ಬಿ.ಕೆ ಹರಿಪ್ರಸಾದ್ 
ರಾಜಕೀಯ

RSS ಹಾಗೂ ಸಂಘ ಪರಿವಾರ ಕಾನೂನನ್ನೂ ಮೀರಿದವರೇ? ದೇಶದ ಯಾವ ನೀತಿ, ನಿಯಮಗಳು ಅನ್ವಯಿಸುವುದಿಲ್ಲವೇ?

ಸಂವಿಧಾನವನ್ನು ಒಪ್ಪಿಕೊಂಡವರು ಸರ್ಕಾರದ ನೀತಿ, ನಿಯಮಗಳನ್ನು ಪಾಲಿಸಬೇಕಾದ್ದೂ ಮೊದಲ ಕರ್ತವ್ಯ. ಪ್ರಜೆಗಳು ಮಾತ್ರವಲ್ಲ, ಯಾವ ಸಂಘ ಸಂಸ್ಥೆಗಳು ಕೂಡ ಕಾನೂನುಗಳನ್ನು ಮೀರಿ ವರ್ತನೆ ಮಾಡುವಂತಿಲ್ಲ.

ಬೆಂಗಳೂರು: ಬಿಜೆಪಿ ಹೇಳೋದು ಮಾತ್ರ ಆಚಾರ, ನಡೆದುಕೊಳ್ಳುವುದೆಲ್ಲ ಅನಾಚರವೇ. ಶಾಲೆ, ಸರ್ಕಾರಿ ಆವರಣಗಳು ಶಿಕ್ಷಣೇತರ ಚಟುವಟಿಕೆಗಳಿಂದ ದೂರ ಇರಬೇಕೆಂದು ಬಿಜೆಪಿ ಸರ್ಕಾರದ ಅವಧಿಯಲ್ಲೇ ಆದೇಶ ಮಾಡಿರುವುದನ್ನ ಬಿಜೆಪಿ ಮರೆತಂತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಂವಿಧಾನವನ್ನು ಒಪ್ಪಿಕೊಂಡವರು ಸರ್ಕಾರದ ನೀತಿ, ನಿಯಮಗಳನ್ನು ಪಾಲಿಸಬೇಕಾದ್ದೂ ಮೊದಲ ಕರ್ತವ್ಯ. ಪ್ರಜೆಗಳು ಮಾತ್ರವಲ್ಲ, ಯಾವ ಸಂಘ ಸಂಸ್ಥೆಗಳು ಕೂಡ ಕಾನೂನುಗಳನ್ನು ಮೀರಿ ವರ್ತನೆ ಮಾಡುವಂತಿಲ್ಲ. ಆರ್.ಎಸ್ಎಸ್ ಹಾಗೂ ಸಂಘ ಪರಿವಾರ ಕಾನೂನನ್ನೂ ಮೀರಿದವರೇ? ದೇಶದ ಯಾವ ನೀತಿ,ನಿಯಮ,ಕಾನೂನುಗಳು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನವನ್ನು ಒಪ್ಪದವರು, ಸಂವಿಧಾನವನ್ನು ಪಾಲಿಸದವರಿಂದ ಶಾಂತಿ,ಸೌಹಾರ್ದತೆ, ಸಹಬಾಳ್ವೆ ನಿರೀಕ್ಷಿಸಲು ಸಾಧ್ಯವಿಲ್ಲ. ಅನೈತಿಕ, ಅಕ್ರಮ ಚಟುವಟಿಕೆಗಳನ್ನು ನಡೆಸುವ ಉದ್ದೇಶಕ್ಕಾಗಿಯೇ ಆರ್‌ಎಸ್ಎಸ್ ಸಂಘಟನೆ ನೊಂದಾವಣಿ ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟ.

ಈ ಕಾರಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭೂಗತವಾಗಿಯೇ ತನ್ನ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ. ಇಂತಹ ಸಮಾಜ ಘಾತುಕ ಸಂಘಟನೆಗಳ ಉಪಟಳಕ್ಕೆ ಕಡಿವಾಣ ಹಾಕಲೇಬೇಕು. ಸರ್ಕಾರ ಕೂಡಲೇ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಮದುವೆಯಾದ ಎರಡೇ ದಿನಕ್ಕೆ ವಧು ನಿಗೂಢ ಸಾವು; ವರದಕ್ಷಿಣೆ ಹತ್ಯೆ ಎಂದು ಕುಟುಂಬ ಆರೋಪ

SCROLL FOR NEXT