ಆರ್ ಅಶೋಕ್  
ರಾಜಕೀಯ

ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎನ್ನುವ ಸ್ವಾರ್ಥಿಗಳು CM ಆಗಲು ಹೊರಟಿರುವುದು ರಾಜ್ಯದ ದುರಂತ!

ದೇಶದ ಭದ್ರತೆಗಿಂತ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್‌ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್‌ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನು ಬಿಡಬೇಕಿದೆ.

ಬೆಂಗಳೂರು: ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವ ಸ್ವಾರ್ಥಿಗಳು ನಾಡಿನ ಸಿಎಂ ಆಗಲು ಹೊರಟಿರುವುದು ಕರ್ನಾಟಕದ ದುರಂತ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಟ್ಟೀಟ್ ಮಾಡಿರುವ ಅವರು. ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ 'ಡೈವರ್ಶನ್ ಪಾಲಿಟಿಕ್ಸ್' ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ ಎಂದಿದ್ದಾರೆ.

ಈ ಪ್ರಕರಣದ ಉಗ್ರ ಶಾರೀಕ್‌ನ ಕೃತ್ಯ ಸಾಬೀತಾಗಿದ್ದು, NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರದಲ್ಲೂ ಕೇವಲ ತುಷ್ಟೀಕರಣ ಮತ್ತು ಓಲೈಕೆ ರಾಜಕಾರಣ ಮಾಡುವ ಕರ್ನಾಟಕ ಕಾಂಗ್ರೆಸ್ ನೈಜ ಮುಖವಾಡ ಕಳಚಿದೆ ಎಂದಿದ್ದಾರೆ.

ದೇಶದ ಭದ್ರತೆಗಿಂತ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್‌ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್‌ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನು ಬಿಡಬೇಕಿದೆ ಎಂದು ಅಶೋಕ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?