ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ 
ರಾಜಕೀಯ

ಬಿಹಾರ ಚುನಾವಣೆ ಫಲಿತಾಂಶ ಮರುದಿನವೇ ದೆಹಲಿಗೆ ಸಿದ್ದರಾಮಯ್ಯ ಭೇಟಿ: ತೀವ್ರ ಕುತೂಹಲ

ದೆಹಲಿಯಲ್ಲಿ 2-3 ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆಂದು ಹೇಳಲಾಗುತ್ತಿದೆ.

ಬೆಂಗಳೂರು: ರಾಜ್ಯ ಸಚಿವ ಪುನಾರಚನೆ ಹಾಗೂ ನವೆಂಬರ್ ಕ್ರಾಂತಿ ವದಂತಿ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. ಭೇಟಿ ಕುರಿತು ಊಹಾಪೋಹಗಳು ಹೆಚ್ಚಾಗಿವೆ.

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನ.14ರಂದು ಪ್ರಕಟವಾಗಲಿದ್ದು, ಅದಾದ ಮರುದಿನವೇ ಅಂದರೆ ನ.15ರಂದು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ 2-3 ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆಂದು ಹೇಳಲಾಗುತ್ತಿದೆ.

ಹಿರಿಯ ನಾಯಕ ಕಪಿಲ್‌ ಸಿಬಲ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. ಆದರೆ, ಪುಸ್ತಕ ಬಿಡುಗಡೆಗೆ ತೆರಳಲಿರುವವರು ಮೂರು ದಿನ ಅಲ್ಲೇ ಉಳಿದುಕೊಳ್ಳುವ ಚಿಂತನೆಯನ್ನೂ ಹೊಂದಿರುವುದರಿಂದ ಕುತೂಹಲಗಳು ಹೆಚ್ಚಾಗಿವೆ.

ಈ ಮೂರು ದಿನಗಳ ಭೇಟಿ ವೇಳೆ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಈ ವೇಳೆ ಸಂಪುಟ ವಿಸ್ತರಣೆ/ಪುನರ್‌ ರಚನೆ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ಚನ್ನಮ್ಮನ ಕಿತ್ತೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಂಪುಟ ಪುನಾರಚನೆ/ವಿಸ್ತರಣೆ ಕುರಿತ ವದಂತಿಯನ್ನು ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿಗೆ ಹೋದಾಗಲೆಲ್ಲ ನಾಯಕರನ್ನು ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸುತ್ತೇನೆ. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಆಡಳಿತದ ಬಗ್ಗೆ ತಿಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುತ್ತೇವೆ. ಅದೇ ರೀತಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿರುವಂತೆ ಕಿತ್ತೂರು ಕರ್ನಾಟಕಕ್ಕೂ ಸ್ಥಾಪಿಸಲು ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

SCROLL FOR NEXT