ನಿಖಿಲ್ ಕುಮಾರಸ್ವಾಮಿ ಮತ್ತು ಹರೀಶ್ ಗೌಡ 
ರಾಜಕೀಯ

ಮುಂದೊಂದು ದಿನ ನಿಖಿಲ್ CM ಆಗೇ ಆಗ್ತಾರೆ: ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ; G.D ಹರೀಶ್ ಗೌಡ

ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.

ಮೈಸೂರು: ಮೂರು ಚುನಾವಣೆಯಲ್ಲಿ ಸೋತಿದ್ದರೂ ನಿಖಿಲ್ ಅಧಿಕಾರಕ್ಕೆ ಅಂಟಿಕೊಂಡಿಲ್ಲ, ಪಕ್ಷದ ಬೆಳವಣಿಗೆಗಾಗಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಕೂಡ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಶಾಸಕೆ ಜಿ.ಡಿ ಹರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.

ಇಂದಿನ ಕಾರ್ಯಕ್ರಮದ ಮೂಲಕ ಜೆಡಿಎಸ್ ತನ್ನ ಶಕ್ತಿಯನ್ನು ತೋರಿಸಿದೆ. 2028ರ ವೇಳೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಆಶಯ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದ ಅವರು, ಪಕ್ಷವನ್ನು ಸಂಘಟಿಸಲು ನಿಖಿಲ್‌ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಅಮೆರಿಕದ ಅತಿಯಾದ ಬೇಡಿಕೆ-ದ್ವಂದ್ವ ನೀತಿ ವಿರುದ್ಧ ಇರಾನ್ ಗರಂ: 2ನೇ ಹಂತದ ಶಾಂತಿ ಮಾತುಕತೆಗೆ ನಕಾರ, ಸಂಘರ್ಷ ಉಲ್ಬಣ ಸಾಧ್ಯತೆ

ಹಡಗು ವಶಕ್ಕೆ ಪ್ರತೀಕಾರ: ಅಮೆರಿಕಾ ನೌಕಾಪಡೆ ಮೇಲೆ ಇರಾನ್ ಡ್ರೋನ್ ದಾಳಿ, ಸಂಘರ್ಷ ಉಲ್ಬಣ

'ಭಾರತೀಯ ಪೌರತ್ವ' ಪಡೆಯುವಂತೆ ಹಿರಿಯ ಆಟಗಾರನಿಂದ ಆಫರ್! ರಶೀದ್ ಖಾನ್ ಹೇಳಿದ್ದೇನು?

ಇನ್ಮುಂದೆ Mr Nice Guy ಇರೊಲ್ಲ.. ಕಿಲ್ಲಿಂಗ್ ಮಷಿನ್ ಕೊನೆಗೊಳ್ಳುವ ಸಮಯ ಬಂದಿದೆ: ಇರಾನ್ ಗೆ ಮತ್ತೆ Donald Trump ಬೆದರಿಕೆ!

SCROLL FOR NEXT