ಲಹರ್ ಸಿಂಗ್ ಸಿರೋಯಾ 
ರಾಜಕೀಯ

ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರ ರಾಜ್ಯ ಆಡಳಿತದ ಮೇಲೆ ಪರಿಣಾಮ ಬೀರಿದೆ: BJP ನಾಯಕ ಲಹರ್ ಸಿಂಗ್ ಸಿರೋಯಾ

ಕಾಂಗ್ರೆಸ್ ಹೈಕಮಾಂಡ್ ಹಣಕ್ಕಾಗಿ ಕರ್ನಾಟಕವನ್ನು ಅವಲಂಬಿಸಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳಿಗಾಗಿ ಸ್ಥಾಪಿಸಲಾಗಿರುವ ನಿಗಮದಲ್ಲಿ ಹಣ ಪಡೆದಿದ್ದರು.

ಬೆಂಗಳೂರು: 2023 ರಲ್ಲಿ ಅಧಿಕಾರಿಂದ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತಲೇ ಇದ್ದು, ಇದು ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರಿದೆ ಎಂದು ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ಅವರು ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ. ಆದರೆ, ನಾಯಕತ್ವ ಬದಲಾವಣೆ ವಿಚಾರದಿಂದ ಅಸ್ಪಸಂಖ್ಯಾ ಸರ್ಕಾರಕ್ಕೆ ವರ್ತಿಸುತ್ತಿದೆ. ಇದು ರಾಜ್ಯದ ಆಡಳಿತ ಮೇಲೆ ಸಂಪೂರ್ಣ ಪರಿಣಾಮ ಬೀರಿದೆ. ಬೆಂಗಳೂರಿನ ಹದಗೆಟ್ಟ ರಸ್ತೆಗಳಿಂದಲೇ ಇದೂ ತಿಳಿಯುತ್ತದೆ ಎಂದು ಟೀಕಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್'ನ್ನು ಟೀಕಿಸಿರುವ ಅವರು, ಕಾಂಗ್ರೆಸ್ ಹೈಕಮಾಂಡ್ ಹಣಕ್ಕಾಗಿ ಕರ್ನಾಟಕವನ್ನು ಅವಲಂಬಿಸಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳಿಗಾಗಿ ಸ್ಥಾಪಿಸಲಾಗಿರುವ ನಿಗಮದಲ್ಲಿ ಹಣ ಪಡೆದಿದ್ದರು. ಇದು ದೊಡ್ಡ ಹಗರಣಕ್ಕೆ ಕಾರಣವಾಯಿತು ಎಂದು ಎಲ್ಲರಿಗೂ ತಿಳಿದಿದೆ. 2025 ರ ಬಿಹಾರ ಚುನಾವಣೆಯ ಸಮಯದಲ್ಲೂ ಇದೇ ರೀತಿಯ ಪಿತೂರಿಗಳು ನಡೆಯುತ್ತದೆಯೇ ಎಂಬುದನ್ನು ನೋಡಬೇಕಿದೆ ಎಂದು ಹೇಳಿದ್ದಾರೆ.

ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಗಳ ಪರಿಸ್ಥಿತಿ, ಜನರ ನೋವಿನತ್ತ ಗಮನಹರಿಸಬೇಕಿದೆ. ಸರ್ಕಾರವು ಆಡಳಿತ ಮತ್ತು ಅಧಿಕಾರಿಗಳ ಮೇಲೆ ಹೇಗೆ ಹಿಡಿತ ಕಳೆದುಕೊಂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್, ವೇತನ ಸಹಿತ 'ಋತುಚಕ್ರ ರಜೆ'ಗೆ ಸಚಿವ ಸಂಪುಟ ಒಪ್ಪಿಗೆ!

'ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ': ಎಚ್ ಡಿ ದೇವೇಗೌಡರ ಆರೋಗ್ಯದ ಕುರಿತು ಎಚ್ ಡಿ ಕುಮಾರಸ್ವಾಮಿ ಹೇಳಿಕೆ

Op Sindoor ನಿಂದ ಭಾರಿ ನಷ್ಟ, ಭಾರತದ ವಿರುದ್ಧ ಪ್ರತೀಕಾರಕ್ಕೆ ಸಜ್ಜು: ಮೊದಲ ಬಾರಿಗೆ 'ಮಹಿಳಾ ವಿಂಗ್ ' ರಚಿಸಿದ ಉಗ್ರ ಸಂಘಟನೆ JeM!

Dalit IPS officer's death: ಸೂಸೈಡ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ, ಕ್ರಮಕ್ಕೆ IAS ಪತ್ನಿಯ ಒತ್ತಾಯ!

SCROLL FOR NEXT