ಆರ್. ಅಶೋಕ್ ಮತ್ತು ಛಲವಾದಿ ನಾರಾಯಣ ಸ್ವಾಮಿ 
ರಾಜಕೀಯ

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM-DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬಹುದು?

ಬೆಟ್ಟಿಂಗ್‌ ಹಗರಣದಲ್ಲಿ ಸಿಕ್ಕಿ ಬಿದ್ದಿರುವ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಬಿಹಾರ ಚುನಾವಣೆಗಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ 300 ಕೋಟಿ ಕೊಟ್ಟು ಮಂತ್ರಿ ಸ್ಥಾನಗಿಟ್ಟಿಸಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ಬಿಹಾರ ಚುನಾವಣೆಗೆ ಹಣ ಸಂಗ್ರಹಿಸಲು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಆರೋಪಿಸಿವೆ.

ಬೆಟ್ಟಿಂಗ್‌ ಹಗರಣದಲ್ಲಿ ಸಿಕ್ಕಿ ಬಿದ್ದಿರುವ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಬಿಹಾರ ಚುನಾವಣೆಗಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ 300 ಕೋಟಿ ಕೊಟ್ಟು ಮಂತ್ರಿ ಸ್ಥಾನಗಿಟ್ಟಿಸಲು ಪ್ರಯತ್ನಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ರಾಹುಲ್‌ಗಾಂಧಿ ಅವರ ಪಾಲಿಗೆ ಎಟಿಎಂ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದ್ದಾರೆ.

ವೀರೇಂದ್ರ ಕರ್ಮಕಾಂಡ ನೋಡುತ್ತಿದ್ದರೆ ಇನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್‌ಗೆ ಕಪ್ಪ ನೀಡುತ್ತಿರಬಹುದು ನೀವೇ ಊಹಿಸಿಕೊಳ್ಳಿ ಎಂದು ಹೇಳಿದ್ದಾರೆ.

ವೀರೇಂದ್ರ ಅವರನ್ನು ಸಚಿವರನ್ನಾಗಿ ಮಾಡಲು ಪಕ್ಷ ಒಪ್ಪಿಕೊಂಡ ನಂತರ ಬಿಹಾರ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ನಾಯಕರು 300 ಕೋಟಿ ರೂ.ಗಳನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ ಎಂದು ಪರಿಷತ್ತಿನ ಎಲ್‌ಒಪಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ದಾಳಿಯ ಸಮಯದಲ್ಲಿ ಇಡಿ ಸುಮಾರು 400 ಕೋಟಿ ರೂ.ಗಳ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದರು. ವೀರೇಂದ್ರ ಮಾತ್ರವಲ್ಲ, ಕಾಂಗ್ರೆಸ್‌ನಲ್ಲಿ ನೂರಾರು ಕುಟುಂಬಗಳು ಭ್ರಷ್ಟಾಚಾರದಲ್ಲಿ ತೊಡಗಿವೆ ಎಂದು ಅವರು ಹೇಳಿದರು.

ಜೂಜಾಟ ಮತ್ತು ಬೆಟ್ಟಿಂಗ್‌ನಂತಹ ಕಾನೂನುಬಾಹಿರ ವಿಧಾನಗಳಿಂದ ಹಣ ಸಂಪಾದಿಸಿ ಚುನಾವಣೆಗಳನ್ನು ಗೆಲ್ಲುತ್ತಾರೆ, ಮಂತ್ರಿಯಾಗಲು ಅದನ್ನು ಬಳಸುತ್ತಾರೆ ಎಂದು ಅವರು ಹೇಳಿದರು. ತೆಲಂಗಾಣ ಚುನಾವಣೆ ಮತ್ತು ಲೋಕಸಭಾ ಚುನಾವಣೆಗಳಿಗಾಗಿ, ವಾಲ್ಮೀಕಿ ನಿಗಮದ ಹಣವನ್ನು ಒಳಗೊಂಡಂತೆ ಸಾವಿರಾರು ಕೋಟಿಗಳನ್ನು ಲೂಟಿ ಮಾಡಲಾಗಿದೆ ಮತ್ತು ಈಗ, ಬಿಹಾರ ಚುನಾವಣೆಗೆ ಕನ್ನಡಿಗರ ತೆರಿಗೆ ಹಣವನ್ನು ಎಷ್ಟು ಲೂಟಿ ಮಾಡಲಾಗುತ್ತದೆ ಎಂದು ಯಾರಿಗೆ ತಿಳಿದಿದೆ ಎಂದು ಅಶೋಕ ಪ್ರಶ್ನಸಿದ್ದಾರೆ. ಚುನಾವಣೆಗಾಗಿ ಇಂತಹ ಕಳಂಕಿತ ಹಣವನ್ನು ಬಳಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಪ್ರಕ್ರಿಯೆಯ ಬಗ್ಗೆ ಮಾತನಾಡಲು ಯಾವುದೇ ನೈತಿಕ ಅಧಿಕಾರವಿಲ್ಲ ಎಂದು ಅಶೋಕ ಹೇಳಿದರು.

ಸಾಮಾಜಿಕ ಮಾಧ್ಯಮ ವೇದಿಕೆ X ಗೆ ಪ್ರತಿಕ್ರಿಯಿಸಿದ ಜೆಡಿಎಸ್, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ತನ್ನ ಎಟಿಎಂ ಆಗಿ ಮಾಡಿಕೊಂಡಿದೆ ಮತ್ತು ಮಂತ್ರಿಗಳನ್ನು ಮಾಡುವ ಭರವಸೆ ನೀಡುವ ಮೂಲಕ ಬಿಹಾರ ಚುನಾವಣೆಗೆ ತನ್ನ ನಾಯಕರಿಂದ ಹಣವನ್ನು ಸಂಗ್ರಹಿಸಲು ಪ್ರಾರಂಭಿಸಿದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT