ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ 'ಎಸ್ಕೇಪ್ ಫಾರ್ಮುಲಾ' ಅನುಸರಣೆ: ಆರ್.ಅಶೋಕ್ ಕಿಡಿ

ಒಂದು ಕಡೆ ಉದ್ಯೋಗಕ್ಕಾಗಿ ಯುವಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟ ಸಮುದಾಯಗಳು ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಈ ಎರಡೂ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ರೀತಿಯ ನಾಟಕ ಮಾಡುತ್ತಿದೆ.

ಬೆಂಗಳೂರು: ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಎಸ್ಕೇಪ್ ಫಾರ್ಮುಲಾ’ ಅನುಸರಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಈ ಕ್ರಮದಿಂದ ಯಾವುದೇ ಸಮುದಾಯಕ್ಕೂ ಲಾಭವಾಗುವುದಿಲ್ಲ ಎಂದು ಟೀಕಿಸಿದರು.

ಒಂದು ಕಡೆ ಉದ್ಯೋಗಕ್ಕಾಗಿ ಯುವಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟ ಸಮುದಾಯಗಳು ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಈ ಎರಡೂ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ರೀತಿಯ ನಾಟಕ ಮಾಡುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 17 ಶೇಕಡಾ ಮೀಸಲಾತಿ ನೀಡಲಾಗಿತ್ತು. ಆದರೆ, ಈಗ ಅದನ್ನು 15 ಶೇಕಡಾಗೆ ಇಳಿಸಲಾಗಿದೆ. ಇದನ್ನು ನ್ಯಾಯಾಲಯದಲ್ಲಿ ಸಮರ್ಥಿಸುವ ಬದಲು ಸರ್ಕಾರ ‘ಎಸ್ಕೇಪ್ ಫಾರ್ಮುಲಾ’ ಅನುಸರಿಸಿದೆ ಎಂದು ಆರೋಪಿಸಿದರು. ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ನ್ಯಾಯ ದೊರಕಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದೇ ವೇಳೆ, 52 ಜಾತಿಗಳ ಪ್ರತಿನಿಧಿಗಳು ಮತ್ತು ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸದೇ ಸರ್ಕಾರ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಎಲ್ಲ ಸಮುದಾಯಗಳ ಅಭಿಪ್ರಾಯ ಪಡೆದು ಬಳಿಕವೇ ಈ ರೀತಿಯ ನಿರ್ಧಾರ ಕೈಗೊಳ್ಳಬೇಕಿತ್ತು ಎಂದು ಒತ್ತಾಯಿಸಿದರು.

ಅಲ್ಲದೆ, ಒಳ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ ಅಶೋಕ್ ಅವರು, ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಒಗ್ಗೂಡಬಹುದು, ಆದರೆ ಸಮುದಾಯದ ಜನರು ನ್ಯಾಯಕ್ಕಾಗಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT