ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ 'ಅಪಾಯಕಾರಿ ಆದ್ಯತೆ' ಬಹಿರಂಗ; ಸ್ವಯಂ ಶರಣಾಗತಿಯ ಲಜ್ಜೆಗೆಟ್ಟ ಕೃತ್ಯ!

ಸಾಮಾಜಿಕ ಮಾಧ್ಯಮ 'ಎಕ್ಸ್' ನಲ್ಲಿ ಆರ್‌ಎಸ್‌ಎಸ್ ನಾಯಕ ರಾಮ್ ಮಾಧವ್ ಅವರ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ "ಕೈಗೊಂಬೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅವರು ಟೀಕಿಸಿದ್ದು, ಹಿರಿಯ ಬಿಜೆಪಿ ನಾಯಕ ರಾಮ್ ಮಾಧವ್ ಅವರು ಅಮೆರಿಕದಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮೋದಿ ಸರ್ಕಾರದ "ಅಪಾಯಕಾರಿ" ಆದ್ಯತೆಗಳನ್ನು "ಬಹಿರಂಗಪಡಿಸಿದೆ" ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ 'ಎಕ್ಸ್' ನಲ್ಲಿ ಆರ್‌ಎಸ್‌ಎಸ್ ನಾಯಕ ರಾಮ್ ಮಾಧವ್ ಅವರ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಅದರಲ್ಲಿ ಇರಾನ್ ಮತ್ತು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲು ಭಾರತ ಒಪ್ಪಿಕೊಂಡಿದೆ ಮತ್ತು ಅಮೆರಿಕ ವಿಧಿಸಿದ ಹೆಚ್ಚಿನ ಸುಂಕಗಳಿಗೆ ಒಪ್ಪಿಗಿ ಸೂಚಿಸಿದೆ ಎಂದು ಮಾಧವ್ ಹೇಳಿದ್ದಾರೆ.

ಅಮೆರಿಕದಲ್ಲಿ ಮಾಧವ್ ನೀಡಿದ ಹೇಳಿಕೆಗಳು "ಮೋದಿ ಸರ್ಕಾರದ ಅಪಾಯಕಾರಿ ಆದ್ಯತೆಗಳನ್ನು" ಬಹಿರಂಗಪಡಿಸಿದೆ ಎಂದು ಅವರು ಹೇಳಿದ್ದಾರೆ.

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರೊಂದಿಗೆ ಮಾಧವ್ ಅಮೆರಿಕಕ್ಕೆ ಭೇಟಿ ನೀಡಿದ್ದು, ವಾಷಿಂಗ್ಟನ್‌ನ ಹಡ್ಸನ್ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಇವು ರಾಜತಾಂತ್ರಿಕ ನಿರ್ಧಾರಗಳಲ್ಲ - ಅವು "ಸ್ವಯಂ ಶರಣಾಗತಿಯ ಲಜ್ಜೆಗೆಟ್ಟ ಕೃತ್ಯಗಳು" ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

"ರಾಹುಲ್ ಗಾಂಧಿ ಹೇಳಿದಂತೆ, ಇದು 'ರಾಷ್ಟ್ರೀಯ ಶರಣಾಗತಿ ಸಂಘ'ದ ಮಾದರಿ. ರಾಷ್ಟ್ರೀಯತೆ ಒಂದು ಮುಖವಾಡ. ದಾಸ್ಯವೇ ವಾಸ್ತವ" ಎಂದು ಟೀಕಿಸಿದ್ದಾರೆ.

"ದುರದೃಷ್ಟವಶಾತ್, ಈ ರಾಜಿ ನಾಯಕತ್ವಕ್ಕೆ ಭಾರತ ಬೆಲೆ ತೆರುತ್ತಿದೆ" ಎಂದು ಸಿಎಂ ಹೇಳಿದ್ದಾರೆ.

ಆದಾಗ್ಯೂ, ರಾಮ್ ಮಾಧವ್ ನಂತರ ಕ್ಷಮೆಯಾಚಿಸಿದ್ದು, ಅವರು ಹೇಳಿದ್ದು "ವಾಸ್ತವಿಕವಾಗಿ ತಪ್ಪು". ಏಕೆಂದರೆ ಭಾರತ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಒಪ್ಪಿಲ್ಲ ಮತ್ತು ಟ್ರಂಪ್ ಆಡಳಿತ ಶೇಕಡಾ 50 ರಷ್ಟು ಸುಂಕ ವಿಧಿಸುವುದನ್ನು "ತೀವ್ರವಾಗಿ ಪ್ರತಿಭಟಿಸಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ