ಪ್ರಚಾರ ಕಾರ್ಯದಲ್ಲಿ ಡಿ.ಕೆ ಶಿವಕುಮಾರ್ 
ರಾಜಕೀಯ

DMK ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿ.ಕೆ ಶಿವಕುಮಾರ್

ಡಿಎಂಕೆ ಸರ್ಕಾರ ಸಮಾಜದ ಪ್ರತಿಯೊಂದು ವರ್ಗ, ಸಮುದಾಯವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ.

ಕೊಯಮತ್ತೂರು: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಕೊಯಮತ್ತೂರಿಗೆ ತೆರಳಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಡಿಎಂಕೆ ಸರ್ಕಾರ ಸಮಾಜದ ಪ್ರತಿಯೊಂದು ವರ್ಗ, ಸಮುದಾಯವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ.

ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅನೇಕ ಯೋಜನೆಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ಬೆಲೆಏರಿಕೆ ನೀತಿಯಿಂದ ತತ್ತರಿಸಿದ್ದ ಜನ ಇದರಿಂದ ಉಪಯೋಗ ಪಡೆದಿದ್ದಾರೆ ಎಂದರು.

ಮಹಿಳಾ ಮೀಸಲಾತಿ ಜೊತೆಗೆ ಲೋಕಸಭಾ ಸ್ಥಾನಗಳ ಹೆಚ್ಚಳ ಕುರಿತಾದ ಬಿಲ್ ಅನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸುವ ಬಗ್ಗೆ ಕೇಳಿದಾಗ, "ಇದು ಸೂಕ್ತ ಸಮಯವಲ್ಲ. ರಾಜಕೀಯ ಲಾಭಕ್ಕಾಗಿ ಈಗ ಮಾಡುತ್ತಿದ್ದಾರೆ. ಇದರ ಬಗ್ಗೆ ವಿಧಾನಸಭಾ ಚುನಾವಣೆಗಳು ಮುಗಿದ ಬಳಿಕ ಚರ್ಚೆ ಮಾಡಬಹುದಲ್ಲವೇ? ಇದು ದೇಶಕ್ಕೆ ಒಳಿತನ್ನು ಮಾಡುವ ಬಿಲ್. ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡುವ ಮಸೂದೆ ಆಗಿದ್ದು, ಒಂದು ರಾಜಕೀಯ ಪಕ್ಷಕ್ಕಾಗಿ ಮಾಡುತ್ತಿರುವ ಬಿಲ್ ಅಲ್ಲ.

ಈ ವಿಚಾರದ ಬಗ್ಗೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮೊದಲಿಗೆ ಪ್ರಸ್ತಾಪಿಸಲಾಯಿತು. ಕೇಂದ್ರ ಸರ್ಕಾರ ಪ್ರತಿಯೊಂದು ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇದರ ಬಗ್ಗೆ ಆಲೋಚಿಸಬೇಕು. ಮಹಿಳಾ ಮೀಸಲಾತಿ ಮಾಸೂದೆಯನ್ನು ಸೋನಿಯಾಗಾಂಧಿ ಅವರು ಲೋಕಸಭೆಯಲ್ಲಿ ಪಾಸ್ ಆಗುವಂತೆ ನೋಡಿಕೊಂಡಿದ್ದರು" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

‘ಇದು ಒಂಟೆ ಕನಸಿನಂತಿದೆ’..: ಟ್ರಂಪ್ ಶಾಂತಿ ಒಪ್ಪಂದ ಹೇಳಿಕೆಗೆ ಇರಾನ್ ವ್ಯಂಗ್ಯ

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

SCROLL FOR NEXT