ಗೃಹ ಸಚಿವ ಪರಮೇಶ್ವರ್ 
ರಾಜಕೀಯ

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ಗೊತ್ತಿಲ್ಲ, ತಮಾಷೆಗೆ ಮಾಡಿದ್ದು ಎಂದು ತೇಪೆ ಹಚ್ಚುವ ಬದಲು ರಾಜೀನಾಮೆ ನೀಡಿ ಗೌರವ ಉಳಿಸಿಕೊಳ್ಳಿ..!

ಗೃಹ ಸಚಿವರ ವಿರುದ್ಧ FIR ದಾಖಲಾಗಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಗೊತ್ತಿಲ್ಲ, ಆಕಸ್ಮಿಕ, ಮಕ್ಕಳಾಟ, ತಮಾಷೆಗೆ ಮಾಡಿದ್ದು ಎಂದು ತೇಪೆ ಹಚ್ಚುವ ಬದಲು ರಾಜೀನಾಮೆ ನೀಡಿ ಗೌರವ ಉಳಿಸಿಕೊಳ್ಳಲಿ.

ಬೆಂಗಳೂರು: ಕಬಡ್ಡಿ ಪಂದ್ಯದಲ್ಲಿ ಬೆಟ್ಟಿಂಗ್ ಆರೋಪ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ.

42ನೇ ACJM ನ್ಯಾಯಾಲಯವು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಪೊಲೀಸರಿಗೆ ಡಾ. ಪರಮೇಶ್ವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಬಿಜೆಪಿ, “ಸಾಮಾನ್ಯ ಜನರು ಬೆಟ್ಟಿಂಗ್ ಮಾಡಿದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆದರೆ ಗೃಹ ಸಚಿವರು ಸಾರ್ವಜನಿಕವಾಗಿ ಬೆಟ್ಟಿಂಗ್ ಒಪ್ಪಿಕೊಂಡಿದ್ದರೂ ಏಕೆ ಬಂಧನವಾಗಿಲ್ಲ?” ಎಂದು ಪ್ರಶ್ನಿಸಿದೆ.

ಬೇಲಿಯೇ ಎದ್ದು ಹೊಲ ಮೆಯ್ಯುವ ರೀತಿ, ಕರ್ನಾಟಕದ ಘನತೆವೆತ್ತ ಗೃಹ ಸಚಿವ ಪರಮೇಶ್ವರ್ ಅವರು ಬೆಟ್ಟಿಂಗ್‌ನಲ್ಲಿ ಭಾಗಿಯಾಗಿರುವುದು ಅಕ್ಷಮ್ಯ ಅಪರಾಧ. ಗೃಹ ಸಚಿವರ ವಿರುದ್ಧ FIR ದಾಖಲಾಗಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಗೊತ್ತಿಲ್ಲ, ಆಕಸ್ಮಿಕ, ಮಕ್ಕಳಾಟ, ತಮಾಷೆಗೆ ಮಾಡಿದ್ದು ಎಂದು ತೇಪೆ ಹಚ್ಚುವ ಬದಲು ರಾಜೀನಾಮೆ ನೀಡಿ ಗೌರವ ಉಳಿಸಿಕೊಳ್ಳಲಿ ಎಂದು ಆಗ್ರಹಿಸಿದೆ.

ರಾಜ್ಯ ಜೆಡಿಎಸ್ ಕೂಡ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದೆ. ಬೆಟ್ಟಿಂಗ್ ದಂಧೆಯನ್ನು ಮಟ್ಟಹಾಕಬೇಕಾದ ಗೃಹ ಸಚಿವ ಪರಮೇಶ್ವರ್ ಈ ರೀತಿ ವರ್ತಿಸಿದರೆ ಜನಸಾಮಾನ್ಯರಿಗೆ ಯಾವ ಸಂದೇಶ ನೀಡಿದಂತಾಗುತ್ತದೆ? ಎಂದು ಪ್ರಶ್ನಿಸಿದೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರೇ ಬೆಟ್ಟಿಂಗ್‌ ಕಟ್ಟುವುದು , ಅದಕ್ಕೆ ಪ್ರೇರೇಪಿಸುವುದು ದುರಂತ. ಕಬ್ಬಡ್ಡಿ ಪಂದ್ಯಾವಳಿ ವೇಳೆ ಜೂಜಾಟವಾಡಿದ್ದ ಸಚಿವ ಪರಮೇಶ್ವರ್‌ ವಿರುದ್ಧ #FIR ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶ ನೀಡಿರುವುದು ಸರಿಯಾಗಿದೆ. ಇನ್ನಾದರೂ ಸಚಿವರು ತಮ್ಮ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ ಎಂದು ಒತ್ತಾಯಿಸಿದೆ

Tamilnadu & West Bengal Election 2026 Live Updates | 9 ಗಂಟೆ ವೇಳೆಗೆ ತಮಿಳುನಾಡಿನಲ್ಲಿ ಶೇ. 17.69, ಪಶ್ಚಿಮ ಬಂಗಾಳದಲ್ಲಿ ಶೇ.18.76ರಷ್ಟು ಮತದಾನ

US-Iran war:: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!

ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ, ಪತ್ರಕರ್ತೆ ಸೇರಿ ಐವರ ಸಾವು..!

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್

SCROLL FOR NEXT