ಬಿ.ವೈ. ವಿಜಯೇಂದ್ರ 
ರಾಜಕೀಯ

ಧರ್ಮಸ್ಥಳ ಕೇಸ್: SIT ರಚಿಸುವಂತೆ ಒತ್ತಡ ಹೇರಿದವರು ಯಾರು?: ಸರ್ಕಾರಕ್ಕೆ BJP ಪ್ರಶ್ನೆ

ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ‘ಶ್ರೀ ಕ್ಷೇತ್ರ ಧರ್ಮಸ್ಥಳ’ದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದವರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗುರುವಾರ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ‘ಶ್ರೀ ಕ್ಷೇತ್ರ ಧರ್ಮಸ್ಥಳ’ದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಈ ದುಷ್ಟ ಉದ್ದೇಶದಿಂದಲೇ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಮರೆಮಾಚಿ ಸರ್ಕಾರ ಬುರುಡೆ ಗ್ಯಾಂಗ್ ನ ದೂರು ಸ್ವೀಕರಿಸಿ ಎಸ್ಐಟಿ ರಚಿಸಿತ್ತು ಎಂಬುದು ಈಗ ಬಟಾ ಬಯಲಾಗಿದೆ ಎಂದು ಹೇಳಿದ್ದಾರೆ.

ಸರ್ವೋಚ್ಛ ನ್ಯಾಯಾಲಯ ಬುರುಡೆ ಗ್ಯಾಂಗ್ ಹೂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು 2025 ಮೇ 05ರಲ್ಲೇ ವಜಾಗೊಳಿಸಿತ್ತು. ಆದಾಗ್ಯೂ ಈ ಸಂಗತಿಯನ್ನು ಮರೆಮಾಚಿ ಸರ್ಕಾರ ಕಟ್ಟುಕಥೆ ಹೆಣೆದ ಆರೋಪವನ್ನು ಆಧರಿಸಿ ದೂರು ಸ್ವೀಕರಿಸಿತು, ಬಳಿಕ ಉಗ್ರ ಎಡ ಪಂಥೀಯ ವಿಚಾರಧಾರೆಯ ವಿತಂಡವಾದಿಗಳ ಒತ್ತಡಕ್ಕೆ ಮಣಿದಂತೆ ನಟಿಸಿ ಸರ್ಕಾರ ಎಸ್ಐಟಿ ರಚಿಸಿತು. ಇದು ಸರ್ವೋಚ್ಛ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.

ಇದು ಸಾರ್ವಜನಿಕ ಹಿತಾಸಕ್ತಿಯಲ್ಲ, ಬದಲಿಗೆ ಪ್ರಚಾರ, ಹಣ, ಖಾಸಗಿ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿರುವ ಅರ್ಜಿ" ಎಂದು ಸುಪ್ರೀಂ ವಜಾಗೊಳಿಸಿ ಷಡ್ಯಂತರ ರೂಪಿಸಲು ಹೊರಟವರಿಗೆ ಮಂಗಳಾರತಿ ಎತ್ತಿದೆ. ಈ ಕೂಡಲೇ ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಬೇಷರತ್ತಾಗಿ ಸರ್ವೋಚ್ಛ ನ್ಯಾಯಾಲಯದ ಕ್ಷಮೆಕೋರಲಿ. ಇದರ ಜತೆಗೇ ಧರ್ಮಸ್ಥಳದ ಷಡ್ಯಂತರದಲ್ಲಿ ನಾವೂ ಭಾಗಿದಾರರು ಎಂಬ ಸತ್ಯವನ್ನು ಒಪ್ಪಿಕೊಂಡು ನಾಡಿನ ಜನತೆಯ ಕ್ಷಮೆ ಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

ಈ ಹಿಂದಿನಿಂದಲೂ ನಾವು ಷಡ್ಯಂತ್ರ ಎಂದು ಆರೋಪಿಸುತ್ತಲೇ ಇದ್ದೇವೆ, ಈ ಮಾತನ್ನು ಡಿಸಿಎಂ ಡಿಕೆ ಶಿವಕುಮಾರ್ ರವರೂ ಹೇಳಿದ್ದಾರೆ. ವ್ಯವಸ್ಥಿತ ಹುನ್ನಾರದ ಹಿನ್ನೆಲೆಯಲ್ಲಿಯೇ ನಾವು ಧರ್ಮಸ್ಥಳದ ಕುರಿತು NIA ತನಿಖೆಗೆ ಒತ್ತಾಯಿಸುತ್ತಲೇ ಇದ್ದೇವೆ. ಈ ಷಡ್ಯಂತರ ರೂಪಿಸಿದವರಿಗೆ ಶಿಕ್ಷೆಯಾಗುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ `ಅಕ್ಷರ ಮಾಂತ್ರಿಕ'ನ ಅಂತ್ಯಕ್ರಿಯೆ

MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಇಂದು ಭಾರತೀಯ ವಾಯುಪಡೆಯಿಂದ ವಿದಾಯ

ಲಡಾಕ್ ಲಡಾಯಿ: ಅ. 7 ರ ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ಉತ್ತರ ಪ್ರದೇಶ: ಎನ್ಕೌಂಟರ್ ನಂತರ ಶಿಕ್ಷಕಿ ಮುಖಕ್ಕೆ ಆಸಿಡ್ ಎರಚಿದ ವ್ಯಕ್ತಿಯ ಬಂಧನ

ರಸ್ತೆ ಗುಂಡಿಯಷ್ಟೇ ಅಲ್ಲ, ಸಿಲಿಕಾನ್ ಸಿಟಿ ಜನರ ಕಾಡುತ್ತಿದೆ ಬೀದಿ ದೀಪಗಳ ಸಮಸ್ಯೆ..!

SCROLL FOR NEXT