ಸತೀಶ್ ಜಾರಕಿಹೊಳಿ  
ರಾಜಕೀಯ

ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ ಎಳೆಯಿರಿ: ಹೈಕಮಾಂಡ್'ಗೆ ಸತೀಶ್ ಜಾರಕಿಹೊಳಿ ಆಗ್ರಹ

ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿಗಳಿಗೆ ಸ್ಪಷ್ಟನೆ ನೀಡುವಂತೆ ವಿನಂತಿಸಿದರು.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹರಿದಾಡುತ್ತಿರುವ ಊಹಾಪೋಹಗಳ ಕುರಿತು ಮಧ್ಯಪ್ರವೇಶಿರಿ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆಯಬೇಕೆಂದು ಸಚಿವ ಸತೀಶ್ ಜಾರಕಿಹೊಳಿಯವರು ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿಗಳಿಗೆ ಸ್ಪಷ್ಟನೆ ನೀಡುವಂತೆ ವಿನಂತಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹರಿದಾಡುತ್ತಿರುವ ಸುದ್ದಿಗಳು ಪಕ್ಷ ಮತ್ತು ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡುವುದು ಅಗತ್ಯ” ಎಂದು ಹೇಳಿದರು.

ಇಂತಹ ಅನಿಶ್ಚಿತತೆ ಮುಂದುವರಿದರೆ ಆಡಳಿತದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನಾಗಿ ಪರಿಗಣಿಸಲ್ಪಡುವ ಜಾರಕಿಹೊಳಿ, ಈ ಹಿಂದೆ ಕೂಡ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಮನವಿ ಮಾಡಿದ್ದರು.

ಇದೇ ವೇಳೆ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಇತ್ತೀಚೆಗೆ ಖರ್ಗೆ ಅವರನ್ನು ಭೇಟಿಯಾಗಿ ದೀರ್ಘ ಚರ್ಚೆ ನಡೆಸಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ವಿಚಾರ ಚರ್ಚೆ ತಾರಕ್ಕೇರುವಂತೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್