ಅಬ್ದುಲ್ ಜಬ್ಬಾರ್ 
ರಾಜಕೀಯ

ಯಡಿಯೂರಪ್ಪ ಮಗನನ್ನು ಗೆಲ್ಲಿಸಿ ಎಂದು 'ಯಜಮಾನರು' ವೇದಿಕೆಯಲ್ಲೇ ಹೇಳಿದ್ದರು; ಆವಾಗ ಏನು ಕ್ರಮ ತಗೊಂಡ್ರಿ? ಡಿಕೆಶಿಗೆ ಜಬ್ಬರ್ ನೇರ ಪ್ರಶ್ನೆ!

ನನಗೆ ಇಲ್ಲಿಯವರೆಗೆ ಅಮಾನತು ಪತ್ರ ಬಂದಿಲ್ಲ. ನನಗೆ ಆದೇಶ ಬರಲಿ ಸರಿಯಾಗಿ ಉತ್ತರ ಕೊಡುತ್ತೇನೆ. ನನ್ನ ಆಡಿಯೋ ವೀಡಿಯೊ ಇದ್ದರೆ ಟಿವಿ ಮೂಲಕ ತೋರಿಸಬೇಕಲ್ಲ. ಯಾವ ಆಧಾರ ಇಟ್ಟುಕೊಂಡು ಅಮಾನತು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ದಾವಣಗೆರೆ: ಯಜಮಾನರು (ಶಾಮನೂರು ಶಿವಶಂಕರಪ್ಪ) ವೇದಿಕೆಯಲ್ಲೇ ಯಡಿಯೂರಪ್ಪ ಅವರ ಮಗನನ್ನು ಗೆಲ್ಲಿಸಿ ಎಂದು ಮಾತನಾಡಿದ್ದರು. ಆವಾಗ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್‌ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಇಲ್ಲಿಯವರೆಗೆ ಅಮಾನತು ಪತ್ರ ಬಂದಿಲ್ಲ. ನನಗೆ ಆದೇಶ ಬರಲಿ ಸರಿಯಾಗಿ ಉತ್ತರ ಕೊಡುತ್ತೇನೆ. ನನ್ನ ಆಡಿಯೋ ವೀಡಿಯೊ ಇದ್ದರೆ ಟಿವಿ ಮೂಲಕ ತೋರಿಸಬೇಕಲ್ಲ. ಯಾವ ಆಧಾರ ಇಟ್ಟುಕೊಂಡು ಅಮಾನತು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ನನಗೇನು ಅನ್ನಿಸುತ್ತಿಲ್ಲ. ಶಾಮನೂರು ಕುಟುಂಬದ ಒಬ್ಬರು ಮಂತ್ರಿಯಾಗಿದ್ದಾರೆ. ಮತ್ತೊಬ್ಬರು ಸಂಸದರಾಗಿದ್ದಾರೆ. ಅವರಿಗೆ ಯಾಕೆ ಟಿಕೆಟ್‌ ಕೊಡುತ್ತೀರಿ. ನಮ್ಮ ಸಮುದಾಯದ ಜನಸಂಖ್ಯೆ ಜಾಸ್ತಿ ಇದೆ ನಮಗೆ ಕೊಡಿ ಎಂದು ಕೇಳಿದ್ದೆವು ಎಂದರು.

ಯಾರೂ ಪ್ರಚಾರ ನಡೆಸಿ ಎಂದು ನನ್ನ ಕರೆದಿಲ್ಲ. ಮಲ್ಲಿಕಾರ್ಜುನ್‌ ಕರೆಯದ್ದಕ್ಕೆ ನಾವು ಹೋಗಿಲ್ಲ. ಎಂಎಲ್‌ಸಿಗೂ ಇದಕ್ಕೂ ಏನು ಸಂಬಂಧ, ನಮ್ಮ ಕ್ಷೇತ್ರ ಆದರೂ ಅಭ್ಯರ್ಥಿ ಅಥವಾ ಅವರ ತಾಯಿ ಯಾರೂ ನನ್ನ ಹತ್ತಿರ ಬಂದು ಮಾತನಾಡಿಲ್ಲ. ಅದಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ನಾನು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಿಗೂ ಹೋಗಿಲ್ಲ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನೇ ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದೆ. ಅಧ್ಯಕ್ಷರು ಯಾವುದು ಅಶಿಸ್ತು ಎಂಬುದನ್ನು ತೋರಿಸಬೇಕಲ್ವಾ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bidadi Township: ವಿರೋಧದ ನಡುವೆ ಮತ್ತೆ 4 ಗ್ರಾಮಗಳ 5,000 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!

ನಾನು 5 ಟೌನ್‌ಶಿಪ್‌ ಮಾಡಲು ನಿರ್ಧರಿಸಿದ್ದೆ, ಆದ್ರೆ ನಿಮ್ಮ ರೀತಿ ರೈತರನ್ನು ಒಕ್ಕಲೆಬ್ಬಿಸಲಿಲ್ಲ: ಸಿಎಂ ಡಿಕೆಶಿಗೆ ಎಚ್‌ಡಿಕೆ ತಿರುಗೇಟು

ಕರ್ನಾಟಕ SIR ಅವಧಿ ವಿಸ್ತರಣೆ: BLO ಮನೆಮನೆ ಭೇಟಿಗೆ ಆಗಸ್ಟ್ 8 ಕೊನೆ ದಿನ; 17ರಂದು ಕರಡು ಪಟ್ಟಿ ಪ್ರಕಟಣೆ!

'ಮೊದಲು Sheikh Hasina ವಾಪಸ್ ಬರಲಿ, ಗಲ್ಲು ಶಿಕ್ಷೆ ಬಗ್ಗೆ ಆಮೇಲೆ ನೋಡೋಣ, ಆದ್ರೆ': ಮಾಜಿ ಪ್ರಧಾನಿಗೆ ಸರ್ಕಾರ ಕಠಿಣ ಎಚ್ಚರಿಕೆ

ಧರ್ಮಸ್ಥಳ ಬುರಡೆ ಪ್ರಕರಣ: ಕೊನೆಗೂ ಬೆಳ್ತಂಗಡಿ ನ್ಯಾಯಾಲಯಕ್ಕೆ 7000 ಪುಟಗಳ ಅಂತಿಮ ವರದಿ ಸಲ್ಲಿಸಿದ SIT