ಗೃಹ ಸಚಿವ ಜಿ ಪರಮೇಶ್ವರ 
ರಾಜಕೀಯ

'ಇನ್ನು ಮುಂದೆ ಜೋಕ್ ಮಾಡೋದು ಕಷ್ಟ': ಗೃಹ ಸಚಿವ ಪರಮೇಶ್ವರ ಹೀಗೆ ಹೇಳಿದ್ಯಾಕೆ?

ಖಂಡಿತ, ಕಾನೂನಿನ ದೃಷ್ಟಿಯಲ್ಲಿ ಅದು ತಪ್ಪು, ಆದರೆ ನಾನು ಅದನ್ನು ಯಾವ ಸಂದರ್ಭದಲ್ಲಿ ಹೇಳಿದ್ದೇನೆ ಎಂಬುದು ಮುಖ್ಯ ಎಂದು ಪರಮೇಶ್ವರ ಇಂದು ವರದಿಗಾರರಿಗೆ ತಿಳಿಸಿದರು.

ಬೆಂಗಳೂರು: ಕಬಡ್ಡಿ ಪಂದ್ಯದ ಸಮಯದಲ್ಲಿ 500 ರೂ. ಬೆಟ್ ಕಟ್ಟಿ ಸೋತಿದ್ದೇನೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.

ನ್ಯಾಯಾಲಯದ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದ ಬಗ್ಗೆ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ ಅವರು, "ಇನ್ನು ಮುಂದೆ ನಾನು ಜೋಕ್ ಮಾಡೋದು ಕಷ್ಟ ಎಂದು ತೋರುತ್ತಿದೆ" ಎಂದರು.

ಪಂದ್ಯದ ಸಮಯದಲ್ಲಿ ನಾನು ಹೇಳಿದ ಮಾತು ಸಾಂದರ್ಭಿಕವಾಗಿತ್ತು ಮತ್ತು ಬೆಟ್ಟಿಂಗ್ ಅನ್ನು ಉತ್ತೇಜಿಸುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಸಚಿವರು ಹೇಳಿದರು.

"ಕಬಡ್ಡಿ ಪಂದ್ಯದ ಸಮಯದಲ್ಲಿ ನಾನು ಆಕಸ್ಮಿಕವಾಗಿ ಹಾಗೆ ಹೇಳಿದ್ದೆ. ಹಳ್ಳಿಯಲ್ಲಿ ನಾವು ಕೆಲವೊಮ್ಮೆ ಸಾಂದರ್ಭಿಕವಾಗಿ ಮಾತನಾಡುತ್ತೇವೆ. ಖಂಡಿತ, ಕಾನೂನಿನ ದೃಷ್ಟಿಯಲ್ಲಿ ಅದು ತಪ್ಪು, ಆದರೆ ನಾನು ಅದನ್ನು ಯಾವ ಸಂದರ್ಭದಲ್ಲಿ ಹೇಳಿದ್ದೇನೆ ಎಂಬುದು ಮುಖ್ಯ" ಎಂದು ಪರಮೇಶ್ವರ ಇಂದು ವರದಿಗಾರರಿಗೆ ತಿಳಿಸಿದರು.

"ನಾನು ಆಟದ ಮೇಲೆ ಬೆಟ್ಟಿಂಗ್ ಮಾಡುವಂತೆ ಜನರಿಗೆ ಹೇಳಿದ್ದರೆ ಮತ್ತು ಬೆಟ್ಟಿಂಗ್ ಅನ್ನು ಉತ್ತೇಜಿಸಿದ್ದರೆ, ಅದು ತಪ್ಪು" ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

"ಆದರೆ ನಾನು ಪ್ರಮುಖ ಹುದ್ದೆಯಲ್ಲಿರುವ ವ್ಯಕ್ತಿಯಾಗಿ ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತೇಜಿಸುತ್ತಿದ್ದೇನೆ ಎಂದು ಹೇಳುವುದು ಶುದ್ಧ ಸುಳ್ಳು. ನೀವು ಅದನ್ನು ಹೇಗೆ ಗ್ರಹಿಸುತ್ತೀರಿ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿದೆ" ಎಂದರು.

"ನನಗೆ ತಮಾಷೆ ಮಾಡಲು ಸಹ ಅವಕಾಶ ಇಲ್ಲ ಎಂದು ತೋರುತ್ತಿದೆ. ಆದರೆ ನಾನು ಕಾನೂನನ್ನು ಗೌರವಿಸುತ್ತೇನೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸುವ ಖಾತೆಯನ್ನು ಹೊಂದಿರುವಾಗ ಕಾನೂನನ್ನು ಗೌರವಿಸಬೇಕು" ಎಂದು ಪರಮೇಶ್ವರ ಹೇಳಿದರು.

ನ್ಯಾಯಾಲಯಕ್ಕೆ ಆ ಸಂದರ್ಭವನ್ನು ಏಕೆ ವಿವರಿಸಲು ಸಾಧ್ಯವಾಗಿಲ್ಲ ಎಂದು ವರದಿಗಾರರು ಕೇಳಿದಾಗ, ಗೃಹ ಸಚಿವರು ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದರು.

"ನನಗೆ ನೋಟಿಸ್ ಬಂದಿದ್ದರೆ ವಿಷಯವನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ನಾನು ನ್ಯಾಯಾಲಯಕ್ಕೆ ಮನವಿ ಮಾಡುತ್ತಿದ್ದೆ. ಆದರೆ ಇದ್ದಕ್ಕಿದ್ದಂತೆ, ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಲಾಗಿದೆ" ಎಂದರು.

ತುಮಕೂರಿನಲ್ಲಿ ಆಯೋಜನೆಯಾಗಿದ್ದ ಕಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್ ನಡೆದಿರುವ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಸಚಿವರ ಈ ಹೇಳಿಕೆಯನ್ನು ಆಕ್ಷೇಪಿಸಿ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೋರಿ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ

ತುಮಕೂರಿನ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

‘ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಮತ್ತೆ ಪ್ರತಿಭಟನೆ!’: ಕೇಂದ್ರಕ್ಕೆ ಬಾಬಾ ರಾಮದೇವ್ ಖಡಕ್ ಎಚ್ಚರಿಕೆ

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: 7 ಯಾತ್ರಿಕರು ಸಜೀವ ದಹನ