ಆರ್ ಅಶೋಕ್  online desk
ರಾಜಕೀಯ

ಅತಿಯಾದ ಓಲೈಕೆ, ತುಷ್ಟೀಕರಣ ಕಾಂಗ್ರೆಸ್ ಪಕ್ಷಕ್ಕೆ ಮುಳುವು; ಕಾಶ್ಮೀರ-ಹರಿಯಾಣ-ಬಿಹಾರದ ಗತಿ ನಿಶ್ಚಿತ: ಆರ್. ಅಶೋಕ್

ಫೆಬ್ರವರಿ 2024ರಲ್ಲಿ ಸದನದಲ್ಲಿ ಮಾತಾನಾಡುವಾಗ ಅತಿಯಾದ ಮುಸ್ಲಿಂ ಓಲೈಕೆ, ವ್ಯಾಮೋಹ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತೆ ಎಂದು ಭವಿಷ್ಯ ನುಡಿದಿದ್ದೆ ಎಂದಿದ್ದಾರೆ.

ಬೆಂಗಳೂರು: ಎರಡು ವರ್ಷದ ಹಿಂದೆ ನಾನು ನುಡಿದಿದ್ದ ಭವಿಷ್ಯ ನಿಜವಾಗಿದೆ ಎಂದು ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣ ಹಿಂದೆ ನಾನು ಮಾತನಾಡಿದ್ದೆ ಅದೀಗ ನಿಜವಾಗುತ್ತಿದೆ ಎಂದು ಅಶೋಕ್ ಹೇಳಿದ್ದಾರೆ.

ಈ ಸಂಬಂದ ಈ ಹಿಂದೆ ತಾವು ವಿಧಾನಸಭೆಯಲ್ಲಿ ಮಾತನಾಡಿದ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿರುವ ಅಶೋಕ್, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2024ರಲ್ಲಿ ಸದನದಲ್ಲಿ ಮಾತಾನಾಡುವಾಗ ಅತಿಯಾದ ಮುಸ್ಲಿಂ ಓಲೈಕೆ, ವ್ಯಾಮೋಹ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತೆ ಎಂದು ಭವಿಷ್ಯ ನುಡಿದಿದ್ದೆ ಎಂದಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ ಸುತ್ತ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದರೆ, ಎರಡು ವರ್ಷಗಳ ಹಿಂದೆ ನಾನು ಸದನದಲ್ಲಿ ಹೇಳಿದ್ದು ಈಗ ನಿಜವಾಗುತ್ತಿದೆ ಎನ್ನಿಸುತ್ತಿದೆ. ಎಲ್ಲಿಯವರೆಗೂ ಪರ್ಯಾಯ ಆಯ್ಕೆ ಇರುವುದಿಲ್ಲವೋ ಅಲ್ಲಿಯವರೆಗೆ ಮಾತ್ರ ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂಬ ಕಟು ಸತ್ಯವನ್ನ ಕಾಂಗ್ರೆಸ್ ಪಕ್ಷ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು.

ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಈಗಲಾದರೂ ಎಚ್ಚೆತ್ತುಕೊಂಡು, ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ. ಇಲ್ಲವಾದರೆ ಜಮ್ಮು ಕಾಶ್ಮೀರದಲ್ಲಿ, ಹರಿಯಾಣ, ಬಿಹಾರ ಮುಂತಾದ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವ ಗತಿಯೇ ಕರ್ನಾಟಕದಲ್ಲಿಯೂ ಬರುವುದು ನಿಶ್ಚಿತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

SCROLL FOR NEXT