ರಾಹುಲ್ ಗಾಂಧಿ ಅವರನ್ನು ಸನ್ಮಾನಿಸಿದ ಡಿಕೆ.ಶಿವಕುಮಾರ್ 
ರಾಜಕೀಯ

ಸಿಎಂ ಕುರ್ಚಿ ಕದನ: ತಮಿಳುನಾಡು ಚುನಾವಣಾ ಪ್ರಚಾರ ಬಳಸಿ ಡಿಕೆಶಿ ಸ್ಟ್ರಾಟಜಿ; ಹೈಕಮಾಂಡ್ ಗಮನ ಸೆಳೆಯುವ ಯತ್ನ..?

ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ನೆರೆ ರಾಜ್ಯಗಳ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಬೆಂಗಳೂರು: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

ತಮಿಳುನಾಡಿನ ಪೊನ್ನೇರಿ ಪ್ರದೇಶದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಇಬ್ಬರೂ ನಾಯಕರು ಒಟ್ಟಿಗೆ ಕಾಣಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಡಿಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಸನ್ಮಾನಿಸಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ನೆರೆ ರಾಜ್ಯಗಳ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಕಷ್ಟವಾಗುತ್ತಿರುವ ನಡುವಲ್ಲೇ ಈ ರೀತಿಯ ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ರಾಜಕೀಯ ಪ್ರಭಾವವನ್ನು ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ, ಶಿವಕುಮಾರ್ ಅವರ ಸಹೋದರ ಡಿಕೆ.ಸುರೇಶ್ ಅವರು ಕೂಡ ಒಂದು ವಾರ ಮೊದಲು ತಮಿಳುನಾಡಿಗೆ ತೆರಳಿ, ಡಿಎಂಕೆ–ಕಾಂಗ್ರೆಸ್ ಮೈತ್ರಿ ಪಕ್ಷದ ಸಭೆಗಳನ್ನು ಯಶಸ್ವಿಯಾಗಿ ಆಯೋಜಿಸಲು ನೆರವಾದರು ಎಂಬ ಮಾಹಿತಿ ಲಭ್ಯವಾಗಿದೆ. ಇದು ಕುಟುಂಬದ ಮಟ್ಟದಲ್ಲಿಯೇ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಬೆಂಬಲ ನೀಡುತ್ತಿರುವುದನ್ನು ಸೂಚಿಸುತ್ತಿದೆ.

ಏತನ್ಮಧ್ಯೆ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಸಾಮಾನ್ಯ ಜನರ ಹಕ್ಕುಗಳನ್ನು ಕಾಪಾಡುತ್ತಿದ್ದು, ತಮಿಳುನಾಡಿನ ಹಿತಾಸಕ್ತಿಗಳನ್ನು ರಕ್ಷಿಸುತ್ತಿದೆ ಎಂದು ಪ್ರಶಂಸಿಸಿದರು. ಇದೇ ವೇಳೆ ಕಳೆದ ಹತ್ತು ದಿನಗಳಿಂದ ತಾವು ತಮಿಳುನಾಡಿನಲ್ಲಿ ಪ್ರಚಾರ ನಡೆಸುತ್ತಿರುವುದಾಗಿಯೂ ತಿಳಿಸಿದರು.

ಒಟ್ಟಿನಲ್ಲಿ, ಶಿವಕುಮಾರ್ ಅವರು ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳ ಚುನಾವಣಾ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ತಮ್ಮ ಪ್ರಭಾವವನ್ನು ತೋರಿಸಲು ಮತ್ತು ಭವಿಷ್ಯದ ರಾಜಕೀಯ ಸಮೀಕರಣಗಳಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಲು ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೂ ದಿಗ್ಬಂಧನ ತೆರವುಗೊಳಿಸಲ್ಲ: ಡೊನಾಲ್ಡ್ ಟ್ರಂಪ್

IPL 2026: ಬಾಲಿವುಡ್ ನಟಿ ಪ್ರೀತಿಜಿಂಟಾ 'ಅಪ್ಪುಗೆ'ಯಿಂದ ಕುಣಿದು ಕುಪ್ಪಳಿಸಿದ ಅರ್ಶದೀಪ್ ಸಿಂಗ್! ಹೊಟ್ಟೆ ಉರಿದುಕೊಂಡ ಶಮಿ Video

ಭಾವನೆಗಳಿಗೆ ಸಮೀಕರಣವಿದೆಯೇ? ವಿಜ್ಞಾನ ಎದುರಿಸುತ್ತಿರುವ ದೊಡ್ಡ ಪ್ರಶ್ನೆ! (ವಿಜ್ಞಾನ ವಿಶೇಷ)

ವೀಸಾಗೂ ಬಂತು ಥಾಮಸ್ ಕುಕ್ ವಿಮಾ ರಕ್ಷಣೆ: ಅರ್ಜಿ ತಿರಸ್ಕಾರಗೊಂಡರೆ ಚಿಂತಿಸಬೇಕಿಲ್ಲ!

MGR ಆಗೋಕೆ ಹೊರಟಿದ್ದಾರೆ ಅದೆಲ್ಲಾ ಸಿನಿಮಾದಲ್ಲಷ್ಟೇ ಸಾಧ್ಯ, ಇಲ್ಲಿ ನಡೆಯಲ್ಲ: ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

SCROLL FOR NEXT