ಗೃಹ ಸಚಿವ ಜಿ ಪರಮೇಶ್ವರ್ 
ರಾಜಕೀಯ

ಯತೀಂದ್ರ ಹೇಳಿದ್ರಲ್ಲಿ ತಪ್ಪೇನಿದೆ? ಸತೀಶ್ ಜಾರಕಿಹೊಳಿ ಪರ ಸಚಿವ ಪರಮೇಶ್ವರ್ ಬ್ಯಾಟಿಂಗ್; Video

ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ ಸಿಎಲ್ಪಿ ಸಭೆ ಕರೆಯುತ್ತಾರೆ.

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ್ ಜಾರಕಿಹೊಳಿ ಹೆಸರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಸತೀಶ್ ಜಾರಕಿಹೊಳಿಯವರು ಹಿಂದೆ ಅಹಿಂದ ಚಳುವಳಿಯಲ್ಲಿದ್ದರು. ಅವರಿಗೆ ಆ ಬದ್ಧತೆ ಇದೆ ಎಂದು ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ ಎಂದು ಹೇಳಿದರು.

ಇದೇ ವೇಳೆ ಸಿಎಂ ರೇಸ್ ನಲ್ಲಿ ತಮ್ಮ ಹೆಸರಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ ಸಿಎಲ್ಪಿ ಸಭೆ ಕರೆಯುತ್ತಾರೆ.

ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್ ಗೆ ವರದಿ ಕೊಟ್ಟು ನಂತರ ಘೋಷಣೆ ಆಗುತ್ತದೆ. ಇದು ಪದ್ಧತಿ. ಇದನ್ನು ಶಾರ್ಟ್ ಕಟ್ ಹೇಗೆ ಮಾಡುತ್ತಾರೆ ಹೇಳಿ ಎಂದು ಪ್ರಶ್ನಿಸಿದರು. ಇದೇ ವೇಳೆ ನಾನು, ಸತೀಶ್, ಮಹಾದೇವಪ್ಪ ಕಾಫಿಗೆ ಸೇರಿದ್ದೆವು ಅಷ್ಟೇ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!