ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವೋಟ್ ಚೋರಿ ಆರೋಪ ಕೇಂದ್ರ ಚುನಾವಣಾ ಆಯೋಗ ಮೇಲೆ ಅನುಮಾನ ಮೂಡುವಂತೆ ಮಾಡಿತ್ತು. ಅಲ್ಲದೆ ಮಹದೇವಪುರದಲ್ಲಿ ವೋಟ್ ಚೋರಿ ಆಗಿದೆ ಎಂದು ಆರೋಪ ಮಾಡಲಾಗಿದೆ.

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವೋಟ್ ಚೋರಿ ಆರೋಪ ಕೇಂದ್ರ ಚುನಾವಣಾ ಆಯೋಗ ಮೇಲೆ ಅನುಮಾನ ಮೂಡುವಂತೆ ಮಾಡಿತ್ತು. ಅಲ್ಲದೆ ಮಹದೇವಪುರದಲ್ಲಿ ವೋಟ್ ಚೋರಿ ಆಗಿದೆ ಎಂದು ಆರೋಪ ಮಾಡಲಾಗಿದ್ದು ಆಳಂದ ಕ್ಷೇತ್ರದ ವೋಟ್ ಚೋರಿ ಕುರಿತಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ಇದರ ಮಧ್ಯೆ ರಾಜ್ಯದಲ್ಲಿ ಕಾಂಗ್ರೆಸ್ 'ವೋಟ್‌ ಚೋರ್‌ ಗದ್ದಿ ಛೋಡೊ' ಅಭಿಯಾನದ ಸಹಿ ಸಂಗ್ರಹ ಸಹ ನಡೆಸುತ್ತಿದೆ. ಬೆಂಗಳೂರಿನಲ್ಲಿ ನಡೆದ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಜರಿದಿದ್ದಾರೆ. ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಒಬ್ಬ ರಾಜಕೀಯ ಫುಡಾರಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮತಗಳ್ಳತನವನ್ನು ಸಾಕ್ಷಿ ಸಮೇತ ಬಹಿರಂಗಪಡಿಸಿದ್ದರೂ ಚುನಾವಣಾ ಆಯುಕ್ತರು ಮಾತ್ರ ರಾಹುಲ್ ಗಾಂಧಿಯ ತೇಜೋವಧೆ ಮಾಡುತ್ತಿದ್ದಾರೆ. ಅವರು ರಾಜಕೀಯ ಪುಢಾರಿ ರೀತಿ ಮಾತನಾಡುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

ವಿರೋಶ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ, ಆಶಿಕಾ

ED ದಾಳಿ ಭೀತಿ, ಉದ್ಯಮಿ CJ Roy ರೀತಿಯಲ್ಲೇ BBMP ನಿವೃತ್ತ ಎಂಜಿನಿಯರ್ ಆತ್ಮಹತ್ಯೆಗೆ ಶರಣು!

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

SCROLL FOR NEXT