ಬಸವರಾಜ ಬೊಮ್ಮಾಯಿ 
ರಾಜಕೀಯ

ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

ಮತಾಂತರಗೊಂಡ ಕ್ರೈಸ್ತರಿಗಾಗಿ ಸರ್ಕಾರವು ಪ್ರತ್ಯೇಕ ಕಾಲಂ ಮಾಡಿದೆ. ಎಲ್ಲಾ ಸಮಾಜದಲ್ಲಿ ಕನ್ವರ್ಟೆಡ್ ಕ್ರಿಶ್ಚಿಯನ್ ಇರೋ ರೀತಿಯಲ್ಲಿ ಮಾಡಿದ್ದಾರೆ. ಕನ್ವರ್ಟೆಡ್​ಗೆ ಯಾವುದೇ ಕಾಲಂ ಸಂವಿಧಾನದಲ್ಲಿ ಇಲ್ಲ.

ಹಾವೇರಿ: ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವುದಾಗಿ ಹೇಳಿದ್ದು, ಯಾರನ್ನೋ ಮೆಚ್ಚಿಸಲು ರಾಜ್ಯ ಸರ್ಕಾರ ಸಮೀಕ್ಷೆ ಮಾಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಮೀಕ್ಷಾ ಕಾಯ್ದೆಯ ಪ್ರಕಾರ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಸಮೀಕ್ಷೆ ನಡೆಸುವ ಅಧಿಕಾರವಿಲ್ಲ, ಕೇವಲ ಸ್ಯಾಂಪಲ್ ಸರ್ವೆ ಮಾತ್ರ ಮಾಡಬಹುದು. ಆದಾಗ್ಯೂ, ಸಮೀಕ್ಷೆಯ ಹೆಸರಿನಲ್ಲಿ, 'ವೀರಶೈವ ಲಿಂಗಾಯತ'ವನ್ನು ಪ್ರತ್ಯೇಕ ಜಾತಿ ಮತ್ತು 'ಲಿಂಗಾಯತ ವೀರಶೈವ'ವನ್ನು ಮತ್ತೊಂದು ಜಾತಿ ಎಂದು ಘೋಷಿಸುವ ಮೂಲಕ ಸರ್ಕಾರ ಗೊಂದಲಗಳನ್ನು ಸೃಷ್ಟಿಸಿದೆ. ಪ್ರತಿ ಸಮುದಾಯದಲ್ಲಿ, ಸರ್ಕಾರವು 25 ರಿಂದ 30 ಹೊಸ ಉಪಜಾತಿಗಳನ್ನು ರಚಿಸಿದೆ ಎಂದು ಆರೋಪಿಸಿದ್ದಾರೆ.

ಮತಾಂತರಗೊಂಡ ಕ್ರೈಸ್ತರಿಗಾಗಿ ಸರ್ಕಾರವು ಪ್ರತ್ಯೇಕ ಕಾಲಂ ಮಾಡಿದೆ. ಎಲ್ಲಾ ಸಮಾಜದಲ್ಲಿ ಕನ್ವರ್ಟೆಡ್ ಕ್ರಿಶ್ಚಿಯನ್ ಇರೋ ರೀತಿಯಲ್ಲಿ ಮಾಡಿದ್ದಾರೆ. ಕನ್ವರ್ಟೆಡ್​ಗೆ ಯಾವುದೇ ಕಾಲಂ ಸಂವಿಧಾನದಲ್ಲಿ ಇಲ್ಲ. ಸರ್ಕಾರ ಸಮಾಜವನ್ನು ಒಗ್ಗೂಡಿಸುವ ಬದಲು ಚೂರು ಚೂರಾಗಿ ತುಂಡಾಗಿಸುತ್ತಿದೆ. ಜಾತಿಗಣತಿ ಒಳ್ಳೆಯ ಉದ್ದೇಶವನ್ನು ಹೊಂದಿಲ್ಲ. ಇದು ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ. ಮುಖ್ಯಮಂತ್ರಿಗಳು ಯಾರನ್ನೊ ಮೆಚ್ಚಿಸಲು ಸಮೀಕ್ಷೆ ನಡೆಸಬಾರದು ಎಂದು ತಿಳಿಸಿದ್ದಾರೆ.

ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವ ಸರ್ಕಾರ ಚಿಂತನೆ ಕುರಿತು ಪ್ರತಿಕ್ರಿಯಿಸಿ, ಸರ್ಕಾರವು ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.

ನಾನು ಸಿಎಂ ಆಗಿದ್ದ ವೇಳೆ ವಾಲ್ಮೀಕಿ ಸಮಾಜಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ ಮಾಡಿದ್ದೆ. ಎಸ್ಸಿಗೆ 15 ರಿಂದ 17 ಮಾಡಿದ್ದೇನೆ. ಈಗ ಅದರ ಪ್ರಕಾರ ನಡೆದಿದೆ. ಮುಂದೆ ಕೇಂದ್ರ ಸರ್ಕಾರ ಸಮೀಕ್ಷೆ ಮಾಡಲಿದೆ. ಅದರ ಆಧಾರದ ಮೇಲೆ ಜನಸಂಖ್ಯೆ ಗೊತ್ತಾಗುತ್ತೆ. ಆ ಮೇಲೆ ಮುಂದೆ ನಿರ್ಧಾರ ಆಗುತ್ತೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CEC 'ಮತ ಕಳ್ಳರ ರಕ್ಷಕ', ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ

ಉತ್ತರಾಖಂಡ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಹತ್ತು ಮಂದಿ ನಾಪತ್ತೆ, ಸಂಪರ್ಕ ಕಳೆದುಕೊಂಡ ಗ್ರಾಮಗಳು

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ

MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ

ಹಣಕಾಸು ಸ್ವಾತಂತ್ರ್ಯಕ್ಕೆ 7 ಸರಳ ನಿಯಮಗಳು! (ಹಣಕ್ಲಾಸು)

SCROLL FOR NEXT