಕೆ ಶಿವಕುಮಾರ್ ಅವರ ಪ್ರತಿಕ್ರಿಯೆ ನೋಡಿದರೆ ಸ್ಪಷ್ಟವಾಗುತ್ತದೆ. ಜನರಿಗೆ 60 ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ದಿನೇ ದಿನೆ ಗೊಂದಲ ಸೃಷ್ಟಿಸುತ್ತಿದೆ. ಇದು ಎಲ್ಲ ಸಮುದಾಯಗಳಲ್ಲಿ ಗೊಂದಲ ಸೃಷ್ಟಿಸಿದೆ' ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕವಾಗಿ ಸರ್ಕಾರ ಸರಿಯಾದ ಸಿದ್ಧತೆ ಇಲ್ಲದೆ ಆತುರದಲ್ಲಿ ಸಮೀಕ್ಷೆ ಕೈಗೊಂಡಿದೆ ಎಂದು ತೋರುತ್ತದೆ ಎಂದರು.

'ಗಣತಿ ಕಾರ್ಯಕ್ಕೆ ವಿಕಲಚೇತನರನ್ನು ಸೇರಿಸಿಕೊಳ್ಳುವ ಬಗ್ಗೆ ಟೀಕೆಗಳಿವೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಏಕೆ ಇಷ್ಟೊಂದು ಆತುರದಲ್ಲಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷದೊಳಗೆ ಅಕ್ಟೋಬರ್ ಅಥವಾ ನವೆಂಬರ್ ಕ್ರಾಂತಿಯ ಬಗ್ಗೆ ಮಾತುಕತೆ ನಡೆಯುತ್ತಿರುವಾಗ, ರಾಜ್ಯದಲ್ಲಿ ಈ ಸಂಭವನೀಯ ರಾಜಕೀಯ ಕ್ರಾಂತಿ ಮತ್ತು ಜಾತಿ ಗಣತಿಗೆ ಯಾವುದೇ ಸಂಬಂಧವಿದೆಯೇ ಎಂಬ ಚರ್ಚೆಗಳು ನಡೆಯುತ್ತಿವೆ' ಎಂದು ಅವರು ಹೇಳಿದರು.

ಎಲ್ಲರಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ನ್ಯಾಯವನ್ನು ಒದಗಿಸುವ ಯಾವುದೇ ಕ್ರಮವನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ಹೇಳಿದ ವಿಜಯೇಂದ್ರ, ಪಕ್ಷವು ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಒದಗಿಸುವಲ್ಲಿ ನಂಬಿಕೆ ಇಟ್ಟಿದೆ. ಮುಂಬರುವ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಘೋಷಿಸಿದ್ದಾರೆ ಎಂದರು.

"ನಮ್ಮ ರಾಜ್ಯದಲ್ಲಿ ಅಂತಹ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ಏನಾಗುತ್ತದೆ ಎಂದು ನೋಡೋಣ" ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಈ ಸಮೀಕ್ಷೆಯು ಸೆಪ್ಟೆಂಬರ್ 22 ರಂದು ಪ್ರಾರಂಭವಾಯಿತು ಮತ್ತು ಅಕ್ಟೋಬರ್ 7 ರವರೆಗೆ ಮುಂದುವರಿಯಲಿದೆ.

'ಯಾವ ಪ್ರಶ್ನೆಗಳನ್ನು ಕೇಳಲಾಗುತ್ತಿದೆ ಎಂದು ಡಿಸಿಎಂ ಅವರಿಗೇ ತಿಳಿದಿಲ್ಲ, ಗಣತಿದಾರರು ಕೇಳುವ ಪ್ರಶ್ನೆಗಳಿಂದ ಡಿಸಿಎಂ ನಿರಾಶೆಗೊಂಡಿದ್ದಾರೆ. ಹಾಗಾದರೆ ಸಾಮಾನ್ಯ ಜನರ ಗತಿಯೇನು?' ಎಂದು ಜೆಡಿಎಸ್ ಪಕ್ಷವು 'ಎಕ್ಸ್'ನಲ್ಲಿನ ಪೋಸ್ಟ್‌ನಲ್ಲಿ ಪ್ರಶ್ನಿಸಿದೆ.

ನಗರ ಪ್ರದೇಶದ ಜನರಿಗೆ "ಅನಗತ್ಯ ಮತ್ತು ಅಪ್ರಸ್ತುತ" ಪ್ರಶ್ನೆಗಳಿಗೆ ಉತ್ತರಿಸಲು ತಾಳ್ಮೆ ಮತ್ತು ಸಮಯವಿದೆಯೇ ಎಂದು ಪ್ರಶ್ನಿಸಿರುವ ಅದು, 'ಇದರ ಹಿಂದಿನ ಪಿತೂರಿ ಏನು ಮತ್ತು ಕೇಂದ್ರ ಸರ್ಕಾರವು ಮುಂದಿನ ವರ್ಷ ಜನಗಣತಿಯೊಂದಿಗೆ ಜಾತಿ ಎಣಿಕೆಯನ್ನು ನಡೆಸುವುದಾಗಿ ಘೋಷಿಸಿದ್ದರೂ, ಹಠಮಾರಿ ಸಿದ್ದರಾಮಯ್ಯ ಸರ್ಕಾರವು ರಾಜ್ಯದಲ್ಲಿ ತರಾತುರಿಯಲ್ಲಿ ನಡೆಸುತ್ತಿರುವ ಈ ಸಮೀಕ್ಷೆಯಿಂದ ಯಾರಿಗೆ ಲಾಭ' ಎಂದು ಕೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತದಲ್ಲಿ ಮಕ್ಕಳು ಸೇರಿ ಕನಿಷ್ಠ 20 ಮಂದಿ ಸಾವು

ರಿಷಬ್ ಶೆಟ್ಟಿ ದೃಶ್ಯಕಾವ್ಯಕ್ಕೆ ಬಹುಪರಾಕ್: 4ನೇ ದಿನಕ್ಕೆ ಜಗತ್ತಿನಾದ್ಯಂತ 300 ಕೋಟಿ ಕಲೆಕ್ಷನ್ ದಾಖಲೆ ಬರೆದ 'ಕಾಂತಾರ'!

World cup 2025: ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್: Pak'ಗೆ 248 ರನ್ ಟಾರ್ಗೆಟ್ ನೀಡಿದ ಭಾರತ!

India-Pakistan ಪಂದ್ಯದ ವೇಳೆ ಹೈಡ್ರಾಮಾ: ಮೊದಲು ನಾಟೌಟ್ ನಂತರ ಔಟ್ ಘೋಷಣೆ; 4ನೇ ಅಂಪೈರ್ ಜೊತೆ Pak ನಾಯಕಿ ವಾಗ್ವಾದ, Video

22 ವರ್ಷಗಳ ನಂತರ ಬಿಹಾರ ಮತದಾರರ ಪಟ್ಟಿ 'ಶುದ್ಧೀಕರಿಸಲಾಗಿದೆ'; ದೇಶಾದ್ಯಂತ ವಿಸ್ತರಣೆ: CEC

SCROLL FOR NEXT