ಡಿಕೆ ಶಿವಕುಮಾರ್  
ರಾಜಕೀಯ

ಸಂಪುಟ ಪುನಾರಚನೆ ಕಸರತ್ತು: ದೆಹಲಿಗೆ ಹಾರಿದ 'ಕೈ' ಶಾಸಕರಿಗೆ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ!

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನಲೆಯಲ್ಲಿ ಸಂಪುಟ ಪುನಾರಚನೆ ಮಾಡಬೇಕು ಮತ್ತು ಬೇರೆ ಶಾಸಕರಿಗೂ ಮಂತ್ರಿಯಾಗುವ ಅವಕಾಶ ನೀಡಬೇಕು..

ಬೆಂಗಳೂರು: ಸಂಪುಟ ಪುನಾರಚನೆ ಮತ್ತು ಮಂತ್ರಿ ಸ್ಥಾನಕ್ಕೆ ದೆಹಲಿಗೆ ತೆರಳಿರುವ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕ್ ನೀಡಿದ್ದು, ಅನಾವಶ್ಯಕ ಗೊಂದಲ ಸೃಷ್ಟಿಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನಲೆಯಲ್ಲಿ ಸಂಪುಟ ಪುನಾರಚನೆ ಮಾಡಬೇಕು ಮತ್ತು ಬೇರೆ ಶಾಸಕರಿಗೂ ಮಂತ್ರಿಯಾಗುವ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನ ಕೆಲ ಶಾಸಕರ ಗುಂಪು ದೆಹಲಿಗೆ ಹಾರಿದೆ.

ಮಾಜಿ ಸಚಿವ ಟಿಬಿ ಜಯಚಂದ್ರ, ಅಶೋಕ್ ಪಠಾಣ್, ಎಸ್.ನಾರಾಯಣಸ್ವಾಮಿ, ಮತ್ತು ಕೆ.ಷಡಕ್ಷರಿ ಸೇರಿದಂತೆ ಹಲವು ಶಾಸಕರು ದೆಹಲಿಗೆ ಹೋಗಿದ್ದು ಅಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಲು ಮುಂದಾಗಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಮಾತನಾಡಿದ್ದ ಟಿಬಿ ಜಯಚಂದ್ರ ಅವರು, 'ಇದು ನನಗೆ ನಿತ್ಯದ ಕೆಲಸ. ನಾನು ದೆಹಲಿಯಲ್ಲಿ ರಾಜ್ಯ ಪ್ರತಿನಿಧಿ. ವಿಧಾನಸಭಾ ಚುನಾವಣೆಯ ನಂತರ ನಾನು ಇಲ್ಲಿದ್ದೇನೆ. ಈಗ, ಇಂದು ನಾನು ಮಾತ್ರ ಬಂದಿದ್ದೇನೆ. ಅನೇಕ ಶಾಸಕರು ಸಹ ಬರುತ್ತಿದ್ದಾರೆ.

ನಾವು ಹೈಕಮಾಂಡ್ ಅನ್ನು ಭೇಟಿ ಮಾಡಿ ಪುನರ್ರಚನೆಗಾಗಿ ಮನವೊಲಿಸಲು ಬಯಸಿದ್ದೆವು, ಅದು ಅನೇಕ ಹಿರಿಯ ಶಾಸಕರ ಬೇಡಿಕೆಯಾಗಿದೆ, ಈ ಸರ್ಕಾರಕ್ಕೆ ಮೂರು ವರ್ಷಗಳ ಕಾಲ ಅವಕಾಶ ನೀಡಲಾಗಿದೆ. ಮೂರು ವರ್ಷಗಳು ಮುಗಿದಿವೆ, ಕೇವಲ ಎರಡು ವರ್ಷಗಳು ಮಾತ್ರ ಉಳಿದಿವೆ. ಅದಕ್ಕಾಗಿಯೇ ನಾವೆಲ್ಲರೂ ಹೆಚ್ಚಿನ ಬೇಡಿಕೆಯನ್ನು ಪೂರೈಸಲು ಬಯಸಿದ್ದೇವೆ ಎಂದು ಹೇಳಿದ್ದಾರೆ.

ಅಂತೆಯೇ ನಾಯಕತ್ವದ ವಿಚಾರದ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, "ಇಲ್ಲ, ಈ ನಾಯಕತ್ವದ ವಿಷಯ ನಮ್ಮ ಮುಂದೆ ಇಲ್ಲ. ಅದು ನಾಲ್ಕು ಗೋಡೆಗಳ ಒಳಗೆ ಇದೆ. ಸಿಎಂ, ಉಪ ಮುಖ್ಯಮಂತ್ರಿ ಮತ್ತು ಎಐಸಿಸಿ ಅಧ್ಯಕ್ಷರು ಮತ್ತು ರಾಹುಲ್ ಗಾಂಧಿ ಈ ಬಗ್ಗೆ ನಿರ್ಧರಿಸುತ್ತಾರೆ. ಪುನರ್ರಚನೆಗಾಗಿ ಹೈಕಮಾಂಡ್ ಅನ್ನು ಪ್ರಭಾವಿಸಲು ಅಥವಾ ವಿನಂತಿಸಲು ಮಾತ್ರ ನಾವು ಬಂದಿದ್ದೇವೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ!

ಇನ್ನು ಕೈ ಶಾಸಕರ ದೆಹಲಿ ಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, 'ಪಕ್ಷದ ಹೈಕಮಾಂಡ್ ಅವರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಮತ್ತು ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರ ಗುಂಪು ಹೈಕಮಾಂಡ್ ಅನ್ನು ಭೇಟಿ ಮಾಡುವ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡದಂತೆ ಎಲ್ಲಾ ಶಾಸಕರಿಗೆ ಮನವಿ ಮಾಡುತ್ತೇನೆ' ಎಂದರು.

'ಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ. ಪಕ್ಷದ ಚೌಕಟ್ಟಿನ ಒಳಗೆ ಎಲ್ಲಾ ಶಾಸಕರು ಮಾತನಾಡಬೇಕು. ಕೆಲವರು ಏನೇನು​ ಮಾತನಾಡಿದ್ದಾರೋ ಎಲ್ಲವನ್ನೂ ಗಮನಿಸಿದ್ದೇನೆ. ಆದರೆ ಮೀಡಿಯಾ ನಿಮ್ಮ ಭವಿಷ್ಯ ಅಲ್ಲ, ಪಾರ್ಟಿ ನಿಮ್ಮ ಭವಿಷ್ಯ. ಪಾರ್ಟಿಯಲ್ಲೇ ಎಲ್ಲರ ಭವಿಷ್ಯವಿದೆ, ಪಕ್ಷದ ಚೌಕಟ್ಟಿನೊಳಗೆ ಇರಬೇಕು. ಇದು ಸಂಪುಟ ಪುನಾರಚನೆ ಕೇಳುವ ಟೈಂ ಅಲ್ಲ. ಈಗ ಮಂತ್ರಿ ಮಾಡೋ ಟೈಂ ಅಲ್ಲ, ಮೊದಲು ಚುನಾವಣೆ ಮಾಡೋಣ ಎಂದು ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

ಮಹಿಳಾ ಮೀಸಲಾತಿ ಕುರಿತ ಚರ್ಚೆ: ಏ.15 ಕ್ಕೆ ಎಲ್ಲಾ ವಿರೋಧ ಪಕ್ಷಗಳ ಸಭೆ- ಮಲ್ಲಿಕಾರ್ಜುನ ಖರ್ಗೆ

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

SCROLL FOR NEXT