ಸಿಎಂ ಸಿದ್ದರಾಮಯ್ಯ,ಸಂಸದ ತೇಜಸ್ವಿ ಸೂರ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಅಮವಾಸ್ಯೆ ತೇಜಸ್ವಿ ಸೂರ್ಯ, ಕೇಂದ್ರದಿಂದ ಹಣ ತರಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ!

ಸಂಸದ ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರು ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಆತ ಕೂಡಾ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ.

ಬೆಂಗಳೂರು: ದಕ್ಷಿಣದಲ್ಲಿ ಇದಾನಲ್ಲ, ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಅನುದಾನ ತರಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್‌ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಿ.ವಿ.ಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್‌ನಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಿಂದ ಆರಿಸಿ ದೆಹಲಿಗೆ ಕಳುಹಿಸಿರುವ ರಾಜ್ಯದ ಸಂಸದರು ಕರ್ನಾಟಕಕ್ಕೆ ಕೊಡಬೇಕಾದ ದುಡ್ಡನ್ನು ಕೇಂದ್ರದ ಬಳಿ ಕೇಳಲ್ಲ ಎಂದು ಗುಡುಗಿದರು.

ಸಂಸದ ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರು ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಆತ ಕೂಡಾ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ. ಮಂತ್ರಿ ಆಗಿರುವ ಕುಮಾರಸ್ವಾಮಿ ಕೂಡ ಕೇಂದ್ರದ ಬಳಿ ಹಣ ಕೇಳಿಲ್ಲ. ಅದಕ್ಕೆ ಕುಮಾರಸ್ವಾಮಿ ಸೇರಿ ಎಲ್ಲ ಸಂಸದರನ್ನು ಸೋಲಿಸಿ ಎಂದು ಕರೆ ನೀಡಿದರು.

ಪ್ರಧಾನಿ ಮೋದಿಗೆ ಕರ್ನಾಟಕದ ಮೇಲೆ ದ್ವೇಷವಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಣ ಬರಲ್ಲ. ನಾವು ಕೊಟ್ಟ ತೆರಿಗೆ ಹಣವೂ ವಾಪಸ್ ಕೊಡಲ್ಲ. ಕೇಂದ್ರಕ್ಕೆ ತೆರಿಗೆ ರೂಪದಲ್ಲಿ ಒಂದು ರೂಪಾಯಿ ಕೊಡ್ತೇವೆ. ಆದರೆ ನಮಗೆ ಕೇಂದ್ರದಿಂದ 14-15 ಪೈಸೆ ತೆರಿಗೆ ವಾಪಾಸ್ ಬರುತ್ತದೆ ಅಷ್ಟೇ. ಇನ್ನೂ ಬಿಜೆಪಿಯವರು ಕೇಂದ್ರದ ಹಣ ಅಂತಾರೆ. ಬಿಜೆಪಿಯವರು ಜಿಎಸ್‌ಟಿ ಇಳಿಕೆಯನ್ನ ದೀಪಾವಳಿ ಗಿಫ್ಟ್ ಅಂತಾ ಬ್ಯಾನರ್ ಹಾಕಿಕೊಳ್ಳುತ್ತಾರೆ. ಎಂಟು ವರ್ಷ ತೆರಿಗೆ ವಸೂಲಿ ಮಾಡಿ ಈಗ ದೀಪಾವಳಿ ಗಿಫ್ಟ್ ಅಂತೆ. ಯಾವ ದೀಪಾವಳಿ ಗಿಫ್ಟ್ ಅಪ್ಪ ಇದು ಎಂದು ಕಿಡಿಕಾರಿದರು.

ಗಾಂಧಿನಗರ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಯೋಜನೆ ಇಲಾಖೆ ಸಚಿವರಾದ ಡಿ. ಸುಧಾಕರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಮತ್ತಿತರರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರ DCM ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ದೇವೆಂದ್ರ ಫಡ್ನವೀಸ್‌ ಭಾಗಿ, ಸಕಲ ಗೌರವದೊಂದಿಗೆ ಭಾವಪೂರ್ಣ ಅಂತಿಮ ವಿದಾಯ

ಆತ್ಮವಿಶ್ವಾಸದ ಭಾರತ ಇಂದು ಜಗತ್ತಿಗೆ ಭರವಸೆಯ ದಾರಿದೀಪವಾಗಿದೆ, ಸುಗಮ ಬಜೆಟ್ ಅಧಿವೇಶನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಮನವಿ-Video

Ajit Pawar Plane Crash: ವಿಮಾನ ದುರಂತ ಸ್ಥಳದಲ್ಲಿ Black Box ಪತ್ತೆ..!

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

ತಮಿಳು ನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ, ಒಪ್ಪಂದಕ್ಕೆ ಬಾರದ ಮಾತುಕತೆ, ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?

SCROLL FOR NEXT