ಪ್ರತಾಪ್ ಸಿಂಹ ಮತ್ತು ಉದಯ್ 
ರಾಜಕೀಯ

ಸಿಂಹ ಅಲ್ಲ 'ನಾಯಿ' ಎಂದು ಹೆಸರಿಡಬೇಕಿತ್ತು; ಕಚ್ಚೆ ಹರುಕನಿಗೆ ಟಿಕೆಟ್ ಕೊಡದೆ ಬಿಜೆಪಿಯವರೇ ಕ್ಯಾಕರಿಸಿ ಉಗಿದು ಮನೆಯಲ್ಲಿ ಕೂರಿಸಿದ್ದಾರೆ!

ಇವನ ನಡೆತೆ ಸರಿಯಿಲ್ಲ, ಕಚ್ಚೆಹರುಕ ಎಂದು ಮೈಸೂರಿನಲ್ಲಿ ಹಲವರು ಮಾತನಾಡ್ತಾರೆ, ಅವನ ಹೆಂಡತಿಯೇ ಅವನ ಕಾಟ ಸಹಿಸಿಕೊಳ್ಳಲಾಗದೆ ಬಿಜೆಪಿ ಹೈಕಮಾಂಡ್‍ಗೆ ಲೆಟರ್ ಬರೆದಿದ್ದಾರೆ.

ಮಂಡ್ಯ: ಅವನ್ಯಾರೋ ಪ್ರತಾಪ ಸಿಂಹನಂತೆ, ಅಪ್ಪಿತಪ್ಪಿ ಸಿಂಹ ಅಂತ ಹೆಸರಿಟ್ಟುಬಿಟ್ಟವರೆ. ಅತನ ಹೆಸರ ಮುಂದೆ ‘ನಾಯಿ’ ಅಂತ ಹೆಸರಿಡಬೇಕಾಗಿತ್ತು. ಅವನ ಹಿನ್ನೆಲೆ ಎಲ್ಲ ಗೊತ್ತಿದೆ. ಇವನ ನಡೆತೆ ಸರಿಯಿಲ್ಲ, ಕಚ್ಚೆಹರುಕ ಎಂದು ಮೈಸೂರಿನಲ್ಲಿ ಹಲವರು ಮಾತನಾಡ್ತಾರೆ ಎಂದು ಮದ್ದೂರು ಶಾಸಕ ಕೆ ಎಂ ಉದಯ್ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮದ್ದೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅವನ ಹೆಂಡತಿಯೇ ಅವನ ಕಾಟ ಸಹಿಸಿಕೊಳ್ಳಲಾಗದೆ ಬಿಜೆಪಿ ಹೈಕಮಾಂಡ್‍ಗೆ ಲೆಟರ್ ಬರೆದಿದ್ದಾರೆ. ಬಿಜೆಪಿಯವರೇ ಟಿಕೆಟ್ ಕೊಡದೆ ಕ್ಯಾಕರಿಸಿ ಉಗಿದು ಮನೆಯಲ್ಲಿ ಕೂರಿಸಿದ್ದಾರೆ. ಇಂತಹವನು ಇಲ್ಲಿ ಬಂದು ಮಂಡ್ಯ ಜನಕ್ಕೆ ತಿಳಿವಳಿಕೆ ಹೇಳ್ತಾನಂತೆ. ಇದನ್ನು ನಂಬಬೇಕಾ ನಮ್ಮ ಜನ? ಎಂದು ಪ್ರಶ್ನಿಸಿದ್ದಾರೆ.

ಮಂಡ್ಯವನ್ನು ಮಂಗಳೂರು ಮಾಡಲು ಹೊರಟಿದ್ದಾರೆ. ಅಲ್ಲಿ ಇವರ ಪ್ರಚೋದನೆಯಿಂದ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ. ಇಲ್ಲಿಯೂ ಅದನ್ನು ಮಾಡಲು ಹೊರಟಿದ್ದಾರೆ. ಆದರೆ, ಮಂಡ್ಯದ ಪ್ರಬುದ್ಧ ಜನ ಇಂತಹದ್ದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಕಿಡಿಕಾರಿದರು. ಮದ್ದೂರಿನ ಗಣೇಶಮೂರ್ತಿ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ರಾಜಕೀಯಕ್ಕೆ ದುರುಪಯೋಗಪಡಿಸಿಕೊಳ್ಳುವ ಕೆಲಸಕ್ಕೆ ಕೆಲವರು ನಿಂತಿದ್ದಾರೆ. ನಮ್ಮ ಜನ ಇಂತಹದ್ದನ್ನು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇನ್ನು ಮುಂದಾದರೂ ಬೆಂಕಿಹಚ್ಚುವ ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಕಲ್ಲು ತೂರಾಟ ನಡೆಸಿದವರಿಗೆ ಕ್ಷಮೆಯೇ ಇಲ್ಲ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಆಗುತ್ತದೆ. ಯಾವ ಪಕ್ಷದವರೇ ಆದರೂ ಸಮಾಜದ ಶಾಂತಿ ಕಾಪಾಡುವ ಕೆಲಸ ಮಾಡಬೇಕು. ರಾಜಕೀಯ ಲಾಭಕ್ಕೋಸ್ಕರ ಬೆಂಕಿ ಹಚ್ಚುವ ಕೆಲಸವನ್ನು ನಾವು ಖಂಡಿಸುತ್ತೇವೆ. ಎಲ್ಲಿಂದಲೋ ಬಂದು ಇಲ್ಲಿನ ಜನರನ್ನು ಪರಸ್ಪರ ಎತ್ತಿಕಟ್ಟುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಸಲಹೆ ನೀಡಿದರು.

ಇವರ(ಬಿಜೆಪಿ) ಸರಕಾರದಲ್ಲಿ ಮದ್ದೂರು ತಾಲೂಕಿಗೆ ಕೊಡುಗೆ ಏನಿದೆ? ಹಿಂದೂ ಜನಾಂಗಕ್ಕಾಗಲೀ, ದೇವಸ್ಥಾನಗಳಿಗಾಗಲೀ ಏನು ಕೊಟ್ಟಿದ್ದಾರೆ? ರಸ್ತೆ ಮಾಡಿಸಿದ್ದಾರ? ರೈತರ ನೀರಾವರಿಗೆ ಸಹಾಯ ಮಾಡಿದ್ದಾರ? ಆದರೆ, ನಮ್ಮ ಸರಕಾರದಲ್ಲಿ 1,500 ರೂ.ಗಳ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವುದಕ್ಕೆ ಸಾಕ್ಷಿ ಇದೆ. ಇಂತಹ ಆಟವನ್ನೆಲ್ಲಾ ಬಿಡಬೇಕು ಎಂದು ಅವರು ತಿರುಗೇಟು ನೀಡಿದರು.

ನಾನು ಮೋಜು ಮಾಡಕ್ಕೆ ವಿದೇಶಕ್ಕೆ ಹೋಗಿದ್ದೆ ಅಂತ. ಇವರಪ್ಪನಿಗೆ ಅಧಿಕಾರ ಬರಬೇಕಾದರೆ ಯಾರು ಕಷ್ಟಪಟ್ಟರು ಎನ್ನುವುದನ್ನು ಅಷ್ಟುಬೇಗ ಮರೆತುಬಿಟ್ಟವನೆ. ಅವರಪ್ಪನ ಮೇಲೆ ಎಷ್ಟು ಕೇಸ್ ಫಿಕ್ಸ್ ಆಗಿವೆ? ಲಂಚ, ಪೋಕ್ಸೋ, ರೇಪ್ ಕೇಸ್ ಫಿಕ್ಸ್ ಮಾಡಿಸಿಕೊಂಡು ಜೈಲಿಗೋದೋರು ಯಾರು? ಇಂತಹವರು ಬಂದು ಮದ್ದೂರು ಉದ್ಧಾರ ಮಾಡ್ತಾರ?ಎಂದು ಅವರು ಬಿ.ವೈ.ವಿಜಯೇಂದ್ರ ವಿರುದ್ದ ಆಕ್ರೋಶ ಹೊರಹಾಕಿದರು.

ತೊಡೆ ಮುರಿತಾನಂತೆ, ಕತ್ತು ತೆಗೆಯುತ್ತಾನಂತೆ. ಯಾರೋ ಮಲೆನಾಡಿನಿಂದ ಬಂದವನೋ, ಶಿವಮೊಗ್ಗದಿಂದ ಬಂದವನೋ. ಅವನಿಂದ ಬುದ್ದಿ ಹೇಳಿಸಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ. ಮೊದಲು ಅವರ ಮನೆ ತೂತು ಸರಿಪಡಿಸಿಕೊಳ್ಳಲಿ ಎಂದು ಅವರು ಸಿ.ಟಿ.ರವಿಗೆ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT