ಶಾಸಕ ಇಕ್ಬಾಲ್ ಹುಸೇನ್ 
ರಾಜಕೀಯ

ಮೇ 15ಕ್ಕೆ ಡಿ.ಕೆ ಶಿವಕುಮಾರ್ ಸಿಎಂ ಆಗೋದು ಗ್ಯಾರಂಟಿ: ಹೊಸ ಡೇಟ್ ಕೊಟ್ಟ ಶಾಸಕ ಇಕ್ಬಾಲ್ ಹುಸೇನ್!

ಈಗ ಹೇಳ್ತಿರೋದು ಅಂತಿಮ ದಿನಾಂಕವಾಗಿದ್ದು, ಮೇ 15 ರಂದು ನಮ್ಮ ನಾಯಕರ ಜನ್ಮ ದಿನವಿದ್ದು, ಅಂದು ಮುಖ್ಯಮಂತ್ರಿ ಹುದ್ದೆಯ ಗಿಫ್ಟ್ ಸಿಗಲಿದೆ ಎಂದರು.

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತು ತೀವ್ರ ಚರ್ಚೆಯಾಗುತ್ತಿದ್ದು, ಮೇ 15ಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೋದು ಗ್ಯಾರಂಟಿ ಎಂದು ಅವರ ಆಪ್ತ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಂಗಳವಾರ ಪುನರುಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಬೆಳವಣಿಗೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ನಾನು ಎರಡ್ಮೂರು ದಿನಾಂಕ ಹೇಳಿದ್ದೆ. ವಿವಿಧ ಕಾರಣಕ್ಕೆ ಆಗ ಆಗಲಿಲ್ಲ. ಈಗ ಹೇಳ್ತಿರೋದು ಅಂತಿಮ ದಿನಾಂಕವಾಗಿದ್ದು, ಮೇ 15 ರಂದು ನಮ್ಮ ನಾಯಕರ ಜನ್ಮ ದಿನವಿದ್ದು, ಅಂದು ಮುಖ್ಯಮಂತ್ರಿ ಹುದ್ದೆಯ ಗಿಫ್ಟ್ ಸಿಗಲಿದೆ ಎಂದರು.

ಈ ಅವಧಿಯಲ್ಲಿಯೇ ಅವರು ಮುಖ್ಯಮಂತ್ರಿ ಆಗಬೇಕು ಮತ್ತು ಅವರ ನಾಯಕತ್ವದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳಾಗಬೇಕು ಎಂಬುದು ಎಲ್ಲರ ಬಯಕೆಯಾಗಿದೆ ಎಂದು ಅವರು ಹೇಳಿದರು.

ಇದೇ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಡಾ.ಎಚ್.ಸಿ. ಮಹದೇವಪ್ಪ ಅವರು ಪಕ್ಷದ ವರಿಷ್ಠರನ್ನು ಭೇಟಿ ಕುರಿತು ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಇದರಲ್ಲಿ ಯಾವುದೇ ತಪ್ಪಿಲ್ಲ. ತಮ್ಮ ಕಷ್ಟ ಸುಖದ ಜೊತೆಗೆ ರಾಜ್ಯದ ಕೆಲ ವಿಷಯಗಳ ಕುರಿತು ಚರ್ಚಿಸಲು ಇಬ್ಬರೂ ದೆಹಲಿಗೆ ಹೋಗಿದ್ದಾರೆ ಎಂದರು.

ಸಿದ್ದರಾಮಯ್ಯ ಅವರನ್ನೇ ಮುಂದುವರೆಸುವಂತೆ ಹೈಕಮಾಂಡ್ ಗೆ ಮನವಿ ಮಾಡುತ್ತೇವೆ ಎಂಬ ಶಾಸಕ ಕೆ.ಎನ್. ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಮನಗರ ಶಾಸಕರು, ರಾಜಣ್ಣ ಅವರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಅಭಿಪ್ರಾಯ ಬೇಧ ಸಹಜ. ಜಾತಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಗುಂಪುಗಾರಿಕೆ ಇದೆ. ರಾಜಕೀಯವೂ ಅದರಿಂದ ಹೊರತಾಗಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RSS ನೋಂದಣಿ ಬಗ್ಗೆ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ: ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಲೆಬನಾನ್, ಸಿರಿಯಾ, ಗಾಜಾದಲ್ಲಿನ IDF ಸೇನೆ ಹಿಂದಕ್ಕೆ ಕರೆಸಲ್ಲ; America-Iran ಒಪ್ಪಂದ ನಮಗೆ ಅನ್ವಯವಾಗಲ್ಲ: ಇಸ್ರೇಲ್ ಎಚ್ಚರಿಕೆ

ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?

ಜಿನೀವಾದಲ್ಲಿ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಸಮಾರಂಭ ಆಯೋಜಿಸಿದ ಪಾಕ್; ಐತಿಹಾಸಿಕ ಮೈಲಿಗಲ್ಲು ಎಂದ ಶೆಹಬಾಜ್!

ಮಧ್ಯಪ್ರಾಚ್ಯ ಸಂಘರ್ಷ ಅಂತ್ಯ: ಅಮೆರಿಕ-ಇರಾನ್ ಒಪ್ಪಂದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ; ಹಾರ್ಮುಜ್ ಜಲಸಂಧಿ ಪುನರಾರಂಭಕ್ಕೆ ಸಂತಸ

SCROLL FOR NEXT