ಸಲೀಂ ಅಹ್ಮದ್ 
ರಾಜಕೀಯ

ನವೆಂಬರ್‌ನಲ್ಲಿ ಸಂಪುಟ ಪುನಾರಚನೆ, ಶೇ.50ರಷ್ಟು ಸಚಿವರ ಬದಲಾವಣೆ: ದೆಹಲಿಯಲ್ಲಿ ಸಲೀಂ ಅಹ್ಮದ್

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ನವೆಂಬರ್ ತಿಂಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸುದ್ದಿಲ್ಲದೇ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗೊಳಿಸುತ್ತದೆ. ಹೀಗಾಗಿ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ.

ಇದಕ್ಕೆ ಪೂರಕವೆಂಬಂತೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ನವೆಂಬರ್ ತಿಂಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.

ಸಚಿವ ಸ್ಥಾನದಿಂದ ಹೊರ ಬಂದವರಿಗೆ ಪಕ್ಷ ಸಂಘಟನೆಯ ಕೆಲಸ ವಹಿಸಲಾಗುತ್ತದೆ. ಇನ್ನು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿದ್ದು, ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತ ರಿಗೆ ಸಚಿವ ಸ್ಥಾನ ನೀಡಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.

ಇದೇ ವೇಳೆ ಮತಾಂತರದ ಬಗ್ಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ, ಅದು ಪಕ್ಷ ಅಥವಾ ಸರ್ಕಾರದ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದರು.

ಕೆಎನ್ ರಾಜಣ್ಣ ಅವರು “ಜಾತಿಗಳಿಗೆ ಕ್ರಿಶ್ಚಿಯನ್ ಧರ್ಮದ ಹೆಸರು ಸೇರಿಸುವುದರಿಂದ ಮತಾಂತರಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Zಗಳು, ಗುಂಡೇಟಿಗೆ 7 ಮಂದಿ ಬಲಿ!

Thinking of you': ದೇಶದ್ರೋಹಿ ಆರೋಪಿ ಉಮರ್ ಖಾಲೀದ್ ಗೆ ಪತ್ರ ಬರೆದ ನ್ಯೂಯಾರ್ಕ್ ಮೇಯರ್ ಮಮ್ದಾನಿ!

ನೀರಲ್ಲ, ವಿಷ ಸರಬರಾಜು ಮಾಡಲಾಗಿದೆ: ಇಂದೋರ್ ದುರಂತಕ್ಕೆ ರಾಹುಲ್ ಗಾಂಧಿ ಕಿಡಿ

Ballari clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ: ಶ್ರೀರಾಮುಲು ಗಂಭೀರ ಆರೋಪ

SCROLL FOR NEXT