ಶಾಸಕ ಮುನಿರತ್ನ ಮತ್ತು ಕುಸುಮಾ ಹನುಮಂತರಾಯಪ್ಪ 
ರಾಜಕೀಯ

ಕುಸುಮ ಡಿಕೆಶಿ ಪಕ್ಕದಲ್ಲೇ ಇರ್ತಾರೆ, ಡಿ.ಕೆ ರವಿ ಬದುಕಿದ್ದರೆ ನಾನು ಜೈಲಿಗೆ ಹೋಗ್ತಿರಲಿಲ್ಲ: ಶಾಸಕ ಮುನಿರತ್ನ

ಡಿ.ಕೆ. ರವಿ ಬದುಕಿದ್ದಿದರೆ ನಾನು ಜೈಲಿಗೆ ಹೋಗುತ್ತಿರಲಿಲ್ಲ. ಈ ಪರಿಸ್ಥಿತಿಯೂ ಎದುರಾಗುತ್ತಿರಲಿಲ್ಲ. ಕುಸುಮಾ ಅವರಿಗೆ ಶಾಸಕರಾಗುವ ಹುಚ್ಚು ಹಿಡಿದಿದೆ. ಹೀಗಾಗಿ, ಡಿ. ಕೆ.ಶಿವಕುಮಾರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ.

ಬೆಂಗಳೂರು: ಒಂದು ಹೆಣ್ಣಿಗೋಸ್ಕರ ಮತ್ತು ಆ ಹೆಣ್ಣನ್ನು ಎಂಎಲ್‌ಎ ಮಾಡಬೇಕೆಂಬ ಜಿದ್ದಿಗೆ ಬಿದ್ದು ಇಡೀ ಕ್ಷೇತ್ರವನ್ನು ಹಾಳು ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರನ್ನು ಹಿಂದೆ ತಳ್ಳಿ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಥಿ ಕುಸುಮಾ ಕರೆದುಕೊಂಡು ಶಿವಕುಮಾರ್ ಪಾದಯಾತ್ರೆ ಮಾಡಿ ಸಾರ್ವಜನಿಕ ಕುಂದು ಕೊರತೆ ಸ್ವೀಕರಿಸುತ್ತಾರೆ ಎಂದರೆ ಏನು ಹೇಳಬೇಕು. ಒಂದು ಹೆಣ್ಣಿಗೋಸ್ಕರ ಈ ಹೋಗುವುದಾ ಎಂದು ಪ್ರಶ್ನಿಸಿದರು.

ಇಷ್ಟೊಂದು ಜಿದ್ದಿಗೆ ಬಿದ್ದಿರುವುದಕ್ಕೆ ಎರಡೇ ಕಾರಣಗಳಿವೆ. ಒಂದು, ಈ ಕುಸುಮಾ ಅವರನ್ನು ಶಾಸಕಿ ಮಾಡಬೇಕು. ಇನ್ನೊಂದು ಡಿ.ಕೆ.ಸುರೇಶ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದ್ದಕ್ಕೆ ಸೇಡು ತೀರಿಸಿಕೊಳ್ಳಬೇಕು. ಸರ್ಕಾರಿ ಕಾರ್ಯಕ್ರಮಕ್ಕೆ ಶಾಸಕರನ್ನು ಆಹ್ವಾನ ನೀಡಲಾಗಿದೆ ಎಂದು ಕುಸುಮಾ ಹೇಳಿದ್ದಾರೆ. ಸರ್ಕಾರಿ ಆಹ್ವಾನದ ಬಗ್ಗೆ ಹೇಳುವುದಕ್ಕೆ ಇವರು ಯಾರೆಂದು ಪ್ರಶ್ನಿಸಿದರು.

ಡಿ.ಕೆ. ರವಿ ಬದುಕಿದ್ದಿದರೆ ನಾನು ಜೈಲಿಗೆ ಹೋಗುತ್ತಿರಲಿಲ್ಲ. ಈ ಪರಿಸ್ಥಿತಿಯೂ ಎದುರಾಗುತ್ತಿರಲಿಲ್ಲ. ಕುಸುಮಾ ಅವರಿಗೆ ಶಾಸಕರಾಗುವ ಹುಚ್ಚು ಹಿಡಿದಿದೆ. ಹೀಗಾಗಿ, ಡಿ. ಕೆ.ಶಿವಕುಮಾರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಮೊಟ್ಟೆ ಹೊಡಿಸಿ, ರೇಪ್ ಕೇಸ್ ಹಾಕಿಸಿ ಜೈಲಿಗೆ ಕಳುಹಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ, ರಾಜಣ್ಣ, ರೇವಣ್ಣರಿಗೆ ಹನಿ ಟ್ರ್ಯಾಪ್ ಮಾಡಿಸಿದ್ದಾರೆ. ಎಷ್ಟು ಮನೆ ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಆರ್‌ಎಸ್‌ಎಸ್‌ 100ನೇ ವರ್ಷದ ಕಾರ್ಯಕ್ರಮ ಮುಗಿಸಿಕೊಂಡು ಬಂದರೆ, ಶಾಸಕರನ್ನು ಏಯ್ ಕರಿ ಟೋಪಿ ಎಂದು ಉಪ ಮುಖ್ಯಮಂತ್ರಿ ಕರೆಯುತ್ತಾರೆ. ಇದು ಆರ್‌ಆರ್ ನಗರ ಕ್ಷೇತ್ರದ ಮತದಾರರಿಗೆ ಮಾಡಿದ ಅವಮಾನವಾಗಿದೆ. ಕನಕಪುರದ ದೌಜನ್ಯವನ್ನು ಬೆಂಗಳೂರಿನಲ್ಲೂ ಮಾಡುತ್ತಿದ್ದಾರೆ ಎಂದು ದೂರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದಾಗಲು ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT