ಆರ್ ಅಶೋಕ್  
ರಾಜಕೀಯ

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ; CM ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್

2028ಕ್ಕೆ ರಾಜ್ಯದಲ್ಲಿ ಜೆಡಿಎಸ್‌ಎಸ್-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ ಎಂದ ಅವರು, ಸಂಸತ್ತಿನಲ್ಲೂ ಜೆಡಿಎಸ್‌ಗೆ ಮೂರ್ನಾಲ್ಕು ಸ್ಥಾನಗಳನ್ನು ನೀಡಲಾಗಿದೆ.

ಮಂಡ್ಯ: 2028ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ಹೊರತು ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ತುಂಬಾ ಜನರಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2028ಕ್ಕೆ ರಾಜ್ಯದಲ್ಲಿ ಜೆಡಿಎಸ್‌ಎಸ್-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ ಎಂದ ಅವರು, ಸಂಸತ್ತಿನಲ್ಲೂ ಜೆಡಿಎಸ್‌ಗೆ ಮೂರ್ನಾಲ್ಕು ಸ್ಥಾನಗಳನ್ನು ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದರು.

ಸಿಎಂ ಯಾರಾಗಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಪಕ್ಷದ ಅಧ್ಯಕ್ಷ ನಿತಿನ್‌ ನಬೀನ್ ಅವರು ನಿರ್ಧರಿಸುತ್ತಾರೆ. ನನ್ನನ್ನೂ ಸೇರಿದಂತೆ ಈಗಾಗಲೇ 10 ಮಂದಿಯ ಹೆಸರುಗಳು ಕೇಳಿಬಂದಿದೆ. ನಮಗೆ ಅಧಿಕಾರಕ್ಕೆ ಬರುವುದೇ ಮುಖ್ಯ. ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರ್ಕಾರ ತೊಲಗುವುದು ಮುಖ್ಯ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಅವಧಿ ಮುಗಿದ ಮೆಡಿಸಿನ್ ರೀತಿ ಆಗಿದೆ. ನಿನ್ನೆಯೂ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಹೋಗಿ ಸಿಎಂ ಮಾಡುವಂತೆ ಡಿ.ಕೆ ಶಿವಕುಮಾರ್ ಜಗಳವಾಡಿ ಬಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಸತ್ತುಹೋಗಿದೆ. ಒಂದು ವರ್ಷದಿಂದ ಸಿಎಂ. ಬದಲಾವಣೆ ಜಗಳ, ಕಿತ್ತಾಟದಲ್ಲೇ ಕಳೆದುಹೋಗಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್