ಮಲ್ಲಿಕಾರ್ಜುನ್ ಖರ್ಗೆ-ಪ್ರಿಯಾಂಕ್ ಖರ್ಗೆ 
ರಾಜಕೀಯ

ಅಪ್ಪ-ಮಗ ಇಬ್ಬರನ್ನು ತಿಹಾರ್ ಜೈಲಿಗೆ ಹಾಕಿ: ನನ್ನಲ್ಲಿ ಹರಿಯೋದು ದಲಿತ ರಕ್ತ ಎಂದು ಏಕೆ ಬೊಗಳುತ್ತೀರಿ? ದ್ವೇಷ ಭಾಷಣ ಕಲಿಸಿದ್ದು ನಿಮ್ಮ ಮನೆಯ ಬ್ರಾಹ್ಮಣರಾ?

ಖರ್ಗೆ ಕುರಾನ್‌ನಲ್ಲಿ ಇರುವ ಒಂದು ವಿಷಯ ಪ್ರಸ್ತಾಪ ಮಾಡಿದ್ದಾರೆ. ವಿಷಕಾರಿ ಹಾವನ್ನು ಸಾಯಿಸಬೇಕು ಎಂದು ಹೇಳಿದ್ದಾರೆ. BJP-RSS ವಿಷಕಾರಿ ಹಾವು ಅಂದಿದ್ದಾರೆ. ಅವರೇನು ನೋಡಿದ್ದಾರಾ?

ಬೆಂಗಳೂರು: BJP-RSS ಅವರನ್ನು ಕೊಲ್ಲಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಸಮರ್ಥನೆ ಮಾಡಿಕೊಂಡ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ತಿಹಾರ್ ಜೈಲಿಗೆ ಹಾಕಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದಾರೆ. ಇಡೀ ದೇಶದಲ್ಲಿ ಅವರಿಗೆ ಹಿಡಿಶಾಪ ಹಾಕ್ತಿದ್ದಾರೆ. ಖರ್ಗೆ ಕುರಾನ್‌ನಲ್ಲಿ ಇರುವ ಒಂದು ವಿಷಯ ಪ್ರಸ್ತಾಪ ಮಾಡಿದ್ದಾರೆ. ವಿಷಕಾರಿ ಹಾವನ್ನು ಸಾಯಿಸಬೇಕು ಎಂದು ಹೇಳಿದ್ದಾರೆ. BJP-RSS ವಿಷಕಾರಿ ಹಾವು ಅಂದಿದ್ದಾರೆ. ಅವರೇನು ನೋಡಿದ್ದಾರಾ? ಖರ್ಗೆ ನಾಲಿಗೆ ಹದ್ದುಬಸ್ತಿನಲ್ಲಿ ಇರಬೇಕಿತ್ತು ಎಂದಿದ್ದಾರೆ.

ನಿಮಗೆ ಅರಳು-ಮರಳೋ ಅಥವಾ ಮಾನಸಿಕ ಆರೋಗ್ಯ ಕೆಟ್ಟಿದೆಯಾ? ಇದು ದ್ವೇಷ ಭಾಷಣ ಆಗುತ್ತದೆ. ಕರ್ನಾಟಕದಲ್ಲಿ ದ್ವೇಷ ಭಾಷಣ ಬಿಲ್ ಪಾಸ್ ಆಗಿದೆ. ಬಿಜೆಪಿ ಈಗಾಗಲೇ ಖರ್ಗೆ ವಿರುದ್ಧ ದೂರು ಕೊಟ್ಟಿದ್ದಾರೆ. ರಜಾಕಾರರು ನಮ್ಮ ಕುಟುಂಬದವರನ್ನ ಕೊಂದರು ಎಂದು ಖರ್ಗೆ ಹೇಳಿದ್ರು. ನಿಮಗೆ ಯಾರ ಮೇಲೆ ಕೋಪ ಇರಬೇಕಿತ್ತು? ರಜಾಕಾರರ ಮೇಲೆ ಕೋಪ ಇರಬೇಕಿತ್ತು. ಆದರೆ, ಅವರನ್ನ ಎತ್ತಿಕಟ್ಟಿ BJP-RSS ಕೊಲ್ಲಬೇಕು ಅಂತೀರಾ. ನಾಚಿಕೆ ಆಗೊಲ್ಲವಾ ಎಂದು ಕಿಡಿಕಾರಿದರು.

ನಿಮ್ಮ ತಂದೆ ದನ ಕಾದು ನಿಮಗೆ ಅಕ್ಷರ ಕಲಿಸಿ ವಿದ್ಯೆ ಕೊಟ್ಟರು. ಅವರನ್ನ ನೀವು ಮನೆಗೆ ಸೇರಿಸಿಲ್ಲ ಎಂದು ಅನೇಕರು ಹೇಳ್ತಾರೆ. BJP-RSS ನಿಮಗೆ ಏನು ಮಾಡಿದೆ? ಯಾರನ್ನು ಮೆಚ್ಚಿಸಲು ಹೇಳಿಕೊಡ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ‌ಮನೆ ತುಂಬ ಬ್ರಾಹ್ಮಣರನ್ನು ತುಂಬಿಸಿಕೊಂಡಿದ್ದೀರಿ. ನೀವು ದಲಿತರಾಗಿ ಉಳಿದಿಲ್ಲ. ನನ್ನಲ್ಲಿ ಹರಿಯೋದು ದಲಿತ ರಕ್ತ ಎಂದು ಏಕೆ ಬೊಗಳುತ್ತೀರಿ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಛಲವಾದಿ ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬ್ರಾಹ್ಮಣರು ದ್ವೇಷ ಭಾಷಣ ಕಲಿಸುತ್ತಾರೆಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಿಮಗೆ ದ್ವೇಷ ಭಾಷಣ ಕಲಿಸಿದ್ದು ನಿಮ್ಮ ಮನೆಯ ಬ್ರಾಹ್ಮಣರಾ? ಎಂದು ಪ್ರಶ್ನಿಸಿದರು. ಬ್ರಾಹ್ಮಣರಿಗೆ ದಲಿತರು, ಮುಸ್ಲಿಮರೆಲ್ಲ ಆಗಲ್ಲ ಎನ್ನುತ್ತಾರೆ. ಮುಸ್ಲಿಮರ ಬಗ್ಗೆ ಪ್ರೀತಿ ಇದ್ದರೆ, ಅದೇ ಸಮುದಾಯದವರನ್ನು ಮದುವೆ ಆಗಬೇಕಿತ್ತು. ನಿಮ್ಮ‌ ಮಕ್ಕಳನ್ನೂ ಮುಸ್ಲಿಂ ಸಮುದಾಯದ ಜೊತೆ ಮದುವೆ ಮಾಡಿಸಬೇಕಿತ್ತು. ಬೇವಿನಕಾಯಿಗೆ ಹಾಗಲಕಾಯಿ ಸಾಕ್ಷಿ. ತಂದೆ ಮಾತಿಗೆ ಮಗನ ಬೆಂಬಲ, ಇಬ್ಬರ ಮನಸ್ಥಿತಿ ಒಂದೇ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala, Karnataka Bypoll & Assam, Puducherry Election 2026 Live Updates | ಅಸ್ಸಾಂ, ಕೇರಳ, ಪುದುಚೆರಿ, ಕರ್ನಾಟಕದ 2 ಕ್ಷೇತ್ರಗಳಲ್ಲಿ ಮತದಾನ ಆರಂಭ

ಲೆಬನಾನ್ ಮೇಲೆ ದಾಳಿ: ಅಮೆರಿಕಾ ವಿರುದ್ಧ ಇರಾನ್ ತೀವ್ರ ಕಿಡಿ; ಮಾತುಕತೆಗೂ ಮುನ್ನವೇ ಕದನ ವಿರಾಮ ಉಲ್ಲಂಘನೆ, ಸಂಧಾನ ಪ್ರಯತ್ನ ಅರ್ಥಹೀನ ಎಂದ ಟೆಹ್ರಾನ್

ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಪ್ರತೀಕಾರಕ್ಕೆ ಇರಾನ್ ಮುಂದು, ಹಾರ್ಮುಜ್ ಮಾರ್ಗ ಮತ್ತೆ ಬಂದ್..!

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

IPL 2026: KL Rahul 92 ರನ್; ಕೊನೆಯ ಎಸೆತದಲ್ಲಿ ಎಡವಿದ ಡೆಲ್ಲಿ, 1 ರನ್‌ನಿಂದ GT ಗೆ ರೋಚಕ ಜಯ!

SCROLL FOR NEXT