ಡಾ. ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ; ಡಿಸೆಂಬರ್‌ನಲ್ಲಿ ಸಂಪುಟ ವಿಸ್ತರಣೆ ಸಾಧ್ಯತೆ: ಯತೀಂದ್ರ

ಮಾಜಿ ಸಂಸದ ಪ್ರತಾಪಸಿಂಹ ಅಪ್ರಸ್ತುತ ರಾಜಕಾರಣಿ. ಅವರ ಪಕ್ಷದವರೇ ಕೇಳುವುದಿಲ್ಲ. ನಾವೇಕೆ ಅವರ ಮಾತಿಗೆ ಬೆಲೆ ಕೊಡಬೇಕು. ಆಧಾರ ರಹಿತ ಟೀಕೆಗಳಿಗೆ ಅರ್ಥವಿಲ್ಲ ಎಂದರು.

ರಾಯಚೂರು: ಡಿಸೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು. ರಾಜ್ಯ ಸರ್ಕಾರದಲ್ಲಿ ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ, ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗುತ್ತಾರೆ ಎನ್ನುವ ಕುರಿತಂತೆ ಕೇಳಿ ಬರುತ್ತಿರುವ ಮಾತುಗಳು ಕೇವಲ ಉಹಾಪೋಹ. ಈ ಬಗ್ಗೆ ಹೈಕಮಾಂಡ್‌ ಮಟ್ಟದಲ್ಲಿ ಏನು ಮಾತುಕತೆ ನಡೆದಿದೆ ಎನ್ನುವುದರ ಕುರಿತು ಯಾರಿಗೂ ಗೊತ್ತಿಲ್ಲ.

ಊಹಾಪೋಹದ ಆಧಾರದ ಮೇಲೆಯೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನನಗೆ ತಿಳಿದಿರುವ ಹಾಗೆ ಅಧಿಕಾರ ಹಂಚಿಕೆಯ ಚರ್ಚೆಯೇ ಆಗಿಲ್ಲ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರು ಸಿಎಂ ಪದವಿಗೆ ಅರ್ಹರಾಗಿದ್ದಾರೆ. ಅದಕ್ಕಾಗಿ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ಅನೇಕ ಹಿರಿಯರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಬೇಡಿಕೆಯಿದೆ. ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತೆಯೇ ಮುಖ್ಯಮಂತ್ರಿಯವರು ಸೂಚ್ಯವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಮಾಜಿ ಸಂಸದ ಪ್ರತಾಪಸಿಂಹ ಅಪ್ರಸ್ತುತ ರಾಜಕಾರಣಿ. ಅವರ ಪಕ್ಷದವರೇ ಕೇಳುವುದಿಲ್ಲ. ನಾವೇಕೆ ಅವರ ಮಾತಿಗೆ ಬೆಲೆ ಕೊಡಬೇಕು. ಆಧಾರ ರಹಿತ ಟೀಕೆಗಳಿಗೆ ಅರ್ಥವಿಲ್ಲ ಎಂದರು. ಬಿಜೆಪಿ ಶಾಸಕ ಮುನಿರತ್ನ ಕಾಂಗ್ರೆಸ್‌ನಲ್ಲೇ ಇದ್ದವರು. ಸಲುಗೆಯಿಂದ ಅವರನ್ನು ‘ಕರಿ ಟೋಪಿ’ ಎಂದು ಕರೆದಿರಬಹುದು. ಅದನ್ನು ದೊಡ್ಡದು ಮಾಡುವ ಅವಶ್ಯಕತೆಯಿಲ್ಲ‘ ಎಂದು ಪ್ರತಿಕ್ರಿಯಿಸಿದರು.

‘ಡಿ.ಕೆ. ಶಿವಕುಮಾರ್ ಅವರಿಗೆ ಶಿಷ್ಟಾಚಾರ ಗೊತ್ತಿದೆ. ಡಿಸಿಎಂ ಭೇಟಿ ವೇಳೆ ಶಾಸಕರನ್ನು ಕರಿಯಲೇಬೇಕು ಎಂದಿಲ್ಲ. ಮುನಿರತ್ನ ಅವರಿಗೆ ಜನರ ಕಾಳಜಿ ಇದ್ದರೆ ಹೋಗಬೇಕಿತ್ತು‘ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1,600 ಹುದ್ದೆ ಶೀಘ್ರವೇ ಭರ್ತಿ: ಜಿ. ಪರಮೇಶ್ವರ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

SCROLL FOR NEXT