ಶಿವಗಂಗಾ ಬಸವರಾಜ  
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್ ಇರುವ ಪಕ್ಷ, ಮೈಸೂರು ಅರಮನೆಯಲ್ಲ; CM ಮಗ ಅಂತಾ ಏನ್ ಬೇಕಾದ್ರೂ ಮಾತಾಡ್ಬೋದಾ: ಶಿವಗಂಗಾ ಬಸವರಾಜ; Video

2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಇಂತವರ ಬಗ್ಗೆ ಹೈ ಕಮಾಂಡ್ ಗಮನಹರಿಸಬೇಕು. ಒಂದು ವೇಳೆ ಈ ರೀತಿಯಾಗಿ ನಾನು ಹೇಳಿಕೆ ಕೊಟ್ರೆ ನೋಟಿಸ್ ಕೊಡ್ತಾರೆ. ಆದ್ರೆ ಮುಖ್ಯಮಂತ್ರಿಗಳ ಮಕ್ಕಳಾದ್ರೆ ಸುಮ್ಮನೆ ಇರೋದು ಸರಿಯಲ್ಲ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿ ಕಿತ್ತಾಟ ಜೋರಾಗುತ್ತಿದೆ. ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತೆ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ನೀಡಿರುವ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಪರಮಾಪ್ತ, ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಉತ್ತರಾಧಿಕಾರಿ ಯಾರು ಎಂಬುದು ಹೈ ಕಮಾಂಡ್ ತೀರ್ಮಾನಿಸಲಿದೆ ಎಂದಿದ್ದಾರೆ. ಯತೀಂದ್ರ ಈ ತರ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಬಾರದು. ಈ ರೀತಿಯ ಬಾಲಿಶ ಹೇಳಿಕೆ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಅಂತ ಯತೀಂದ್ರ ವಿರುದ್ಧ ಶಿವಗಂಗಾ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ

2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಇಂತವರ ಬಗ್ಗೆ ಹೈ ಕಮಾಂಡ್ ಗಮನ ಹರಿಸಬೇಕು. ಒಂದು ವೇಳೆ ಈ ರೀತಿಯಾಗಿ ನಾನು ಹೇಳಿಕೆ ಕೊಟ್ರೆ ನೋಟಿಸ್ ಕೊಡ್ತಾರೆ. ಆದ್ರೆ ಮುಖ್ಯಮಂತ್ರಿಗಳ ಮಕ್ಕಳಾದ್ರೆ ಸುಮ್ಮನೆ ಇರೋದು ಸರಿಯಲ್ಲ.

ಈ ಬಗ್ಗೆ ಹೈಕಮಾಂಡ್ ಕ್ರಮ‌ ಕೈಗೊಳ್ಳಲಿ ಎಂದು ಶಿವಗಂಗಾ ಬಸವರಾಜ್ ಆಗ್ರಹಿಸಿದ್ದಾರೆ. ಸತೀಶ್ ಜಾರಕಿಹೊಳಿ ಸಾಹೇಬರು 2032ಕ್ಕೆ ಸಿಎಂ ಕ್ಲೈಮ್ ಮಾಡುತ್ತೇನೆ ಅಂತ ಹೇಳಿದ್ದಾರೆ. ಆ ವೇಳೆ ನಾವು ಅವರಿಗೆ ಬೆಂಬಲ ನೀಡುತ್ತೇನೆ ಅಂತ ಶಿವಗಂಗಾ ಬಸವರಾಜು ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಇರುವ ಪಕ್ಷ, ಮೈಸೂರು ಅರಮನೆಯಲ್ಲ. ಮೈಸೂರು ರಾಜಮನೆತನದಲ್ಲಿ ವಂಶಪಾರಂಪರ್ಯ ಇರುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಆ ರೀತಿ ವ್ಯವಸ್ಥೆ ಇಲ್ಲ, ಹೈಕಮಾಂಡ್ ತೀರ್ಮಾನ ಮಾಡ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರಬೇಕು ಎಂದರು.

ಎಲ್ಲರೂ ನವೆಂಬರ್ ಕ್ರಾಂತಿ ಅಂಥಾ ಹೇಳ್ತಾರೆ, ನಾನು ಡಿಸೆಂಬರ್ ಎಂದಿದ್ದೇನೆ. ಡಿಸೆಂಬರ್ ನಂತರ ಆಗೇ ಆಗ್ತದೆ ಅದರ ಬಗ್ಗೆ ಮಾತನಾಡೋದು ಬೇಡ ಎಂದು ಡಿಸೆಂಬರ್ ವೇಳೆ ಡಿಕೆಶಿ ಸಿಎಂ ಆಗ್ತಾರೆ ಎಂದು ಪರೋಕ್ಷ ಹೇಳಿಕೆಯನ್ನು ಶಿವಗಂಗಾ ಬಸವರಾಜ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್‌ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋ

ಅಲ್ಬೇನಿಯಾದ ಎಐ ಸಚಿವೆ ಈಗ ಗರ್ಭಿಣಿ, 83 ಮಕ್ಕಳ ತಾಯಿ..: ಅಲ್ಬೇನಿಯಾ ಪ್ರಧಾನಿ ಎಡಿ ರಾಮ ವಿಲಕ್ಷಣ ಘೋಷಣೆ!

ICC Womens World Cup 2025: ಭಾರತ-ಬಾಂಗ್ಲಾದೇಶ ಪಂದ್ಯ ಮಳೆಗಾಹುತಿಚ ಸೆಮೀಸ್ ನಲ್ಲಿ ಇಂಡಿಯಾ-ಆಸಿಸ್ ಮುಖಾಮುಖಿ!

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ

ಭಯೋತ್ಪಾದಕರ ಪಟ್ಟಿಗೆ Bollywood ನಟ ಸಲ್ಮಾನ್ ಖಾನ್ ಹೆಸರು ಸೇರಿಸಿದ ಪಾಕಿಸ್ತಾನ!

SCROLL FOR NEXT