ಪ್ರಧಾನಿ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

2023ರಲ್ಲಿ 'ನಾರಿ ಶಕ್ತಿ ಬಿಲ್‌' ಅಂಗೀಕೃತವಾಗಿದ್ದರೂ, ಅಧಿಸೂಚನೆ ಹೊರಡಿಸಲಿಲ್ಲವೇಕೆ?: ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

2023ರಲ್ಲಿ ಎಲ್ಲಾ ಪಕ್ಷಗಳ ಸಹಮತದಿಂದ ಮಹಿಳಾ ಮೀಸಲಾತಿ ಮಸೂದೆ ಅಂಗೀಕೃತವಾಯಿತು. ಸ್ವತಃ ಮೋದಿ ಅವರು ಸಹ ಅದಕ್ಕೆ ಅಭಿನಂದನೆ ಸಲ್ಲಿಸಿದ್ದರು. ಆದರೆ, 30 ತಿಂಗಳುಗಳಾದರೂ ಜಾರಿಗೆ ತರಲಾಗಿಲ್ಲವೇಕೆ?

ಬೆಂಗಳೂರು: 2023 ರಲ್ಲಿ ಮಂಡನೆಯಾದ 'ನಾರಿ ಶಕ್ತಿ' ಬಿಲ್‌ಗೆ ಎಲ್ಲಾ ಪಕ್ಷಗಳು ಸಹಮತ ಸೂಚಿಸಿದ್ದವು. 30 ತಿಂಗಳು ಕಳೆದರೂ ಅಧಿಸೂಚನೆ ಹೊರಡಿಸಲಿಲ್ಲವೇಕೆ? ಇದನ್ನು ಜಾರಿಗೆ ತರಲು ಏಕೆ ಮುಂಚೂಣಿ ವಹಿಸಲಿಲ್ಲ?" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ಟೀಕಿಸಿದರು.

“2023ರಲ್ಲಿ ಎಲ್ಲಾ ಪಕ್ಷಗಳ ಸಹಮತದಿಂದ ಮಹಿಳಾ ಮೀಸಲಾತಿ ಮಸೂದೆ ಅಂಗೀಕೃತವಾಯಿತು. ಸ್ವತಃ ಮೋದಿ ಅವರು ಸಹ ಅದಕ್ಕೆ ಅಭಿನಂದನೆ ಸಲ್ಲಿಸಿದ್ದರು. ಆದರೆ, 30 ತಿಂಗಳುಗಳಾದರೂ ಜಾರಿಗೆ ತರಲಾಗಿಲ್ಲವೇಕೆ?” ಎಂದು ಪ್ರಶ್ನಿಸಿದರು.

ಕ್ಷೇತ್ರ ಮರುವಿಂಗಡಣೆ (delimitation) ಮಸೂದೆ ಸೋಲಿನ ವಿಚಾರ ಕುರಿತು ಮಾತನಾಡಿ, ಕ್ಷೇತ್ರ‌ ಮರುವಿಂಗಡಣೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಅನ್ಯಾಯ ಆಗಲಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಇದು ವಿರುದ್ಧವಾಗಿದೆ. ಹಾಗಾಗಿ ಇದನ್ನು ನಾವು ವಿರೋಧಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ. ಆದರೆ, ಮೋದಿ ಅವರ ಹೇಳಿಕೆಯನ್ನು ವಿರೋಧಿಸುತ್ತೇವೆ. 2010ರಲ್ಲಿ ನಾವು ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡನೆ ಮಾಡಿದ್ದೆವು. ಬಹುಮತ ಇಲ್ಲದ್ದರಿಂದ ಈ ವಿಧೆಯಕ ಅಂಗೀಕಾರ ಆಗಲಿಲ್ಲ. ಬಿಜೆಪಿಯವರ ತತ್ತ್ವ-ಸಿದ್ಧಾಂತ ಭಯಂಕರವಾಗಿದೆ ಎಂದು ಹೇಳಿದರು.

ಮಹಿಳೆಯರಿಗೆ ಕಾಂಗ್ರೆಸ್ ಸದಾ ಆದ್ಯತೆ ನೀಡಿದೆ. ನೆಹರು ಕಾಲದಿಂದಲೂ ಈ ಪ್ರಯತ್ನ ನಡೆದಿದೆ. ಸರೋಜಿನಿ ನಾಯ್ಡು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಂತಹ ನಾಯಕಿಯರು ಪಕ್ಷ ಮತ್ತು ದೇಶವನ್ನು ಮುನ್ನಡೆಸಿದ್ದಾರೆ. 2010 ರಲ್ಲಿ ರಾಜ್ಯಸಭೆಯಲ್ಲಿ ನಾವು ಈ ಬಿಲ್ ಮಂಡಿಸಿದ್ದೆವು, ಆದರೆ ಬಹುಮತದ ಕೊರತೆಯಿಂದ ಅದು ಸಾಧ್ಯವಾಗಲಿಲ್ಲ ಎಂದು ನೆನಪಿಸಿದರು.

ಬಿಜೆಪಿ ಮಹಿಳೆಯರನ್ನು ಗೌರವಿಸುವ ಪಕ್ಷವಲ್ಲ. ಮಹಿಳೆಯರನ್ನು ರಾಜಕೀಯ ಹಾಗೂ ಆರ್ಥಿಕ ಶಕ್ತಿಯಿಂದ ದೂರ ಇಡಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಅಮೆರಿಕದ ಅತಿಯಾದ ಬೇಡಿಕೆ-ದ್ವಂದ್ವ ನೀತಿ ವಿರುದ್ಧ ಇರಾನ್ ಗರಂ: 2ನೇ ಹಂತದ ಶಾಂತಿ ಮಾತುಕತೆಗೆ ನಕಾರ, ಸಂಘರ್ಷ ಉಲ್ಬಣ ಸಾಧ್ಯತೆ

ಹಡಗು ವಶಕ್ಕೆ ಪ್ರತೀಕಾರ: ಅಮೆರಿಕಾ ನೌಕಾಪಡೆ ಮೇಲೆ ಇರಾನ್ ಡ್ರೋನ್ ದಾಳಿ, ಸಂಘರ್ಷ ಉಲ್ಬಣ

ಶಾಸಕ ಸತೀಶ್ ಸೈಲ್ ಪುತ್ರಿಗೆ 'ಮಿಸ್ ಇಂಡಿಯಾ' ಕಿರೀಟ!

SCROLL FOR NEXT