ಕೆವೈ ನಂಜೇಗೌಡ 
ರಾಜಕೀಯ

ಮರು ಎಣಿಕೆಯಲ್ಲಿ ಮಂಜುನಾಥ್ ಗೆದ್ದರೆ ರಾಜಕೀಯ ನಿವೃತ್ತಿ: ಮಾಲೂರು ಶಾಸಕ ನಂಜೇಗೌಡ

2023ರ ವಿಧಾನಸಭಾ ಚುನಾವಣೆ ನಡೆಯುವಾಗ ರಾಜ್ಯದಲ್ಲಿ ಇದ್ದುದ್ದು ಬಿಜೆಪಿ ಸರಕಾರ, ಅವರದ್ದೇ ಅಧಿಕಾರಿಗಳು ಮತ್ತು ಪೊಲೀಸರು ಇದ್ದರು. ಮತ ಎಣಿಕೆ ದಿನ ನಾನು ಮನೆಯಲ್ಲಿ ಇದ್ದೆ.

ಕೋಲಾರ: ಕರ್ನಾಟಕ ಹೈಕೋರ್ಟ್ ಆದೇಶದಂತೆ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕೆ.ಎಸ್. ಮಂಜುನಾಥ ಗೌಡ ವಿಜೇತರಾದರ, ರಾಜಕೀಯ ತ್ಯಜಿಸುವುದಾಗಿ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸಕೋಟೆಯಿಂದ ಮಂಜುನಾಥ ಗೌಡ ಅವರನ್ನು ಕರೆತಂದು ಮಾಲೂರು ಕ್ಷೇತ್ರದಿಂದ ಗೆಲ್ಲುವಂತೆ ಮಾಡಿದ್ದು ನಾನು. ಆದರೆ ಈಗ ಚುನಾವಣೆಯನ್ನು ಪ್ರಶ್ನಿಸುವ ಮೂಲಕ ಶಾಸಕರಾಗಲು ಬಯಸಿದ್ದಾರೆ ಎಂದು ನಂಜೇಗೌಡ ಹೇಳಿದರು.

ಮತಎಣಿಕೆ ಅಥವಾ ಹೊಸದಾಗಿ ಚುನಾವಣೆ ನಡೆದರೆ, ಅವರು ಮತ್ತೆ ಸೋಲುತ್ತಾರೆ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮತ್ತು ಇಡೀ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ನಂಜೇಗೌಡ ಹೇಳಿದರು.

2023ರ ವಿಧಾನಸಭಾ ಚುನಾವಣೆ ನಡೆಯುವಾಗ ರಾಜ್ಯದಲ್ಲಿ ಇದ್ದುದ್ದು ಬಿಜೆಪಿ ಸರಕಾರ, ಅವರದ್ದೇ ಅಧಿಕಾರಿಗಳು ಮತ್ತು ಪೊಲೀಸರು ಇದ್ದರು. ಮತ ಎಣಿಕೆ ದಿನ ನಾನು ಮನೆಯಲ್ಲಿ ಇದ್ದೆ. ಎಣಿಕೆ ಕಾರ್ಯ ಮುಕ್ತಾಯಗೊಂಡ ನಂತರ ಮಂಜುನಾಥಗೌಡ ಮನವಿ ಮೇರೆಗೆ ಚುನಾವಣಾಧಿಕಾರಿಗಳು ವಿ.ವಿ.ಪ್ಯಾಟ್ ತಾಳೆ ಮಾಡಲು ಲಾಟರಿ ಎತ್ತಿ ನಂತರ ಫಲಿತಾಂಶ ಘೋಷಿಸಿದರು.

ಈಗ ಆತ ಬೇರೇನೋ ಮಾತನಾಡುತ್ತಿದ್ದಾರೆ. ಮೂರು ಎಣಿಕೆ ನಡೆಯಲಿ ಅಥವಾ ಹೊಸದಾಗಿ ಚುನಾವಣೆ ನಡೆಯಲಿ. ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಅವರು ಹೇಳಿದರು.

ಹೈಕೋರ್ಟ್ ತನ್ನ ಆದೇಶದ ಅನುಷ್ಠಾನಕ್ಕೆ ನಾಲ್ಕು ವಾರಗಳ ತಡೆಯಾಜ್ಞೆ ನೀಡಿದ್ದು, ನಂಜೇಗೌಡ ಸುಪ್ರೀಂ ಕೋರ್ಟ್ ಸಂಪರ್ಕಿಸಲು ಅವಕಾಶ ಮಾಡಿಕೊಟ್ಟಿದೆ. ನಾನು ವೀಡಿಯೊವನ್ನು ಏಕೆ ಕದಿಯಬೇಕು? ದೃಶ್ಯಗಳನ್ನು ಸಂಗ್ರಹಿಸಿ ಅದನ್ನು ರಕ್ಷಿಸುವುದು ಚುನಾವಣಾ ಅಧಿಕಾರಿಗಳ ಜವಾಬ್ದಾರಿ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ ತಮ್ಮೊಂದಿಗೆ ಮಾತನಾಡಿದ್ದಾರೆ ಮತ್ತು ಅಕ್ಟೋಬರ್ 31 ರಂದು ಕ್ಷೇತ್ರದಲ್ಲಿ ನಿಗದಿಯಾಗಿದ್ದ ಸಿಎಂ ಕಾರ್ಯಕ್ರಮ ವೇಳಾಪಟ್ಟಿಯ ಪ್ರಕಾರ ನಡೆಯಲಿದೆ ಎಂದು ನಂಜೇಗೌಡ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್