ಡಿಕೆ ಶಿವಕುಮಾರ್ 
ರಾಜಕೀಯ

ಅಧಿಕಾರದ ಅಮಲು ನೆತ್ತಿಗೇರಿದೆ, ಚುನಾಯಿತ ಶಾಸಕರನ್ನು ಕರಿಟೋಪಿ MLA ಎಂದು ಸಂಬೋಧಿಸುವುದು ಎಷ್ಟು ಸರಿ?

ಉಪ ಮುಖ್ಯಮಂತ್ರಿ ಡಿಕೆಶಿ ಅವರಿಗೆ ಅಧಿಕಾರದ ಅಮಲು ನೆತ್ತಿಗೇರಿದೆ. ಪ್ರಜಾಪ್ರಭುತ್ವದ ಪ್ರಬಲಾಸ್ತ್ರ ಜನಾಧಿಕಾರದ ಮೂಲಕ ಚುನಾಯಿತರಾದ ಶಾಸಕರನ್ನು ಕರಿಟೋಪಿ ಎಮ್‌ಎಲ್‌ಎ ಎಂದು ಸಂಬೋಧಿಸುವುದು ಎಷ್ಟು ಸರಿ?

ಬೆಂಗಳೂರು: ಜೆ.ಪಿ.ಪಾರ್ಕ್‌ನಲ್ಲಿ ಭಾನುವಾರ ನಡೆದ ಕರಿಟೋಪಿ ಕಲಹಕ್ಕೆ ಬಿಜೆಪಿ ನಾಯಕರು ಕೆಂಡಕಾರಿದ್ದು, ಶಾಸಕ ಮುನಿರತ್ನ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆಶಿ ಅವರಿಗೆ ಅಧಿಕಾರದ ಅಮಲು ನೆತ್ತಿಗೇರಿದೆ. ಪ್ರಜಾಪ್ರಭುತ್ವದ ಪ್ರಬಲಾಸ್ತ್ರ ಜನಾಧಿಕಾರದ ಮೂಲಕ ಚುನಾಯಿತರಾದ ಶಾಸಕರನ್ನು ಕರಿಟೋಪಿ ಎಮ್‌ಎಲ್‌ಎ ಎಂದು ಸಂಬೋಧಿಸುವುದು ಎಷ್ಟು ಸರಿ? ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಗೂಂಡಾ ರಾಜ್ಯ ಗ್ಯಾರೆಂಟಿ ಕೊಟ್ಟಿದೆ ಕಾಂಗ್ರೆಸ್ ಸರ್ಕಾರ. ಸರ್ಕಾರಿ‌ ಕಾರ್ಯಕ್ರಮದಲ್ಲಿ‌ ಶಿಷ್ಟಾಚಾರ ಉಲ್ಲಂಘನೆ‌ ಮಾಡಿ, ವೇದಿಕೆಯಲ್ಲಿ ಶಾಸಕರನ್ನ ಅಗೌರವದಿಂದ ಸಂಬೋಧನೆ ಮಾಡಿ, ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಮೇಲೆ ಹಲ್ಲೆಗೆ ನಡೆಸಿರುವುದು ಕಾಂಗ್ರೆಸ್ ಪಕ್ಷದ ಗೂಂಡಾಗಿರಿ ಸಂಸ್ಕೃತಿಯನ್ನ ಪ್ರದರ್ಶನ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಡಿಕೆ.ಶಿವಕುಮಾರ್ ಅವರೇ, ಮತದಾರರು ಆರಿಸಿ ಕಳಿಸಿರುವ ಜನಪ್ರತಿನಿಧಿಗೆ ಅವಮಾನ ಮಾಡುವುದು ಮತದಾರರಿಗೆ ಅವಮಾನ ಮಾಡಿದಂತೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಸ್ವಾಮಿ, ತಮ್ಮ ನಡವಳಿಕೆಯನ್ನ ಜನರು ಗಮನಿಸುತ್ತಿದ್ದಾರೆ ಎನ್ನುವುದನ್ನ ಮರೆಯಬೇಡಿ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ. ಶಾಸಕ ಮುನಿರತ್ನ ಅವರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನರನ್ನೇ ಆಹ್ವಾನಿಸದೆ, ಶಾಸಕರೊಂದಿಗೆ ಉಡಾಫೆಯಿಂದ ವರ್ತಿಸಿರುವುದು ಹಾಗೂ ಅವರು ಧರಿಸಿದ್ದ ಆರ್'ಎಸ್ಎಸ್ ಗಣವೇಶವನ್ನು ಅಪಮಾನಿಸಿರುವುದು ಉದ್ಧಟತನದ ಪರಮಾವಧಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ಅವರ ಈ ನಡೆ ಸರ್ವಾಧಿಕಾರಿತನವನ್ನು ಪ್ರತಿಬಿಂಬಿಸಿದೆ. ಅಧಿಕಾರ ಶಾಶ್ವತವಲ್ಲ, ಅದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನೀಡುವ ಭಿಕ್ಷೆ ಎಂಬ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿರುವ ಅವರ ವರ್ತನೆ ಅತ್ಯಂತ ಖಂಡನೀಯ. ನಿಮ್ಮ ನಡೆ, ನುಡಿ, ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ, ತಕ್ಕ ಉತ್ತರದ ಪಾಠವನ್ನು ಇಷ್ಟರಲ್ಲೇ ನಿಮಗೆ ಕಲಿಸಲಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್, ಯುದ್ಧ ಅಂತ್ಯ ಎಂದು ಟ್ರಂಪ್ ಘೋಷಣೆ

ಸಮೀಕ್ಷೆಗೆ ಸಿಬ್ಬಂದಿ ನಿಯೋಜನೆ: ತುರ್ತು ಪರಿಸ್ಥಿತಿ ನಿಭಾಯಿಸುವುದೇ ಸವಾಲು: ಗ್ರೆಟರ್ ಬೆಂಗಳೂರು ಪ್ರಾಧಿಕಾರ

Tamil Nadu: ವಿಷಯುಕ್ತ 'ಕೋಲ್ಡ್ರಿಫ್' ಸಿರಫ್ : ಸ್ರೆಸನ್ ಫಾರ್ಮಾ ಕಂಪನಿಯ ಲೈಸನ್ಸ್ ರದ್ದುಗೊಳಿಸಿ, ಬಾಗಿಲು ಮುಚ್ಚಿಸಿದ ಸ್ಟಾಲಿನ್ ಸರ್ಕಾರ!

IRCTC case: ಬಿಹಾರ ಚುನಾವಣೆ ಸನಿಹದಲ್ಲಿ ಆರ್ ಜೆಡಿಗೆ 'ಬಿಗ್ ಶಾಕ್' ನೀಡಿದ ದೆಹಲಿ ನ್ಯಾಯಾಲಯ!

SCROLL FOR NEXT