ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ 
ರಾಜಕೀಯ

ಶಿಕ್ಷಕರನ್ನು ಸಮೀಕ್ಷೆಗೆ ಕಳುಹಿಸಿದರೆ ಮಕ್ಕಳಿಗೆ ಕಲಿಸುವವರು ಯಾರು?: ಸರ್ಕಾರಕ್ಕೆ ಆರ್.ಅಶೋಕ್ ಪ್ರಶ್ನೆ

ಸರ್ಕಾರವು ದಸರಾ ಜಾತಿ ಗಣತಿಗಾಗಿ ಶಾಲೆಗಳ ರಜೆಯನ್ನು ವಿಸ್ತರಿಸಿದೆ. ಇದರಿಂದಾಗಿ ಶಿಕ್ಷಕರು ಗೊಂದಲಮದಿಂದಿರುವ ಜಾತಿ ಗಣತಿಯನ್ನು ನಿಭಾಯಿಸುವಂತಾಗಿದೆ. ಆದರೆ, ಜನರ ಬಳಿ ಏನು ಕೇಳಬೇಕೆಂಬುದೇ ಗಣತಿದಾರರಿಗೆ ತಿಳಿಯುತ್ತಿಲ್ಲ.

ಬೆಂಗಳೂರು: ದಸರಾ ಹಬ್ಬದ ರಜೆಯನ್ನು ವಿಸ್ತರಿಸಿ, ಶಾಲಾ ಶಿಕ್ಷಕರನ್ನು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕರ್ತವ್ಯಕ್ಕೆ ನಿಯೋಜಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜಾತಿಗಣತಿಗೆ ಸರ್ಕಾರ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ. ಸ್ಪಷ್ಟವಾದ ಉದ್ದೇಶ ಕೂಡ ಇಲ್ಲ. ಅದು ಕೂಡ ರಾಹುಲ್ ಗಾಂಧಿಯಂತೆಯೇ ಎಂದು ವ್ಯಂಗ್ಯವಾಡಿದ್ದಾರೆ.

ಸರ್ಕಾರವು ದಸರಾ ಜಾತಿ ಗಣತಿಗಾಗಿ ಶಾಲೆಗಳ ರಜೆಯನ್ನು ವಿಸ್ತರಿಸಿದೆ. ಇದರಿಂದಾಗಿ ಶಿಕ್ಷಕರು ಗೊಂದಲಮದಿಂದಿರುವ ಜಾತಿ ಗಣತಿಯನ್ನು ನಿಭಾಯಿಸುವಂತಾಗಿದೆ. ಆದರೆ, ಜನರ ಬಳಿ ಏನು ಕೇಳಬೇಕೆಂಬುದೇ ಗಣತಿದಾರರಿಗೆ ತಿಳಿಯುತ್ತಿಲ್ಲ. ಶಿಕ್ಷಕರನ್ನು ತರಗತಿಗಳಿಂದ ಹೊರಗೆಳೆದು ವಿದ್ಯಾರ್ಥಿಗಳ ಬಾಳಿನಲ್ಲಿ ಕತ್ತಲೆ ಆವರಿಸುವಂತೆ ಮಾಡಲಾಗುತ್ತಿದೆ. ಕಾಂಗ್ರೆಸ್ಸಿನ ವಿಭಜನೆಯ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇವುಗಳನ್ನೆಲ್ಲ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದು ಸಮೀಕ್ಷೆ ಅಲ್ಲ, ಇದು ದೋಷಗಳಿಂದ ಕೂಡಿದ ಸರ್ಕಸ್. ಅಧಿಕಾರಕ್ಕೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆಗೆ ಕರ್ನಾಟಕದ ಮಕ್ಕಳು ಬೆಲೆ ತೆರುವಂತಾಗಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್, ವೇತನ ಸಹಿತ 'ಋತುಚಕ್ರ ರಜೆ'ಗೆ ಸಚಿವ ಸಂಪುಟ ಒಪ್ಪಿಗೆ!

'ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ': ಎಚ್ ಡಿ ದೇವೇಗೌಡರ ಆರೋಗ್ಯದ ಕುರಿತು ಎಚ್ ಡಿ ಕುಮಾರಸ್ವಾಮಿ ಹೇಳಿಕೆ

Op Sindoor ನಿಂದ ಭಾರಿ ನಷ್ಟ, ಭಾರತದ ವಿರುದ್ಧ ಪ್ರತೀಕಾರಕ್ಕೆ ಸಜ್ಜು: ಮೊದಲ ಬಾರಿಗೆ 'ಮಹಿಳಾ ವಿಂಗ್ ' ರಚಿಸಿದ ಉಗ್ರ ಸಂಘಟನೆ JeM!

Dalit IPS officer's death: ಸೂಸೈಡ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ, ಕ್ರಮಕ್ಕೆ IAS ಪತ್ನಿಯ ಒತ್ತಾಯ!

SCROLL FOR NEXT