ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ "72ನೇ ಸಹಕಾರ ಸಪ್ತಾಹ" ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ  
ರಾಜಕೀಯ

'ನೀನು ಹಾಗೆ ಮಾತನಾಡಿದ್ದೀಯ ಎಂದು ಯತೀಂದ್ರನ್ನ ಕೇಳಿದೆ, ಅದಕ್ಕವನು ಹೀಗೆ ಹೇಳಿದ...': ಪುತ್ರನ 'ಉತ್ತರಾಧಿಕಾರಿ' ಹೇಳಿಕೆಗೆ ಸಿಎಂ ಸಿದ್ದರಾಮಯ್ಯ; Video

ಈ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ಹೇಳಿಕೆ ಬಗ್ಗೆ ಎಂಎಲ್​ಸಿ ಡಾ.ಯತೀಂದ್ರ ಬಳಿಯೇ ಕೇಳಿದೆ.

ಬೆಂಗಳೂರು: ಬೆಳಗಾವಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಡಾ ಯತೀಂದ್ರ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಬಗ್ಗೆ ನೀಡಿದ್ದ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ನಾನಾ ವಿಶ್ಲೇಷಣೆಯೂ ನಡೆಯುತ್ತಿದೆ.

ಈ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ಹೇಳಿಕೆ ಬಗ್ಗೆ ಎಂಎಲ್​ಸಿ ಡಾ.ಯತೀಂದ್ರ ಬಳಿಯೇ ಕೇಳಿದೆ. ಅದು ಸೈದ್ಧಾಂತಿಕವಾಗಿ ಮಾತ್ರ ಅಂತ ಹೇಳಿದ್ದಾರೆ. ಇಂಥವರೇ ಸಿಎಂ ಆಗಬೇಕು ಎಂದು ಡಾ.ಯತೀಂದ್ರ ಹೇಳಿಲ್ಲ. ತಿರುಚಿ ಏನಾದ್ರೂ ಹೇಳಿದ್ದಾರಾ ಎಂದು ಡಾ.ಯತೀಂದ್ರಗೆ ಕೇಳಿದೆ. ಇಲ್ಲ, ನಾನು ಸೈದ್ಧಾಂತಿಕವಾಗಿ ಮಾತಾಡಿದ್ದು ಎಂದಿದ್ದಾರೆ ಎಂದರು.

ಸೈದ್ಧಾಂತಿಕವಾಗಿ ಮಾತನಾಡಿದೆ ಎಂದ

ಯತೀಂದ್ರ ಮಾತನಾಡಿರುವ ವಿಷಯ ಅಷ್ಟು ಸುದ್ದಿಯಾದಾಗ ನಾನೇ ಅವನ ಬಳಿ ನೀನು ಏನು ಮಾತನಾಡಿದ್ದೀಯಾ ಎಂದು ಕೇಳಿದೆ, ಅದಕ್ಕೆ ಅವನು ಸೈದ್ಧಾಂತಿಕವಾಗಿ ಮಾತನಾಡಿದ್ದೀನಿ ಎಂದ. ಇಂಥವರೇ ಮುಂದೆ ಮುಖ್ಯಮಂತ್ರಿಯಾಗಬೇಕೆಂದು ಹೇಳಿಲ್ಲ.

ಅವರು ಆ ಮಾತುಗಳನ್ನು ಏಕೆ ಹೇಳಬೇಕಾಗಿತ್ತು ಎಂದದ್ದಕ್ಕೆ ಈಗ ನೀವು ಕೇಳಿದ್ದೀರಲ್ಲ, ನೀವು ಸುಮ್ನಿರಲ್ಲ, ಏನೋ ಪ್ರಶ್ನೆ ಕೇಳುತ್ತೀರಿ, ಹಾಗೆ ಅಲ್ಲಿ ಕೂಡ ಯಾರೋ ಏನೋ ಪ್ರಶ್ನೆ ಕೇಳಿರಬೇಕು, ಅದಕ್ಕೆ ಯತೀಂದ್ರ ಉತ್ತರ ನೀಡಿರಬೇಕು ಎಂದರು.

ಇಲ್ಲಿ ನಾವು ಸಹಕಾರ ಸಪ್ತಾಹದ ಬಗ್ಗೆ ಮಾತನಾಡಲು ಬಂದಿರುವುದು, ನೀವು ಈ ಪ್ರಶ್ನೆ ಕೇಳಿದ್ದೀರಿ, ಹಾಗೆಯೇ ಅಲ್ಲಿ ಕೂಡ ಯಾರೋ ಏನೋ ಪ್ರಶ್ನೆ ಕೇಳಿರಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!

ಮಂಡ್ಯ: ವಿಸಿ ಫಾರಂನಲ್ಲಿ 14 ಕೋಟಿ ರೂ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಭೂಮಿಪೂಜೆ!

ಮಂಡಿಯೂರಿದ ಕೇಂದ್ರ: ಜೋಧಪುರ ಜೈಲಿನಿಂದ ಸೋನಮ್ ವಾಂಗ್ಚುಕ್ ಬಿಡುಗಡೆ

ಹೊಸ ನಟಿಯರನ್ನು ಆಮಿಷಕ್ಕೆ ಒಳಪಡಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ: ನಟಿ ತನುಶ್ರೀ ದತ್ತಾ

SCROLL FOR NEXT